AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಾಗೆ ಮತ ಹಾಕಿದರೆ ಏನಾಗುತ್ತದೆ, ನಿಯಮಗಳು ಹೇಳುವುದೇನು? ಇಲ್ಲಿದೆ ಮಾಹಿತಿ

ಭಾರತೀಯ ಚುನಾವಣಾ ಆಯೋಗ ಮತದಾರರಿಗೆ ನೋಟಾ ಎಂಬ ಆಯ್ಕೆಯೊಂದನ್ನು ನೀಡಿದೆ. ರಾಜಕೀಯ ಪಕ್ಷಗಳು ಕಣಕ್ಕಿಳಿಸಿದ ಅಥವಾ ಪಕ್ಷೇತರವಾಗಿ ಚುನಾವಣೆ ಸ್ಪರ್ಧಿಸುವ ಯಾವೊಬ್ಬ ಅಭ್ಯರ್ಥಿ ಕೂಡ ಇಷ್ಟವಿಲ್ಲದಲ್ಲಿ ಮತದಾರರು ನೋಟಾಗೆ ಮತ ಚಲಾಯಿಸಬಹುದಾಗಿದೆ. ಇದರ ಪ್ರಯೋಜನವೇನು? ಯಾಕಾಗಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ನೋಟಾಗೆ ಮತ ಹಾಕಿದರೆ ಏನಾಗುತ್ತದೆ, ನಿಯಮಗಳು ಹೇಳುವುದೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Apr 08, 2024 | 9:53 AM

ಲೋಕಸಭೆ ಚುನಾವಣೆಯ (Lok sabha elections) ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಅಭ್ಯರ್ಥಿಗಳ ಘೋಷಣೆ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲ ರಾಜಕೀಯ ಪಕ್ಷಗಳೂ ಬಿರುಸಿನಿಂದ ಪ್ರಚಾರ ನಡೆಸುತ್ತಿವೆ. ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ (ಇದು ರಾಜ್ಯದ ಮೊದಲ ಹಂತ) ಮತದಾನ ನಡೆಯಲಿದೆ. ಒಂದು ವೇಳೆ ರಾಜಕೀಯ ಪಕ್ಷಗಳು ಕಣಕ್ಕಿಳಿಸಿರುವ ಅಥವಾ ಪಕ್ಷೇತರ ಸೇರಿದಂತೆ ಯಾವುದೇ ಅಭ್ಯರ್ಥಿಗಳು ಮತದಾರನಿಗೆ ಇಷ್ಟವಾಗದಿದ್ದರೆ ಏನು ಮಾಡಬಹುದು? ಇದಕ್ಕಾಗಿ ಚುನಾವಣಾ ಆಯೋಗ “ನೋಟಾ” (NOTA / NONE OF THE ABOVE) (ಈ ಮೇಲಿನ ಯಾವುದೂ / ಯಾರೂ ಅಲ್ಲ) ಎಂಬ ಆಯ್ಕೆಯನ್ನು ಮತದಾರರಿಗೆ ನೀಡಿದೆ. ಒಂದು ವೇಳೆ ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಪಡೆದರೆ ಏನಾಗಬಹುದು? ಮಾಹಿತಿ ಇಲ್ಲಿದೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ 2013ರಲ್ಲಿ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನೋಟಾ ಆಯ್ಕೆಯನ್ನು ಮತದಾರರಿಗೆ ನೀಡಲಾಯಿತು. ನಂತರ ನಡೆದ ಎಲ್ಲ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಈ ಆಯ್ಕೆ ನೀಡಲಾಗಿದೆ. ವಿದ್ಯುನ್ಮಾನ ಮತ ಯಂತ್ರ ಅಥವಾ ಇವಿಎಂ ನ ಕೊನೆಯಲ್ಲಿ ಈ ಆಯ್ಕೆ ಇರುತ್ತದೆ.

ನೋಟಾ ಮಹತ್ವವೇನು?

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಬಹಳ ಮುಖ್ಯವಾದ ಅಂಶ. ಒಂದು ವೇಳೆ ಕಣದಲ್ಲಿರುವ ಯಾವ ಅಭ್ಯರ್ಥಿಗಳು ಕೂಡ ಮತದಾರರಿಗೆ ಇಷ್ಟವಿಲ್ಲದಿದ್ದರೆ ಅವರು ಮತದಾನ ಪ್ರಕ್ರಿಯೆಯಿಂದ ದೂರವಿರಬಾರದು ಎಂಬ ಕಾರಣಕ್ಕಾಗಿ ನೋಟಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಯಾವ ಅಭ್ಯರ್ಥಿ ಕೂಡ ಇಷ್ಟವಿಲ್ಲದವರು ಈ ಆಯ್ಕೆಗೆ ಮತ ನೀಡಬಹುದಾಗಿದೆ.

ರಾಜಕೀಯ ಪಕ್ಷಗಳು ಕಣಕ್ಕಿಳಿಸಿರುವ ಅಭ್ಯರ್ಥಿಗಳ ಬಗ್ಗೆ ಜನರಿಗೆ ತಮ್ಮ ಅಸಮಾಧಾನವನ್ನು ತೋಡಿಕೊಳ್ಳಲು ಇದೊಂದು ಉತ್ತಮ ಆಯ್ಕೆಯಾಗಿದೆ. ಈ ಆಯ್ಕೆಯನ್ನು ಬಳಸಿಕೊಳ್ಳುವುದರ ಮೂಲಕ ತಮ್ಮ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಯಾವೊಬ್ಬ ಅಭ್ಯರ್ಥಿ ಕೂಡ ಸಮರ್ಥನಲ್ಲ ಎಂಬ ಸಂದೇಶವನ್ನು ಆ ಪಕ್ಷಗಳಿಗೆ ಮತದಾರ ನೀಡಬಹುದಾಗಿದೆ.

ಅಭ್ಯರ್ಥಿಗಳಿಗಿಂತ ಹೆಚ್ಚು ಮತ ನೋಟಾ ಪಡೆದರೆ?

ನೋಟಾ ಆಯ್ಕೆಯಲ್ಲಿ ಕೂಡ ಕಾಲಕಾಲಕ್ಕೆ ಬದಲಾವಣೆಗಳಾಗಿವೆ. ಆರಂಭದಲ್ಲಿ ನೋಟಾಗೆ ನೀಡುವ ಮತವನ್ನು ಅಕ್ರಮ ಮತಗಳೆಂದು ಪರಿಗಣಿಸಲಾಗುತ್ತಿತ್ತು. ನಂತರದಲ್ಲಿ ನೋಟಾಗೆ ಗರಿಷ್ಠ ಮತ ಚಲಾವಣೆಯಾದರೆ ಅದಕ್ಕಿಂತ ಕಡಿಮೆ ಮತ ಪಡೆದ, ಅಂದರೆ ಎರಡನೇ ಸ್ಥಾನದಲ್ಲಿರುವ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತಿತ್ತು. 2018 ರಲ್ಲಿ ದೇಶದಲ್ಲಿ ಮೊದಲ ಬಾರಿಗೆ ನೋಟಾಗೆ ಸಹ ಅಭ್ಯರ್ಥಿಗೆ ಸಮನಾದ ಸ್ಥಾನಮಾನವನ್ನು ನೀಡಲಾಯಿತು. 2018 ರ ಡಿಸೆಂಬರ್‌ನಲ್ಲಿ ಹರಿಯಾಣದ ಐದು ಜಿಲ್ಲೆಗಳಲ್ಲಿ ನಡೆದ ಮುನ್ಸಿಪಲ್ ಚುನಾವಣೆಯಲ್ಲಿ ನೋಟಾ ಅತಿ ಹೆಚ್ಚು ಮತಗಳನ್ನು ಪಡೆದಿತ್ತು. ಅಂತಹ ಪರಿಸ್ಥಿತಿಯಲ್ಲಿ, ಎಲ್ಲಾ ಅಭ್ಯರ್ಥಿಗಳನ್ನು ಅನರ್ಹರು ಎಂದು ಘೋಷಿಸಲಾಯಿತು. ಇದಾದ ಬಳಿಕ ಚುನಾವಣಾ ಆಯೋಗ ಮರು ಚುನಾವಣೆ ನಡೆಸಲು ನಿರ್ಧರಿಸಿತ್ತು.

ಇದನ್ನೂ ಓದಿ: ಲೋಕಸಭೆ ಚುನಾವಣೆ, ಕರ್ನಾಟಕದಲ್ಲಿ ಮನೆಯಿಂದಲೇ ಮತದಾನ ಮಾಡಲು 12 ಲಕ್ಷ ಮಂದಿಗೆ ಅವಕಾಶ

ಮರು ಚುನಾವಣೆಯಲ್ಲಿಯೂ ನೋಟಾ ಗೆದ್ದರೆ ಏನಾಗಬಹುದು?

ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗದ 2018 ರ ಆದೇಶದಲ್ಲಿ, ನೋಟಾಗೆ ‘ಕಾಲ್ಪನಿಕ ಚುನಾವಣಾ ಅಭ್ಯರ್ಥಿ’ ಸ್ಥಾನಮಾನವನ್ನು ನೀಡಲಾಗಿದೆ. ನೋಟಾ ಎಲ್ಲಕ್ಕಿಂತ ಹೆಚ್ಚು ಮತಗಳನ್ನು ಪಡೆದರೆ ಮತ್ತೆ ಚುನಾವಣೆ ನಡೆಯಲಿದೆ. ಆದರೆ ಚುನಾವಣೆಯ ನಂತರವೂ ಯಾವುದೇ ಅಭ್ಯರ್ಥಿ ನೋಟಾಕ್ಕಿಂತ ಹೆಚ್ಚಿನ ಮತಗಳನ್ನು ಪಡೆಯಲು ಸಾಧ್ಯವಾಗದಿದ್ದರೆ, ಮೂರನೇ ಬಾರಿಗೆ ಚುನಾವಣೆ ನಡೆಯುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೋಟಾ ನಂತರ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ. ಆದೇಶದ ಪ್ರಕಾರ, ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗದ ಈ ನಿಯಮಗಳು ಆ ರಾಜ್ಯದಲ್ಲಿನ ಚುನಾವಣೆಗಳಿಗೆ ಸೀಮಿತವಾಗಿದೆ.

ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Mon, 8 April 24

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್