AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ 400 ಸ್ಥಾನಗಳ ಗಡಿ ದಾಟಲಿದೆ, ಈ ಘೋಷಣೆಯ ಒಳಾರ್ಥ ತಿಳಿಸಿದ ಅಮಿತ್ ಶಾ

Amit Shah Interview: ಗೃಹ ಸಚಿವ ಅಮಿತ್ ಶಾ, ಪಕ್ಷದ ನೀತಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾತನಾಡುವಾಗ, ಪ್ರತಿಪಕ್ಷಗಳ ಆರೋಪಗಳ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಘೋಷಣೆ ಕುರಿತು ಮಾತನಾಡಿದ ಅವರು, ಇದು ಘೋಷಣೆಯಲ್ಲ. 30 ವರ್ಷಗಳ ಅಸ್ಥಿರ ಸರ್ಕಾರಗಳಿಂದ ದೇಶ ಸಾಕಷ್ಟು ನಷ್ಟ ಅನುಭವಿಸಿದೆ ಎಂದರು.

ಬಿಜೆಪಿ 400 ಸ್ಥಾನಗಳ ಗಡಿ ದಾಟಲಿದೆ, ಈ ಘೋಷಣೆಯ ಒಳಾರ್ಥ ತಿಳಿಸಿದ ಅಮಿತ್ ಶಾ
ಅಮಿತ್ ಶಾ
ನಯನಾ ರಾಜೀವ್
|

Updated on: May 29, 2024 | 8:26 AM

Share

ಲೋಕಸಭೆ ಚುನಾವಣೆ(Lok Sabha Election) ಯ ಕೊನೆಯ ಹಂತದ ಮೊದಲು, ಗೃಹ ಸಚಿವ ಅಮಿತ್ ಶಾ(Amit Shah) ಅವರು ಟಿವಿ 9ಗೆ ವಿಶೇಷ ಸಂದರ್ಶನ ನೀಡಿದ್ದು, ಹಲವು ವಿಷಯಗಳ ಬಗ್ಗೆ ಮಾತನಾಡಿದರು. ಪಕ್ಷದ ನೀತಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾತನಾಡುವ ಅವರು ಪ್ರತಿಪಕ್ಷಗಳ ಆರೋಪಗಳ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಘೋಷಣೆಯ ಒಳಾರ್ಥವನ್ನು ತಿಳಿಸಿದ್ದಾರೆ.

ಇದು ಘೋಷಣೆಯಲ್ಲ. 30 ವರ್ಷಗಳ ಅಸ್ಥಿರ ಸರ್ಕಾರಗಳಿಂದ ದೇಶ ಸಾಕಷ್ಟು ನಷ್ಟ ಅನುಭವಿಸಿದೆ. ಇದು ಅತ್ಯಂತ ಕೆಟ್ಟ ಸಮಯವಾಗಿತ್ತು. ಕಾಂಗ್ರೆಸ್‌ನಂತೆಯೇ ನಮ್ಮಿಂದಲೂ ಸರ್ಕಾರ ರಚನೆಯಾಗಿದೆ. ಅಟಲ್ ಜೀ ಸರ್ಕಾರವನ್ನು ಚೆನ್ನಾಗಿ ನಡೆಸಿದ್ದರು. ಭಾರತ ಪರಮಾಣು ಶಕ್ತಿಯಾಯಿತು. ಆದರೆ, ಯುಪಿಎ ಸರ್ಕಾರ ಬಂದಾಗ ಭಾರತ ಜಗತ್ತಿನ ಓಟದಲ್ಲಿ ತೀರಾ ಹಿಂದುಳಿಯಿತು.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರು ಸ್ಥಿರತೆಯನ್ನು ಕಂಡಿದ್ದಾರೆ ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನತೆ ಸ್ಥಿರತೆಯನ್ನು ಕಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದ್ದರಿಂದ, ದೇಶದ ಜನತೆಯೂ ಬಲಿಷ್ಠ ಮತ್ತು ನಿರ್ಣಾಯಕ ನಾಯಕತ್ವವನ್ನು ಬಯಸುತ್ತಾರೆ. ಹೀಗಾಗಿ ಸಾರ್ವಜನಿಕರು 400 ಸೀಟು ಕೊಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಇಂಡಿಯಾ ಒಕ್ಕೂಟ 100 ಸೀಟನ್ನು ಗೆಲ್ಲುವುದೂ ಕಷ್ಟ ಎಂದು ಹೇಳಿದರು.

ಮತ್ತಷ್ಟು ಓದಿ: ಹಿಂದುಳಿದ ಮುಸ್ಲಿಮರ ಮೀಸಲಾತಿ ಮುಂದುವರೆಯುತ್ತೆ, ಆದರೆ ಧರ್ಮದ ಆಧಾರದಲ್ಲಿ ಎಲ್ಲರಿಗೂ ಇಲ್ಲ: ಅಮಿತ್ ಶಾ

ಎಲ್ಲರೂ ಬೆಳೆಯಬೇಕು ಎಂಬುದು ನಮ್ಮ ಆಶಯ ನಾವು ಬೆಳೆಯಬೇಕು ಎಂದರೆ ಮತ್ತೊಬ್ಬರಿಗೆ ಹಾನಿ ಮಾಡಬೇಕು ಎಂದರ್ಥವಲ್ಲ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ರಚಿಸಿದ್ದಾರೆ. ಅದೇ ಕಾಂಗ್ರೆಸ್‌ನೊಂದಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ,ನೀವು ನಿಮ್ಮ ಭರವಸೆಯನ್ನು ಉಲ್ಲಂಘಿಸಿದಾಗ ಅಧಿಕಾರ ಕೊನೆಗೊಳ್ಳುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ದೆಹಲಿಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ದೆಹಲಿಯ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದೆಹಲಿಯಲ್ಲಿ ಒಗ್ಗೂಡಿ ಈ ಮೈತ್ರಿಯನ್ನು ಸ್ವಹಿತಾಸಕ್ತಿಯ ಆಧಾರದ ಮೇಲೆ ರಚಿಸಲಾಗಿದೆ. ಇದು ತತ್ವವನ್ನು ಆಧರಿಸಿದ್ದರೆ, ಅದು ಇಡೀ ದೇಶದಲ್ಲಿ ಇರುತ್ತಿತ್ತು. ಇದು ಯಾವ ರೀತಿಯ ಮೈತ್ರಿ ಎಂದು ನನಗೆ ಅರ್ಥವಾಗುತ್ತಿಲ್ಲ. ಕೆಲವೆಡೆ ಒಟ್ಟಿಗೇ ಹೊಡೆದಾಡಿದರೆ ಮತ್ತೆ ಕೆಲವೆಡೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ.

ಹತ್ತು ವರ್ಷಗಳಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುವ ಪ್ರಶ್ನೆಗೆ ಉತ್ತರಿಸಿದ ಶಾ, ನಾವು ಚುನಾವಣೆಯಲ್ಲಿ ಉತ್ತಮವಾಗಿ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು. ಪಂಜಾಬ್ ಹೇಗೆ ಡ್ರಗ್ ಮುಕ್ತವಾಗಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಂಜಾಬ್ ಸೇರಿದಂತೆ ಇಡೀ ದೇಶದಲ್ಲಿ ಡ್ರಗ್ಸ್ ದಂಧೆಗೆ ಮೋದಿ ಸರ್ಕಾರ ಕಡಿವಾಣ ಹಾಕುತ್ತಿದೆ. ನಾವು ಮಾದಕ ವಸ್ತುಗಳ ವಿರುದ್ಧ ಹೋರಾಡುತ್ತಿದ್ದೇವೆ. ಕಳೆದ ಹತ್ತು ವರ್ಷಗಳಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ