AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ 400 ಸ್ಥಾನಗಳ ಗಡಿ ದಾಟಲಿದೆ, ಈ ಘೋಷಣೆಯ ಒಳಾರ್ಥ ತಿಳಿಸಿದ ಅಮಿತ್ ಶಾ

Amit Shah Interview: ಗೃಹ ಸಚಿವ ಅಮಿತ್ ಶಾ, ಪಕ್ಷದ ನೀತಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾತನಾಡುವಾಗ, ಪ್ರತಿಪಕ್ಷಗಳ ಆರೋಪಗಳ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಘೋಷಣೆ ಕುರಿತು ಮಾತನಾಡಿದ ಅವರು, ಇದು ಘೋಷಣೆಯಲ್ಲ. 30 ವರ್ಷಗಳ ಅಸ್ಥಿರ ಸರ್ಕಾರಗಳಿಂದ ದೇಶ ಸಾಕಷ್ಟು ನಷ್ಟ ಅನುಭವಿಸಿದೆ ಎಂದರು.

ಬಿಜೆಪಿ 400 ಸ್ಥಾನಗಳ ಗಡಿ ದಾಟಲಿದೆ, ಈ ಘೋಷಣೆಯ ಒಳಾರ್ಥ ತಿಳಿಸಿದ ಅಮಿತ್ ಶಾ
ಅಮಿತ್ ಶಾ
ನಯನಾ ರಾಜೀವ್
|

Updated on: May 29, 2024 | 8:26 AM

Share

ಲೋಕಸಭೆ ಚುನಾವಣೆ(Lok Sabha Election) ಯ ಕೊನೆಯ ಹಂತದ ಮೊದಲು, ಗೃಹ ಸಚಿವ ಅಮಿತ್ ಶಾ(Amit Shah) ಅವರು ಟಿವಿ 9ಗೆ ವಿಶೇಷ ಸಂದರ್ಶನ ನೀಡಿದ್ದು, ಹಲವು ವಿಷಯಗಳ ಬಗ್ಗೆ ಮಾತನಾಡಿದರು. ಪಕ್ಷದ ನೀತಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾತನಾಡುವ ಅವರು ಪ್ರತಿಪಕ್ಷಗಳ ಆರೋಪಗಳ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಘೋಷಣೆಯ ಒಳಾರ್ಥವನ್ನು ತಿಳಿಸಿದ್ದಾರೆ.

ಇದು ಘೋಷಣೆಯಲ್ಲ. 30 ವರ್ಷಗಳ ಅಸ್ಥಿರ ಸರ್ಕಾರಗಳಿಂದ ದೇಶ ಸಾಕಷ್ಟು ನಷ್ಟ ಅನುಭವಿಸಿದೆ. ಇದು ಅತ್ಯಂತ ಕೆಟ್ಟ ಸಮಯವಾಗಿತ್ತು. ಕಾಂಗ್ರೆಸ್‌ನಂತೆಯೇ ನಮ್ಮಿಂದಲೂ ಸರ್ಕಾರ ರಚನೆಯಾಗಿದೆ. ಅಟಲ್ ಜೀ ಸರ್ಕಾರವನ್ನು ಚೆನ್ನಾಗಿ ನಡೆಸಿದ್ದರು. ಭಾರತ ಪರಮಾಣು ಶಕ್ತಿಯಾಯಿತು. ಆದರೆ, ಯುಪಿಎ ಸರ್ಕಾರ ಬಂದಾಗ ಭಾರತ ಜಗತ್ತಿನ ಓಟದಲ್ಲಿ ತೀರಾ ಹಿಂದುಳಿಯಿತು.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರು ಸ್ಥಿರತೆಯನ್ನು ಕಂಡಿದ್ದಾರೆ ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನತೆ ಸ್ಥಿರತೆಯನ್ನು ಕಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದ್ದರಿಂದ, ದೇಶದ ಜನತೆಯೂ ಬಲಿಷ್ಠ ಮತ್ತು ನಿರ್ಣಾಯಕ ನಾಯಕತ್ವವನ್ನು ಬಯಸುತ್ತಾರೆ. ಹೀಗಾಗಿ ಸಾರ್ವಜನಿಕರು 400 ಸೀಟು ಕೊಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಇಂಡಿಯಾ ಒಕ್ಕೂಟ 100 ಸೀಟನ್ನು ಗೆಲ್ಲುವುದೂ ಕಷ್ಟ ಎಂದು ಹೇಳಿದರು.

ಮತ್ತಷ್ಟು ಓದಿ: ಹಿಂದುಳಿದ ಮುಸ್ಲಿಮರ ಮೀಸಲಾತಿ ಮುಂದುವರೆಯುತ್ತೆ, ಆದರೆ ಧರ್ಮದ ಆಧಾರದಲ್ಲಿ ಎಲ್ಲರಿಗೂ ಇಲ್ಲ: ಅಮಿತ್ ಶಾ

ಎಲ್ಲರೂ ಬೆಳೆಯಬೇಕು ಎಂಬುದು ನಮ್ಮ ಆಶಯ ನಾವು ಬೆಳೆಯಬೇಕು ಎಂದರೆ ಮತ್ತೊಬ್ಬರಿಗೆ ಹಾನಿ ಮಾಡಬೇಕು ಎಂದರ್ಥವಲ್ಲ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ರಚಿಸಿದ್ದಾರೆ. ಅದೇ ಕಾಂಗ್ರೆಸ್‌ನೊಂದಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ,ನೀವು ನಿಮ್ಮ ಭರವಸೆಯನ್ನು ಉಲ್ಲಂಘಿಸಿದಾಗ ಅಧಿಕಾರ ಕೊನೆಗೊಳ್ಳುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ದೆಹಲಿಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ದೆಹಲಿಯ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದೆಹಲಿಯಲ್ಲಿ ಒಗ್ಗೂಡಿ ಈ ಮೈತ್ರಿಯನ್ನು ಸ್ವಹಿತಾಸಕ್ತಿಯ ಆಧಾರದ ಮೇಲೆ ರಚಿಸಲಾಗಿದೆ. ಇದು ತತ್ವವನ್ನು ಆಧರಿಸಿದ್ದರೆ, ಅದು ಇಡೀ ದೇಶದಲ್ಲಿ ಇರುತ್ತಿತ್ತು. ಇದು ಯಾವ ರೀತಿಯ ಮೈತ್ರಿ ಎಂದು ನನಗೆ ಅರ್ಥವಾಗುತ್ತಿಲ್ಲ. ಕೆಲವೆಡೆ ಒಟ್ಟಿಗೇ ಹೊಡೆದಾಡಿದರೆ ಮತ್ತೆ ಕೆಲವೆಡೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ.

ಹತ್ತು ವರ್ಷಗಳಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುವ ಪ್ರಶ್ನೆಗೆ ಉತ್ತರಿಸಿದ ಶಾ, ನಾವು ಚುನಾವಣೆಯಲ್ಲಿ ಉತ್ತಮವಾಗಿ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು. ಪಂಜಾಬ್ ಹೇಗೆ ಡ್ರಗ್ ಮುಕ್ತವಾಗಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಂಜಾಬ್ ಸೇರಿದಂತೆ ಇಡೀ ದೇಶದಲ್ಲಿ ಡ್ರಗ್ಸ್ ದಂಧೆಗೆ ಮೋದಿ ಸರ್ಕಾರ ಕಡಿವಾಣ ಹಾಕುತ್ತಿದೆ. ನಾವು ಮಾದಕ ವಸ್ತುಗಳ ವಿರುದ್ಧ ಹೋರಾಡುತ್ತಿದ್ದೇವೆ. ಕಳೆದ ಹತ್ತು ವರ್ಷಗಳಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ