Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಲೋಕಸಭಾ ಚುನಾವಣೆ 2024 ಫಲಿತಾಂಶ: ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ ಗದ್ದಿಗೌಡರ್​

Bagalkot Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪಿಸಿ ಗದ್ದಿಗೌಡರ್ ಅವರು ಗೆದ್ದಿದ್ದಾರೆ. ಕಾಂಗ್ರೆಸ್​ ನಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ, ಸಂಯುಕ್ತ ಪಾಟೀಲ್​​ ಅವರು ಸೋತಿದ್ದಾರೆ.

ಬಾಗಲಕೋಟೆ ಲೋಕಸಭಾ ಚುನಾವಣೆ 2024 ಫಲಿತಾಂಶ: ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ ಗದ್ದಿಗೌಡರ್​
ಪಿಸಿ ಗದ್ದಿಗೌಡರ್, ಸಂಯಕ್ತಾ ಪಾಟೀಲ್​
Follow us
ವಿವೇಕ ಬಿರಾದಾರ
|

Updated on:Jun 04, 2024 | 3:15 PM

ಬಾಗಲಕೋಟೆ, ಜೂನ್​ 4: ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ (Bagalkot Lok Sabha Constituency) ಬಿಜೆಪಿ (BJP) ಈ ಬಾರಿಯೂ ಕೂಡ ಪಿಸಿ ಗದ್ದಿಗೌಡರ್ (PC Gaddigoudar)​ ಅವರು ಗೆಲುವಿನ ನಗೆ ಬೀರಿದ್ದಾರೆ. ಸತತ ನಾಲ್ಕು ಬಾರಿ ಗೆದ್ದಿದ್ದ ಪಿಸಿ ಗದ್ದಿಗೌಡರ್​ ಅವರು ಐದನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆ ನಿರ್ಮಿಸಿದ್ದಾರೆ . ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ಅವರಿಗೆ ಗಜಕೇಸರಿ ಯೋಗ ಕೈ ಹಿಡಿದಿಲ್ಲ, ಸೋಲುಂಡಿದ್ದಾರೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,06,183 ಮತದಾರರಿದ್ದಾರೆ. ಇದರಲ್ಲಿ 13,12,319 ಮತದಾರರು ಮತ ಚಲಾಯಿಸಿದ್ದಾರೆ. ಒಟ್ಟು ಶೇ 72.66 ರಷ್ಟು ಮತದಾನವಾಗಿದೆ.

ಪಿಸಿ ಗದ್ದಿಗೌಡರ: ಮತ ಅಂತರಗಳಿಂದ ಮುನ್ನಡೆ

ಸಂಯುಕ್ತ ಪಾಟೀಲ್​: 

ಪಿಸಿ ಗದ್ದಿಗೌಡರ ಕಳೆದ ಒಂದು ದಶಕದಿಂದ ಬಾಗಲೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್​ ಅವರು 6,64,638 ಮತಗಳನ್ನು ಪಡೆದಿದ್ದರು. ಇನ್ನು ಇವರ ವಿರುದ್ಧ ನಿಂತಿದ್ದ ವೀಣಾ ಕಾಶಪ್ಪನವರ್​ 4,96,451 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ವೀಣಾ ಕಾಶಪ್ಪನವರ್ ಅವರು ಪಿಸಿ ಗದ್ದಿಗೌಡರ್ ಅವರ ಎದುರು ಪರಾಭವಗೊಂಡಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್ ಅವರು ವೀಣಾ ಕಾಶಪ್ಪನವರ್​ ಅವರ ವಿರುದ್ಧ ಒಂದು ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್​ 5,71,548 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ವೀಣಾ ಕಾಶಪ್ಪನವರ್​ 4,54,988 ಮತಗಳನ್ನು ಪಡೆದಿದ್ದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್​ ಹಂಚಿಕೆ ಕಾಂಗ್ರೆಸ್​ಗೆ ಕಗ್ಗಂಟಾಗಿತ್ತು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಅವರ ಪತ್ನಿ ವೀಣಾ ಕಾಶಪ್ಪನವರ್​ ಅವರು ಕೂಡ ಟಿಕೆಟ್​ಗಾಗಿ ಸಾಕಷ್ಟು ಪ್ರಯತ್ನ ಪಟ್ಟರೂ ಸಿಗಲಿಲ್ಲ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:28 am, Tue, 4 June 24

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು