Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಉತ್ತರ ಲೋಕಸಭಾ ಚುನಾವಣೆ 2024 ಫಲಿತಾಂಶ: ಶೋಭಾ ಕರಂದ್ಲಾಜೆ ಗೆಲುವು

Bengaluru North Lok Sabha Election Result 2024 Live Counting Updates: 2024ರ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಕಂಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಚುನಾವಣೆ 2024 ಫಲಿತಾಂಶ: ಶೋಭಾ ಕರಂದ್ಲಾಜೆ ಗೆಲುವು
ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲುವು
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 04, 2024 | 3:37 PM

ಬಿಜೆಪಿಯ ಭದ್ರಕೋಟೆಯಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ(Bengaluru North Lok Sabha Constituency), ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಸತತ ನಾಲ್ಕು ಅವಧಿಯಿಂದ ಬೆಂಗಳೂರು ಉತ್ತರದಲ್ಲಿ ಕಮಲ ಅರಳುತ್ತಿದ್ದು, ಅದರಂತೆ ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುವ ಮೂಲಕ ಮತ್ತೊಮ್ಮೆ ಕಮಲ ಅರಳಿಸಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಅವರ ಅಲೆಯ ವಿರುದ್ದ ಗ್ಯಾರಂಟಿ ಕೂಗು ಸದ್ದು ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇನ್ನು 2004 ರಿಂದ ನಿವೃತ್ತ ಪೊಲೀಸ್​ ಅಧಿಕಾರಿಯಾಗಿದ್ದ ಎಚ್​ಟಿ ಸಾಂಗ್ಲಿಯಾನ ಅವರು ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಇದಾದ ಬಳಿಕ ಬಿಜೆಪಿ ಸತತ ಗೆಲುವಿನ ನಗೆ ಬೀರುತ್ತಾ ಬರುತ್ತಿದೆ.

ಹೊರಗಿನಿಂದ ಬಂದ ಹಾಲಿ ಸಂಸದ ಸದಾನಂದ ಗೌಡರು ಎರಡು ಬಾರಿ ಅಂದರೆ 2014 ಮತ್ತು 2019 ರಲ್ಲಿ ಬೆಂಗಳೂರು ಉತ್ತರದಿಂದ ಗೆದ್ದಿದ್ದರು. ಆದರೆ, ಈ ಬಾರಿ ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್​ ನೀಡಲಾಗಿತ್ತು. ಶೋಭಾ ಹೆಸರು ಘೋಷಣೆ ಆಗುತ್ತಿದ್ದಂತೆ ಗೋ ಬ್ಯಾಕ್​  ಶೋಭಕ್ಕ ಎಂಬ ಭಿತ್ತಿ ಪತ್ರಗಳು ಕ್ಷೇತ್ರದಲ್ಲಿ ಹರಿದಾಡಿತ್ತು. ಜೊತೆಗೆ ಯಾರಾದರೂ ಒಕ್ಕಲಿಗ ನಾಯಕರಿಗೆ ಅಥವಾ ಸದಾನಂದಗೌಡರಿಗೆ ಟಿಕೆಟ್​ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಮಧ್ಯೆ ಶೋಭಾ ಕರಂದ್ಲಾಜೆ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಇತ್ತ ಕಾಂಗ್ರೆಸ್​ ಪಕ್ಷದಿಂದ ಈ ಬಾರಿ ಹೊಸ ಅಭ್ಯರ್ಥಿ ಎಂ ವಿ ರಾಜೀವ್​ ಗೌಡ ಅವರು ಸ್ಪರ್ಧೆ ಮಾಡಿದ್ದಾರೆ. 1951 ರಿಂದ ಲೋಕಸಭಾ ಚುನಾವಣೆ ಆರಂಭವಾಗಿ 2004 ರವರೆಗೆ ಬೆಂಗಳೂರು ಉತ್ತರ ಕಾಂಗ್ರೆಸ್​ ಭದ್ರಕೋಟೆಯಾಗಿತ್ತು. ಇನ್ನು ಕಳೆದ ಬಾರಿ ಪಕ್ಷದ ವರಿಷ್ಠರ ಒತ್ತಾಯದ ಮೆರೆಗೆ, ಒಲ್ಲದ ಮನಸ್ಸಿನಿಂದಲೇ ಕೃಷ್ಣಬೈರೇಗೌಡರು ನಿಂತು, ಸದಾನಂದಗೌಡರ ವಿರುದ್ದ ಸೋಲುಂಡಿದ್ದರು. ಆದರೆ, ಈ ಬಾರಿ ರಾಜೀವ್​ ಗೌಡ ಅವರಿಗೆ ಕಾಂಗ್ರೆಸ್​ನ ಗ್ಯಾರಂಟಿ ಅಸ್ತ್ರವಿದ್ದು, ಗೆಲುವು ನಮ್ಮದೆ ಎನ್ನುವ ಲೆಕ್ಕಾಚಾರದಲ್ಲಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:39 am, Tue, 4 June 24

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !