AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

Mandi Lok Sabha Election Results: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಭಾರೀ ಅಂತರದಿಂದ ಗೆಲುವು ಕಂಡಿದ್ದಾರೆ. ಮೊದಲ ಚುನಾವಣೆಯಲ್ಲೇ 516382 ಮತಗಳನ್ನು ಪಡೆದುಕೊಂಡಿದ್ದಾರೆ.

Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ
ಕಂಗನಾ ರಣಾವತ್
ಸುಷ್ಮಾ ಚಕ್ರೆ
|

Updated on:Jun 04, 2024 | 4:28 PM

Share

ಮಂಡಿ: 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಮಂಡಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ (Kangana Ranaut) ಗೆಲುವು ಸಾಧಿಸಿದ್ದಾರೆ. ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ಹಾಕಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಥಾನವನ್ನು ಗೆದ್ದಿದ್ದಾರೆ. ಕಂಗನಾ ರಣಾವತ್ 516382 ಮತಗಳನ್ನು ಪಡೆಯುವ ಮೂಲಕ 71663 ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಐಎನ್‌ಸಿಯ ವಿಕ್ರಮಾದಿತ್ಯ ಸಿಂಗ್ ಅವರು 444719 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಗನಾ ರಣಾವತ್, ಮಂಡಿಯು ಹೆಣ್ಣುಮಕ್ಕಳ ಅವಮಾನಗಳನ್ನು ಸಹಿಸುವುದಿಲ್ಲ. ಇದು (ಹಿಮಾಚಲ ಪ್ರದೇಶ) ನನ್ನ ‘ಜನ್ಮಭೂಮಿ’. ನಾನು ಪ್ರಧಾನಿ ನರೇಂದ್ರ ಮೋದಿಯ ಹೆಸರಿನಲ್ಲೇ ಗೆಲುವು ಕಂಡಿದ್ದೇನೆ. ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಹಾಗಾಗಿ, ನಾನು ಗೆದ್ದ ಬಳಿಕ ಮುಂಬೈಗೆ ಹೋಗುತ್ತಿಲ್ಲ. ನಾನು ಎಲ್ಲಿಯೂ ಹೋಗುವುದಿಲ್ಲ. ನನ್ನ ಪ್ರತಿಸ್ಪರ್ಧಿ ತಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಳ್ಳುವ ಮೂಲಕ ಇಲ್ಲಿಂದ ಹೊರಡಬಹುದು ಎಂದು ಹೇಳುವ ಮೂಲಕ ಬಾಲಿವುಡ್​ಗೆ ಗುಡ್​ಬೈ ಹೇಳುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: LS Exit Poll Results 2024 Highlights: ಲೋಕಸಭೆ ಚುನಾವಣೆ ಎಕ್ಸಿಟ್​ ಪೋಲ್ ಹೈಲೈಟ್ಸ್

ಕಂಗನಾ ಬಿಜೆಪಿ ಪಕ್ಷಕ್ಕೆ ಸೇರಿದಾಗಿನಿಂದ ಅವರು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸನಾತನ ಮೌಲ್ಯಗಳನ್ನು ರಕ್ಷಿಸಲು ಮೋದಿ ಸರ್ಕಾರದ ಬದ್ಧತೆಯ ಬಗ್ಗೆ ಅವರು ಮತದಾರರಿಗೆ ಭರವಸೆ ನೀಡಿದ್ದರು. ನರೇಂದ್ರ ಮೋದಿ ಅಧಿಕಾರದಲ್ಲಿರುವವರೆಗೂ ಧರ್ಮಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಅವರು ಹೇಳಿದ್ದರು.

37 ವರ್ಷದ ಬಾಲಿವುಡ್ ತಾರೆಯಾಗಿರುವ ಕಂಗನಾ ರಣಾವತ್ ಅವರು ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರು ಈಗ “ತನ್ನ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿ ಹೊರಡಬೇಕಾಗಬಹುದು” ಎಂದು ಗೇಲಿ ಮಾಡಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಈ ಹಿಂದೆ ಚುನಾವಣೆಯ ವೇಳೆ ಹೇಳಿಕೆ ನೀಡುವಾಗ ಕಂಗನಾ ರಣಾವತ್ ಮಂಡಿಯನ್ನು ಬಿಟ್ಟು ಚುನಾವಣೆ ಮುಗಿದ ನಂತರ ಪ್ಯಾಕ್ ಅಪ್ ಮಾಡಿ ಮುಂಬೈಗೆ ಹಿಂತಿರುಗುತ್ತಾರೆ ಎಂದು ಲೇವಡಿ ಮಾಡಿದ್ದರು. ಅದಕ್ಕೆ ಇದೀಗ ಕಂಗನಾ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಹಾಸನ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಜ್ವಲ್​ ರೇವಣ್ಣಗೆ ಸೋಲು, ಕಾಂಗ್ರೆಸ್​ಗೆ ಗೆಲುವು

ಹೆಣ್ಣಿನ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದರೆ ಅದರ ಪರಿಣಾಮವನ್ನು ಅವರೇ ಅನುಭವಿಸಬೇಕಾಗುತ್ತದೆ. ಅದು ಇಂದು ನಾವು ಮುನ್ನಡೆ ಸಾಧಿಸಿದ ರೀತಿಯಿಂದ ಸ್ಪಷ್ಟವಾಗುತ್ತಿದೆ. ಮಂಡಿ ಹೆಣ್ಣುಮಕ್ಕಳ ಅವಮಾನಗಳನ್ನು ಸಹಿಸುವುದಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 4 June 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ