AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ; ಲೋಕಸಭಾ ಚುನಾವಣಾ ಪ್ರಚಾರ ಗೀತೆ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ, ಗುರುವಾರ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ. "ಸಪ್ನೆ ನಹೀ ಹಕೀಕತ್ ಬುನ್ತೇ ಹೈ, ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ (ಕನಸುಗಳಲ್ಲ, ವಾಸ್ತವವನ್ನು ಹೆಣೆಯುತ್ತೇವೆ, ಅದಕ್ಕಾಗಿಯೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ) ಎಂಬ ಸಾಲಿನೊಂದಿಗೆ ಪ್ರಚಾರ ಗೀತೆ ಆರಂಭವಾಗುತ್ತದೆ.

ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ; ಲೋಕಸಭಾ ಚುನಾವಣಾ ಪ್ರಚಾರ ಗೀತೆ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Jan 25, 2024 | 1:20 PM

Share

ದೆಹಲಿ ಜನವರಿ 25: 2024 ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತ್ತೊಮ್ಮೆ ನರೇಂದ್ರ ಮೋದಿಯನ್ನು (Narendra Modi) ಪ್ರಧಾನಿ ಸ್ಥಾನಕ್ಕೆ ಆಯ್ಕೆ ಮಾಡಲು ಬಿಜೆಪಿ ಗುರುವಾರ ತನ್ನ ಹೊಸ ಅಭಿಯಾನ ಮೋದಿ ಕೋ ಚುನ್ತೇ ಹೈ (ಮೋದಿಯನ್ನು ಆಯ್ಕೆ ಮಾಡೋಣ) ಪ್ರಾರಂಭಿಸಿದೆ. “ಸಪ್ನೆ ನಹೀ ಹಕೀಕತ್ ಬುನ್ತೇ ಹೈ, ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ (ಕನಸುಗಳಲ್ಲ, ವಾಸ್ತವವನ್ನು ಹೆಣೆಯುತ್ತೇವೆ, ಅದಕ್ಕಾಗಿಯೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ) ಎಂಬ ಸಾಲಿನೊಂದಿಗೆ ಪ್ರಚಾರ ಗೀತೆ ಆರಂಭವಾಗುತ್ತದೆ.

ಭಾರತದ ಪರಿಸ್ಥಿತಿ ಶೋಚನೀಯವಾಗಿತ್ತು. ನಂತರ ದೇಶ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದೆ. ಮೋದಿ ತನ್ನ ಭರವಸೆಯನ್ನು ಈಡೇರಿಸಿದರು, ಅಭಿವೃದ್ಧಿ ಹೊಂದಿದ ದೇಶದ ಕನಸು ಕೇವಲ ಕನಸಾಗಿ ಉಳಿಯಲಿಲ್ಲ .ಮೋದಿ ಸರಿಯಾದ ಮಾರ್ಗಗಳನ್ನು ಆರಿಸಿಕೊಂಡರು. ಅವರು ವಾಸ್ತವವನ್ನು ಹೆಣೆದರೇ ಹೊರತು, ಕನಸಲ್ಲ. ಆದ್ದರಿಂದಲೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ ಎಂಬುದು ಹಾಡಿನ ಸಾಲು.

ಅವರು ಭಾರತವನ್ನು ತನ್ನ ತಾಯಿ ಮತ್ತು ದೇಶವಾಸಿಗಳನ್ನು ದೇವರೆಂದು ಪರಿಗಣಿಸುತ್ತಾರೆ. ಅವರು ಖ್ಯಾತಿಗಾಗಿ ಹಂಬಲಿಸದೆ ಕೆಲಸವನ್ನು ಆಯ್ಕೆ ಮಾಡುತ್ತಾರೆ. ಅದಕ್ಕಾಗಿಯೇ ಎಲ್ಲರೂ (ಪ್ರತಿ ದೇಶ) ಅವರ ಮಾತನ್ನು ಕೇಳುತ್ತಾರೆ. ಭ್ರಷ್ಟರು ಭಯಭೀತರಾಗಿರುವಾಗ ಭಾರತೀಯ ಮಹಿಳೆಯರು ನಾಯಕರಾಗಿ ಹೊರಹೊಮ್ಮಿದರು. ಅವರು ವಿನೀತರಾಗಿದ್ದುಕೊಂಡೇ ಆಕಾಶವನ್ನು ತಲುಪಿದರು (ಚಂದ್ರಯಾನದ ಉಲ್ಲೇಖ) ಎಂದು ಹಾಡು ಮೋದಿ ಅಧಿಕಾರವಧಿಯ ಸಾಧನೆಗಳನ್ನು ವಿವರಿಸುತ್ತದೆ.

ಇದನ್ನೂ ಓದಿ:ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ

ಮೋದಿ ಸರ್ಕಾರದ ವಿದೇಶಾಂಗ ನೀತಿಯ ಯಶಸ್ಸು ಸೇರಿದಂತೆ ಪ್ರಚಾರದ ಹಾಡಿನಲ್ಲಿ ವಿವಿಧ ವರ್ಗಗಳ ಜನರಿಗೆ ಪ್ರಧಾನಿ ಮೋದಿಯವರ ಯೋಜನೆಗಳನ್ನು ಉಲ್ಲೇಖಿಸಲಾಗಿದೆ.

2024 ರ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಅಧಿಕೃತ ಪ್ರಚಾರವನ್ನು ನಡ್ಡಾ ಅವರು ಪ್ರಧಾನಿ ಮೋದಿಯವರ ವರ್ಚುವಲ್ ಉಪಸ್ಥಿತಿಯಲ್ಲಿ ಪ್ರಾರಂಭಿಸಿದರು ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.  ಗುರುವಾರ ಬುಲಂದ್‌ಶಹರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯೊಂದಿಗೆ ಉತ್ತರ ಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಧಾನಿ ಪ್ರಾರಂಭಿಸಲಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ 50 ಲಕ್ಷ ಮೊದಲ ಬಾರಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಅವರು ‘ಪರಿವಾರವಾದಿ’ (ಕುಟುಂಬ ರಾಜಕಾರಣ) ಪಕ್ಷಗಳನ್ನು ತಮ್ಮ ಮತದ “ಶಕ್ತಿ” ಯಿಂದ ಸೋಲಿಸಲು ಯುವಕರನ್ನು ಉತ್ತೇಜಿಸಿದರು. “ಕುಟುಂಬ ನಡೆಸುವ ಪಕ್ಷಗಳು ಇತರ ಯುವಕರನ್ನು ಮುನ್ನಡೆಯಲು ಎಂದಿಗೂ ಅನುಮತಿಸುವುದಿಲ್ಲ, ನೀವು ಅವರನ್ನು ನಿಮ್ಮ ಮತಗಳಿಂದ ಸೋಲಿಸಬೇಕು” ಎಂದು ಪ್ರಧಾನಿ ಹೇಳಿದರು.

ಬಿಜೆಪಿ ಶೀಘ್ರದಲ್ಲೇ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ತನ್ನ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಹೆಚ್ಚಿಸುತ್ತಾ, ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ತನ್ನ ಮತಗಳ ಪ್ರಮಾಣವನ್ನು ಶೇಕಡಾ 37.36 ರಿಂದ ಶೇಕಡಾ 50 ಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Thu, 25 January 24

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು