AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ; ಲೋಕಸಭಾ ಚುನಾವಣಾ ಪ್ರಚಾರ ಗೀತೆ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ, ಗುರುವಾರ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ. "ಸಪ್ನೆ ನಹೀ ಹಕೀಕತ್ ಬುನ್ತೇ ಹೈ, ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ (ಕನಸುಗಳಲ್ಲ, ವಾಸ್ತವವನ್ನು ಹೆಣೆಯುತ್ತೇವೆ, ಅದಕ್ಕಾಗಿಯೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ) ಎಂಬ ಸಾಲಿನೊಂದಿಗೆ ಪ್ರಚಾರ ಗೀತೆ ಆರಂಭವಾಗುತ್ತದೆ.

ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ; ಲೋಕಸಭಾ ಚುನಾವಣಾ ಪ್ರಚಾರ ಗೀತೆ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 25, 2024 | 1:20 PM

Share

ದೆಹಲಿ ಜನವರಿ 25: 2024 ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತ್ತೊಮ್ಮೆ ನರೇಂದ್ರ ಮೋದಿಯನ್ನು (Narendra Modi) ಪ್ರಧಾನಿ ಸ್ಥಾನಕ್ಕೆ ಆಯ್ಕೆ ಮಾಡಲು ಬಿಜೆಪಿ ಗುರುವಾರ ತನ್ನ ಹೊಸ ಅಭಿಯಾನ ಮೋದಿ ಕೋ ಚುನ್ತೇ ಹೈ (ಮೋದಿಯನ್ನು ಆಯ್ಕೆ ಮಾಡೋಣ) ಪ್ರಾರಂಭಿಸಿದೆ. “ಸಪ್ನೆ ನಹೀ ಹಕೀಕತ್ ಬುನ್ತೇ ಹೈ, ತಬೀ ತೋ ಸಬ್ ಮೋದಿ ಕೋ ಚುನ್ತೇ ಹೈ (ಕನಸುಗಳಲ್ಲ, ವಾಸ್ತವವನ್ನು ಹೆಣೆಯುತ್ತೇವೆ, ಅದಕ್ಕಾಗಿಯೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ) ಎಂಬ ಸಾಲಿನೊಂದಿಗೆ ಪ್ರಚಾರ ಗೀತೆ ಆರಂಭವಾಗುತ್ತದೆ.

ಭಾರತದ ಪರಿಸ್ಥಿತಿ ಶೋಚನೀಯವಾಗಿತ್ತು. ನಂತರ ದೇಶ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದೆ. ಮೋದಿ ತನ್ನ ಭರವಸೆಯನ್ನು ಈಡೇರಿಸಿದರು, ಅಭಿವೃದ್ಧಿ ಹೊಂದಿದ ದೇಶದ ಕನಸು ಕೇವಲ ಕನಸಾಗಿ ಉಳಿಯಲಿಲ್ಲ .ಮೋದಿ ಸರಿಯಾದ ಮಾರ್ಗಗಳನ್ನು ಆರಿಸಿಕೊಂಡರು. ಅವರು ವಾಸ್ತವವನ್ನು ಹೆಣೆದರೇ ಹೊರತು, ಕನಸಲ್ಲ. ಆದ್ದರಿಂದಲೇ ಎಲ್ಲರೂ ಮೋದಿಯನ್ನು ಆಯ್ಕೆ ಮಾಡುತ್ತಾರೆ ಎಂಬುದು ಹಾಡಿನ ಸಾಲು.

ಅವರು ಭಾರತವನ್ನು ತನ್ನ ತಾಯಿ ಮತ್ತು ದೇಶವಾಸಿಗಳನ್ನು ದೇವರೆಂದು ಪರಿಗಣಿಸುತ್ತಾರೆ. ಅವರು ಖ್ಯಾತಿಗಾಗಿ ಹಂಬಲಿಸದೆ ಕೆಲಸವನ್ನು ಆಯ್ಕೆ ಮಾಡುತ್ತಾರೆ. ಅದಕ್ಕಾಗಿಯೇ ಎಲ್ಲರೂ (ಪ್ರತಿ ದೇಶ) ಅವರ ಮಾತನ್ನು ಕೇಳುತ್ತಾರೆ. ಭ್ರಷ್ಟರು ಭಯಭೀತರಾಗಿರುವಾಗ ಭಾರತೀಯ ಮಹಿಳೆಯರು ನಾಯಕರಾಗಿ ಹೊರಹೊಮ್ಮಿದರು. ಅವರು ವಿನೀತರಾಗಿದ್ದುಕೊಂಡೇ ಆಕಾಶವನ್ನು ತಲುಪಿದರು (ಚಂದ್ರಯಾನದ ಉಲ್ಲೇಖ) ಎಂದು ಹಾಡು ಮೋದಿ ಅಧಿಕಾರವಧಿಯ ಸಾಧನೆಗಳನ್ನು ವಿವರಿಸುತ್ತದೆ.

ಇದನ್ನೂ ಓದಿ:ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ

ಮೋದಿ ಸರ್ಕಾರದ ವಿದೇಶಾಂಗ ನೀತಿಯ ಯಶಸ್ಸು ಸೇರಿದಂತೆ ಪ್ರಚಾರದ ಹಾಡಿನಲ್ಲಿ ವಿವಿಧ ವರ್ಗಗಳ ಜನರಿಗೆ ಪ್ರಧಾನಿ ಮೋದಿಯವರ ಯೋಜನೆಗಳನ್ನು ಉಲ್ಲೇಖಿಸಲಾಗಿದೆ.

2024 ರ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಅಧಿಕೃತ ಪ್ರಚಾರವನ್ನು ನಡ್ಡಾ ಅವರು ಪ್ರಧಾನಿ ಮೋದಿಯವರ ವರ್ಚುವಲ್ ಉಪಸ್ಥಿತಿಯಲ್ಲಿ ಪ್ರಾರಂಭಿಸಿದರು ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.  ಗುರುವಾರ ಬುಲಂದ್‌ಶಹರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯೊಂದಿಗೆ ಉತ್ತರ ಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಧಾನಿ ಪ್ರಾರಂಭಿಸಲಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ 50 ಲಕ್ಷ ಮೊದಲ ಬಾರಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಅವರು ‘ಪರಿವಾರವಾದಿ’ (ಕುಟುಂಬ ರಾಜಕಾರಣ) ಪಕ್ಷಗಳನ್ನು ತಮ್ಮ ಮತದ “ಶಕ್ತಿ” ಯಿಂದ ಸೋಲಿಸಲು ಯುವಕರನ್ನು ಉತ್ತೇಜಿಸಿದರು. “ಕುಟುಂಬ ನಡೆಸುವ ಪಕ್ಷಗಳು ಇತರ ಯುವಕರನ್ನು ಮುನ್ನಡೆಯಲು ಎಂದಿಗೂ ಅನುಮತಿಸುವುದಿಲ್ಲ, ನೀವು ಅವರನ್ನು ನಿಮ್ಮ ಮತಗಳಿಂದ ಸೋಲಿಸಬೇಕು” ಎಂದು ಪ್ರಧಾನಿ ಹೇಳಿದರು.

ಬಿಜೆಪಿ ಶೀಘ್ರದಲ್ಲೇ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ತನ್ನ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಹೆಚ್ಚಿಸುತ್ತಾ, ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ತನ್ನ ಮತಗಳ ಪ್ರಮಾಣವನ್ನು ಶೇಕಡಾ 37.36 ರಿಂದ ಶೇಕಡಾ 50 ಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Thu, 25 January 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ