ಕೇಂದ್ರದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಲಿದೆ; ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದ ಮೋದಿ

ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಪ್ರತಿಪಕ್ಷಗಳು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿದ ಮೋದಿ, ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಸದಸ್ಯರು ಸಂವಿಧಾನ ಮತ್ತು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಫೂರ್ತಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಲಿದೆ; ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದ ಮೋದಿ
ನರೇಂದ್ರ ಮೋದಿ
Follow us
|

Updated on: May 30, 2024 | 4:47 PM

ಹೋಶಿಯಾರ್‌ಪುರ ಮೇ 30: ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ಪಂಜಾಬ್‌ನ ಹೋಶಿಯಾರ್‌ಪುರದಿಂದ (Hoshiarpur) 2024 ರ ಲೋಕಸಭಾ ಚುನಾವಣಾ ಪ್ರಚಾರವನ್ನು ಮುಕ್ತಾಯಗೊಳಿಸಿದ್ದು, ಮತ ಎಣಿಕೆಯ ದಿನವಾದ ಜೂನ್ 4 ರಂದು ಬಿಜೆಪಿ (BJP) ಹ್ಯಾಟ್ರಿಕ್ ಗಳಿಸಲಿದೆ ಎಂದು ಹೇಳಿದ್ದಾರೆ. ಮೀಸಲು ಕ್ಷೇತ್ರವಾದ ಹೋಶಿಯಾರ್‌ಪುರದ ಬಿಜೆಪಿ ಅಭ್ಯರ್ಥಿ ಅನಿತಾ ಸೋಮ್ ಪ್ರಕಾಶ್ ಅವರ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ , “ಭಾರತದಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ ಬರಲಿದೆ. ದಶಕಗಳ ನಂತರ ವಿಕಸಿತ್ ಭಾರತದ ಕನಸನ್ನು ನನಸು ಮಾಡಲು ಕೇಂದ್ರದಲ್ಲಿ ಪೂರ್ಣ ಬಹುಮತದೊಂದಿಗೆ ಹ್ಯಾಟ್ರಿಕ್ ಸಾಧಿಸುತ್ತಿದ್ದೇವೆ. 21ನೇ ಶತಮಾನ ಭಾರತದ ಶತಮಾನ ಆಗಿದೆ. ‘ದಮ್ದಾರ್ ಸರ್ಕಾರ್ (ಸದೃಢ ಸರ್ಕಾರ) ಮರಳಿ ಬರುತ್ತಿದೆ.

“10 ವರ್ಷಗಳಲ್ಲಿ, ಮೋದಿ ಅವರು ರಾಷ್ಟ್ರದ ಶತ್ರುಗಳನ್ನು ಹೊಡೆದುರುಳಿಸುವ ಮತ್ತು ಭಾರತವನ್ನು ಸಮೃದ್ಧ ಮತ್ತು ಸ್ವಾವಲಂಬಿಯಾಗಿಸುವ ದೃಢವಾದ ಸರ್ಕಾರವನ್ನು ನೀಡಿದ್ದಾರೆ. ನಮ್ಮ ಸರ್ಕಾರವು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ಗಾಗಿ ‘ಕರಮ್ ಹಿ ಧರಮ್ ಹೈ’ (ಸೇವೆಯೇ ಧರ್ಮ) ಎಂಬ ಉದ್ದೇಶದಿಂದ ಕೆಲಸ ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ.

125 ದಿನಗಳ ಮಾರ್ಗಸೂಚಿ ಸಿದ್ಧವಾಗಿದೆ

ಅಧಿಕಾರಕ್ಕೆ ಬಂದ ನಂತರ ಮಾಡಬೇಕಾದ ಕಾಮಗಾರಿಗಳಿಗೆ ಈಗಾಗಲೇ ಆದ್ಯತೆ ನೀಡಿದ್ದೇವೆ. ಈಗಾಗಲೇ 125 ದಿನಗಳ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಮೊದಲ ತ್ರೈಮಾಸಿಕವನ್ನು ಯುವಕರಿಗೆ ಸಮರ್ಪಿಸಲಾಗುವುದು. ಐದು ವರ್ಷಗಳಲ್ಲಿ ತೆಗೆದುಕೊಳ್ಳಬೇಕಾದ ಪ್ರಮುಖ ನಿರ್ಧಾರಗಳು ಮತ್ತು ಮುಂದಿನ 25 ವರ್ಷಗಳವರೆಗೆ ನವ ಭಾರತವನ್ನು ಮಾಡುವ ದೃಷ್ಟಿಕೋನವನ್ನು ನಾವು ಹೊಂದಿದ್ದೇವೆ ಎಂದಿದ್ದಾರೆ ಮೋದಿ.

ಪಂಜಾಬ್ ಅನ್ನು ‘ವಿಕಸಿತ್ (ಅಭಿವೃದ್ಧಿ)’ ಮಾಡುವ ಸಮಯ ಬಂದಿದೆ. ನಾನು ಪಂಜಾಬ್‌ನ ಮನಸ್ಥಿತಿಯನ್ನು ಗ್ರಹಿಸಿದ್ದೇನೆ. ಅವರು ಈ ಬಾರಿ ಮೋದಿಗೆ ಮತ ಹಾಕಲು ನಿರ್ಧರಿಸಿದ್ದಾರೆ’ ಎಂದು ಪ್ರಧಾನಿ ಹೇಳಿದ್ದಾರೆ.

ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಪ್ರತಿಪಕ್ಷಗಳು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿದ ಮೋದಿ, ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಸದಸ್ಯರು ಸಂವಿಧಾನ ಮತ್ತು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಫೂರ್ತಿಗೆ ಅವಮಾನ ಮಾಡುತ್ತಿದ್ದಾರೆ. “ಅವರು ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಮಾತ್ರ ನೀಡಲು ಬಯಸುತ್ತಾರೆ. ಮೋದಿ ಅವರ ಷಡ್ಯಂತ್ರವನ್ನು ಬಹಿರಂಗಪಡಿಸಿದ್ದಾರೆ. ಅದಕ್ಕಾಗಿಯೇ ಅವರು ನನ್ನನ್ನು ನಿಂದಿಸುತ್ತಿದ್ದಾರೆ ಎಂದಿದ್ದಾರೆ.

“ಮತ ಬ್ಯಾಂಕ್ ಮೇಲಿನ ಪ್ರೀತಿಯಿಂದಾಗಿ, ವಿಭಜನೆಯ ಸಮಯದಲ್ಲಿ ಕರ್ತಾರ್‌ಪುರ ಸಾಹಿಬ್‌ನ ಮೇಲೆ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅವರಿಗೆ ಸಾಧ್ಯವಾಗಲಿಲ್ಲ. ತಮ್ಮ ಮತಬ್ಯಾಂಕ್‌ಗಾಗಿ ರಾಮಮಂದಿರವನ್ನು ನಿರಂತರವಾಗಿ ವಿರೋಧಿಸುತ್ತಿರುವವರು ಇವರು. ತುಷ್ಟೀಕರಣದ ರಾಜಕೀಯದಿಂದಾಗಿ ಇಂಡಿಯಾ ಮೈತ್ರಿಕೂಟವು ಸಿಎಎ ಅನ್ನು ವಿರೋಧಿಸುತ್ತಿದೆ. ಸರ್ಕಾರ ರಚಿಸಿದ ಬಳಿಕ ಆದಂಪುರದ ವಿಮಾನ ನಿಲ್ದಾಣಕ್ಕೆ ಗುರು ರವಿದಾಸ್ ಹೆಸರಿಡಲಾಗುವುದು ಎಂದು ಮೋದಿ ಹೇಳಿದ್ದಾರೆ.

ಎಎಪಿ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಕಲಿತಿದೆ

ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಟೀಕಿಸಿದ ಮೋದಿ, ಇವರು ಭ್ರಷ್ಟಾಚಾರದ ಪಾಠಗಳನ್ನು ಕಾಂಗ್ರೆಸ್ ನಿಂದ ಕಲಿತಿದ್ದಾರೆ ಎಂದು ಹೇಳಿದರು. ಮತ್ತೊಂದು ಭ್ರಷ್ಟ ಪಕ್ಷ (ಎಎಪಿ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದೆ. ಚಂಡೀಗಢ ಮತ್ತು ದೆಹಲಿಯಲ್ಲಿ ಒಟ್ಟಿಗೆ ಸ್ಪರ್ಧಿಸುತ್ತಿರುವ ಅವರು ಇಲ್ಲಿ ಪರಸ್ಪರ ಜಗಳದ ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್ ಬೆಂಬಲದೊಂದಿಗೆ ದೆಹಲಿಯಲ್ಲಿ ಅತ್ಯಂತ ಭ್ರಷ್ಟರ ಮೊದಲ ಸರ್ಕಾರವನ್ನು ರಚಿಸಲಾಗಿದೆ ಎಂಬುದನ್ನು ಜನರು ಮರೆಯಬಾರದು, ಆದ್ದರಿಂದ ಅವರು ಭ್ರಷ್ಟ ಕಾಂಗ್ರೆಸ್‌ನಿಂದ ಭ್ರಷ್ಟಾಚಾರದ ಪಾಠಗಳನ್ನು ಕಲಿತಿದ್ದಾರೆ ಎಂದು ಅವರು ಹೇಳಿದರು. ‘ಕಾಂಗ್ರೆಸ್ ಭ್ರಷ್ಟಾಚಾರದ ತಾಯಿ. 60 ವರ್ಷಗಳಿಂದ ಕಾಂಗ್ರೆಸ್ ಅನೇಕ ಭ್ರಷ್ಟಾಚಾರದ ಘಟನೆಗಳನ್ನು ಮಾಡಿದೆ. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಪಿಎಚ್‌ಡಿ ಮಾಡಿದೆ’ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಯಾವ ಪ್ರಧಾನಿಯೂ ಇಂತಹ ದ್ವೇಷದ ಮಾತುಗಳನ್ನಾಡಿಲ್ಲ; ಮೋದಿ ವಿರುದ್ಧ ಮನಮೋಹನ್ ಸಿಂಗ್ ಅಸಮಾಧಾನ

ಪಂಜಾಬ್‌ನಲ್ಲಿನ ಮಾದಕವಸ್ತು ಹಾವಳಿ ಮತ್ತು ದೆಹಲಿಯಲ್ಲಿ ಆಪಾದಿತ ಮದ್ಯ ಹಗರಣದ ಕುರಿತು ಆಮ್ ಆದ್ಮಿ ಪಕ್ಷ ವಿರುದ್ದ ಟೀಕಾ ಪ್ರಹಾರ ಮಾಡಿದ ಪ್ರಧಾನಿ, “ಈ ಜನರು (ಎಎಪಿ) ಪಂಜಾಬ್ ಅನ್ನು ಡ್ರಗ್ಸ್‌ನಿಂದ ಮುಕ್ತಗೊಳಿಸುವ ಹೆಸರಿನಲ್ಲಿ ಬಂದರು. ಆದರೆ ಅವರು ಡ್ರಗ್ಸ್ ಅನ್ನು ತಮ್ಮ ಆದಾಯದ ಸಾಧನವನ್ನಾಗಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಮದ್ಯದ ಹಗರಣ ಇಡೀ ಜಗತ್ತಿಗೆ ಗೊತ್ತಿದೆ. ಇಲ್ಲಿ ಗಣಿ ಮಾಫಿಯಾ ಕೂಡ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. 13 ಲೋಕಸಭಾ ಸ್ಥಾನಗಳಿಗೆ ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿದೆ. 2024 ರ ಲೋಕಸಭಾ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲಾಗುತ್ತದೆ, ಆರು ವಾರಗಳ ಮತದಾನ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯುತ್ತದೆ. ಎಣಿಕೆ ಮತ್ತು ಫಲಿತಾಂಶಗಳು ಜೂನ್ 4 ರಂದು ಪ್ರಕಟವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ