Chikkodi Lok Sabha Election Result 2024: ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು

Chikkodi Lok Sabha Election Results 2024 Live Counting Updates: ಪ್ರಿಯಾಂಕಾ ಪರ  ಹಾಲಿ ಸಚಿವರು, ಸರ್ಕಾರದ ಮುಖ್ಯಸ್ಥರು  ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಅಂದಹಾಗೆ ಪ್ರಿಯಾಂಕಾ ಅವರಿಗೆ ಅನುಭವದ ಕೊರತೆ ಇದೆ.ಆದರೆ  ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಅವರು 2019ರಲ್ಲಿ ಬಹುಮತ ಪಡೆದು ಗೆದ್ದವರು. ಅವರಿಗೆ ಸಾಕಷ್ಟು ಅನುಭವ ಇದೆ. ಕ್ಷೇತ್ರದ ಬಗ್ಗೆ ಹೇಳುವುದಾದರೆ ಇಲ್ಲಿ  ಜಾತಿ ಮತಗಳ ಮೇಲೆ ಲೆಕ್ಕಾಚಾರ ನಡೆಯಲಿದೆ.

Chikkodi Lok Sabha Election Result 2024: ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು
ಅಣ್ಣಾ ಸಾಹೇಬ ಜೊಲ್ಲೆ-ಪ್ರಿಯಾಂಕಾ ಜಾರಕಿಹೊಳಿ
Follow us
| Updated By: ವಿವೇಕ ಬಿರಾದಾರ

Updated on:Jun 04, 2024 | 3:03 PM

ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ (Chikkodi Lok Sabha Constituency) ಸಚಿವ ಸತೀಶ್​ ಜಾರಕಿಹೊಳಿ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಗೆದ್ದಿದ್ದಾರೆ.  ಬಿಜೆಪಿಯ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ (Annasaheb Shankar Jolle) ಅವರಿಗೆ ಸೋಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಗೆ ಚಿಕ್ಕೋಡಿ ಗೆಲುವಿನ ಲೋಕಸಭಾ ಕ್ಷೇತ್ರವಾದರೂ ಈ ಬಾರಿ ಇಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

ಈ ಭಾಗದಲ್ಲಿ ಪ್ರಭಾವಿಗಳಾಗಿರುವ ಜಾರಕಿಹೊಳಿ ಕುಟುಂಬದ ಸತೀಶ್ ಜಾರಕಿಹೊಳಿ ಪುತ್ರಿ ಕಣಕ್ಕಿಳಿರುವುದು ವಿಶೇಷ.ಅವರನ್ನು ಕಾಂಗ್ರೆಸ್ ಮುಖಂಡರು ಒಮ್ಮತದಿಂದ ಚುನಾವಣೆಗೆ ಆಯ್ಕೆ ಮಾಡಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಪರ  ಹಾಲಿ ಸಚಿವರು, ಸರ್ಕಾರದ ಮುಖ್ಯಸ್ಥರು  ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಅಂದಹಾಗೆ ಪ್ರಿಯಾಂಕಾ ಅವರಿಗೆ ಅನುಭವದ ಕೊರತೆ ಇದೆ.ಆದರೆ  ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಅವರು 2019ರಲ್ಲಿ ಬಹುಮತ ಪಡೆದು ಗೆದ್ದವರು. ಅವರಿಗೆ ಸಾಕಷ್ಟು ಅನುಭವ ಇದೆ. ಕ್ಷೇತ್ರದ ಬಗ್ಗೆ ಹೇಳುವುದಾದರೆ ಇಲ್ಲಿ  ಜಾತಿ ಮತಗಳ ಮೇಲೆ ಲೆಕ್ಕಾಚಾರ ನಡೆಯಲಿದೆ. ಹಿಂದಿನ ಚುನಾವಣೆಗಳ ಬಗ್ಗೆ ನೋಡಿದರೆ 2014ರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4.74ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ  ಬಿಜೆಪಿಯ ರಮೇಶ್ ಕತ್ತಿ ಕಡಿಮೆ ಅಂತರದಿಂದ ಸೋತಿದ್ದರು.

2019ರಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಸೋಲಿಸಿ ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಅವರು 7.45ಲಕ್ಷ ಬಹುಮತ ಗಳಿಸಿ ವಿಜಯಸಾಧಿಸಿದ್ದರು. ಈ ಈ ಬಾರಿಯೂ  ಅಣ್ಣಾಸಾಹೇಬ್ ಜೊಲ್ಲೆ ಅವರೇ ಕಣ್ಣಕಿಳಿದಿದ್ದು, ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:48 am, Tue, 4 June 24

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ