AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥಾ ಬಿಸಿಲು! ಚುನಾವಣಾ ರ‍್ಯಾಲಿಯಲ್ಲಿ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: May 28, 2024 | 7:14 PM

Share

ರುದ್ರಪುರ ಮೇ 28: ಉತ್ತರ ಪ್ರದೇಶದ (Uttar Pradesh)  ರುದ್ರಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಲೆಯ ಮೇಲೆ ನೀರು ಸುರಿದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಗರ್ಮಿ ಹೈ ಕಾಫಿ…” (ಸಿಕ್ಕಾಪಟ್ಟೆ ಬಿಸಿಲು ಇದೆ) ಎಂದು ರಾಹುಲ್ ಹೇಳುವುದನ್ನು ಸಹ ವಿಡಿಯೊದಲ್ಲಿ ಹೇಳಬಹುದು. ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಂಥಾ ಬಿಸಿಲು ಎಂದು ಹೇಳಿದ್ದಾರೆ. ಇದಾದ ನಂತರ ನೀರಿನ ಬಾಟಲಿಯಿಂದ ಸ್ವಲ್ಪ ನೀರು ಕುಡಿದು, ಸ್ವಲ್ಪ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಇದು ಜನರ ಗಮನ ಸೆಳೆದಿದೆ. ರಾಹುಲ್ ಗಾಂಧಿಯವರ ವಿಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ (Congress) ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ, “ ಕುರ್ಚಿಯ ಬೆಲ್ಟ್ ಗಟ್ಟಿಯಾಗಿ ಕಟ್ಟಿಕೊಳ್ಳಿ ತಾಪಮಾನ ಏರುತ್ತಿದೆ, ಇಂಡಿಯಾ ಬಣದ ಸರ್ಕಾರ ಬರುತ್ತಿದೆ ಎಂದು ಬರೆದಿದೆ.

“ಆಪ್ ಥೈಲ್ಯಾಂಡ್ ಕಾ ಟಿಕೆಟ್ ಕರ್ಲೋ (ನೀವು ಥಾಯ್ಲೆಂಡ್‌ಗೆ ಟಿಕೆಟ್ ಕಾಯ್ದಿರಿಸಬಹುದು)…” ಎಂದು ಬಳಕೆದಾರರೊಬ್ಬರು ಈ ವಿಡಿಯೊಗೆ ಪ್ರತಿಕ್ರಿಯಿಸಿದ್ದು ಇನ್ನೊಬ್ಬ ವ್ಯಕ್ತಿ, “ನೈಸ್ ಜೋಕ್…” ಎಂದು ಕಾಮೆಂಟ್ ಮಾಡಿದ್ದಾರೆ.

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.

“ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ. ಇಂಡಿಯಾ ಬಣ ಸಂವಿಧಾನವನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಡುತ್ತದೆ, ಆದರೆ ಅದನ್ನು ನಾಶಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆಪ್ ನಾಯಕಿ ಅತಿಶಿಗೆ ಸಮನ್ಸ್; ಕೇಜ್ರಿವಾಲ್ ಆಕ್ರೋಶ

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಕನಸುಗಳನ್ನು ತೋರಿಸಿದೆ, ಯುವಕರ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ಆರೋಪಿಸಿದರು. ಇಲ್ಲಿಯವರೆಗೆ, ಉತ್ತರ ಪ್ರದೇಶದಲ್ಲಿ ಒಂದು (ವಾರಣಾಸಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಹೇಳುತ್ತಿದ್ದೆ. ಆದರೆ, ನಾವು ಚುನಾವಣೆಯ ಕೊನೆಯ ಹಂತದತ್ತ ಸಾಗುತ್ತಿರುವಾಗ, ಬಿಜೆಪಿ ವಿರುದ್ಧ ಜನರಲ್ಲಿ  ಸಿಕ್ಕಾಪಟ್ಟೆ ಆಕ್ರೋಶ ಇದೆ.  ಬಿಜೆಪಿ ಈ ಒಂದು ಸ್ಥಾನವನ್ನೂ ಕಳೆದುಕೊಳ್ಳುತ್ತದೆ ಎಂದು ನನಗೆ ಈಗ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ