AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥಾ ಬಿಸಿಲು! ಚುನಾವಣಾ ರ‍್ಯಾಲಿಯಲ್ಲಿ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: May 28, 2024 | 7:14 PM

Share

ರುದ್ರಪುರ ಮೇ 28: ಉತ್ತರ ಪ್ರದೇಶದ (Uttar Pradesh)  ರುದ್ರಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಲೆಯ ಮೇಲೆ ನೀರು ಸುರಿದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಗರ್ಮಿ ಹೈ ಕಾಫಿ…” (ಸಿಕ್ಕಾಪಟ್ಟೆ ಬಿಸಿಲು ಇದೆ) ಎಂದು ರಾಹುಲ್ ಹೇಳುವುದನ್ನು ಸಹ ವಿಡಿಯೊದಲ್ಲಿ ಹೇಳಬಹುದು. ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಂಥಾ ಬಿಸಿಲು ಎಂದು ಹೇಳಿದ್ದಾರೆ. ಇದಾದ ನಂತರ ನೀರಿನ ಬಾಟಲಿಯಿಂದ ಸ್ವಲ್ಪ ನೀರು ಕುಡಿದು, ಸ್ವಲ್ಪ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಇದು ಜನರ ಗಮನ ಸೆಳೆದಿದೆ. ರಾಹುಲ್ ಗಾಂಧಿಯವರ ವಿಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ (Congress) ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ, “ ಕುರ್ಚಿಯ ಬೆಲ್ಟ್ ಗಟ್ಟಿಯಾಗಿ ಕಟ್ಟಿಕೊಳ್ಳಿ ತಾಪಮಾನ ಏರುತ್ತಿದೆ, ಇಂಡಿಯಾ ಬಣದ ಸರ್ಕಾರ ಬರುತ್ತಿದೆ ಎಂದು ಬರೆದಿದೆ.

“ಆಪ್ ಥೈಲ್ಯಾಂಡ್ ಕಾ ಟಿಕೆಟ್ ಕರ್ಲೋ (ನೀವು ಥಾಯ್ಲೆಂಡ್‌ಗೆ ಟಿಕೆಟ್ ಕಾಯ್ದಿರಿಸಬಹುದು)…” ಎಂದು ಬಳಕೆದಾರರೊಬ್ಬರು ಈ ವಿಡಿಯೊಗೆ ಪ್ರತಿಕ್ರಿಯಿಸಿದ್ದು ಇನ್ನೊಬ್ಬ ವ್ಯಕ್ತಿ, “ನೈಸ್ ಜೋಕ್…” ಎಂದು ಕಾಮೆಂಟ್ ಮಾಡಿದ್ದಾರೆ.

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.

“ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ. ಇಂಡಿಯಾ ಬಣ ಸಂವಿಧಾನವನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಡುತ್ತದೆ, ಆದರೆ ಅದನ್ನು ನಾಶಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆಪ್ ನಾಯಕಿ ಅತಿಶಿಗೆ ಸಮನ್ಸ್; ಕೇಜ್ರಿವಾಲ್ ಆಕ್ರೋಶ

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಕನಸುಗಳನ್ನು ತೋರಿಸಿದೆ, ಯುವಕರ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ಆರೋಪಿಸಿದರು. ಇಲ್ಲಿಯವರೆಗೆ, ಉತ್ತರ ಪ್ರದೇಶದಲ್ಲಿ ಒಂದು (ವಾರಣಾಸಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಹೇಳುತ್ತಿದ್ದೆ. ಆದರೆ, ನಾವು ಚುನಾವಣೆಯ ಕೊನೆಯ ಹಂತದತ್ತ ಸಾಗುತ್ತಿರುವಾಗ, ಬಿಜೆಪಿ ವಿರುದ್ಧ ಜನರಲ್ಲಿ  ಸಿಕ್ಕಾಪಟ್ಟೆ ಆಕ್ರೋಶ ಇದೆ.  ಬಿಜೆಪಿ ಈ ಒಂದು ಸ್ಥಾನವನ್ನೂ ಕಳೆದುಕೊಳ್ಳುತ್ತದೆ ಎಂದು ನನಗೆ ಈಗ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!