AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥಾ ಬಿಸಿಲು! ಚುನಾವಣಾ ರ‍್ಯಾಲಿಯಲ್ಲಿ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 28, 2024 | 7:14 PM

Share

ರುದ್ರಪುರ ಮೇ 28: ಉತ್ತರ ಪ್ರದೇಶದ (Uttar Pradesh)  ರುದ್ರಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಲೆಯ ಮೇಲೆ ನೀರು ಸುರಿದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಗರ್ಮಿ ಹೈ ಕಾಫಿ…” (ಸಿಕ್ಕಾಪಟ್ಟೆ ಬಿಸಿಲು ಇದೆ) ಎಂದು ರಾಹುಲ್ ಹೇಳುವುದನ್ನು ಸಹ ವಿಡಿಯೊದಲ್ಲಿ ಹೇಳಬಹುದು. ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಂಥಾ ಬಿಸಿಲು ಎಂದು ಹೇಳಿದ್ದಾರೆ. ಇದಾದ ನಂತರ ನೀರಿನ ಬಾಟಲಿಯಿಂದ ಸ್ವಲ್ಪ ನೀರು ಕುಡಿದು, ಸ್ವಲ್ಪ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಇದು ಜನರ ಗಮನ ಸೆಳೆದಿದೆ. ರಾಹುಲ್ ಗಾಂಧಿಯವರ ವಿಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ (Congress) ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ, “ ಕುರ್ಚಿಯ ಬೆಲ್ಟ್ ಗಟ್ಟಿಯಾಗಿ ಕಟ್ಟಿಕೊಳ್ಳಿ ತಾಪಮಾನ ಏರುತ್ತಿದೆ, ಇಂಡಿಯಾ ಬಣದ ಸರ್ಕಾರ ಬರುತ್ತಿದೆ ಎಂದು ಬರೆದಿದೆ.

“ಆಪ್ ಥೈಲ್ಯಾಂಡ್ ಕಾ ಟಿಕೆಟ್ ಕರ್ಲೋ (ನೀವು ಥಾಯ್ಲೆಂಡ್‌ಗೆ ಟಿಕೆಟ್ ಕಾಯ್ದಿರಿಸಬಹುದು)…” ಎಂದು ಬಳಕೆದಾರರೊಬ್ಬರು ಈ ವಿಡಿಯೊಗೆ ಪ್ರತಿಕ್ರಿಯಿಸಿದ್ದು ಇನ್ನೊಬ್ಬ ವ್ಯಕ್ತಿ, “ನೈಸ್ ಜೋಕ್…” ಎಂದು ಕಾಮೆಂಟ್ ಮಾಡಿದ್ದಾರೆ.

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.

“ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ. ಇಂಡಿಯಾ ಬಣ ಸಂವಿಧಾನವನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಡುತ್ತದೆ, ಆದರೆ ಅದನ್ನು ನಾಶಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆಪ್ ನಾಯಕಿ ಅತಿಶಿಗೆ ಸಮನ್ಸ್; ಕೇಜ್ರಿವಾಲ್ ಆಕ್ರೋಶ

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಕನಸುಗಳನ್ನು ತೋರಿಸಿದೆ, ಯುವಕರ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ಆರೋಪಿಸಿದರು. ಇಲ್ಲಿಯವರೆಗೆ, ಉತ್ತರ ಪ್ರದೇಶದಲ್ಲಿ ಒಂದು (ವಾರಣಾಸಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಹೇಳುತ್ತಿದ್ದೆ. ಆದರೆ, ನಾವು ಚುನಾವಣೆಯ ಕೊನೆಯ ಹಂತದತ್ತ ಸಾಗುತ್ತಿರುವಾಗ, ಬಿಜೆಪಿ ವಿರುದ್ಧ ಜನರಲ್ಲಿ  ಸಿಕ್ಕಾಪಟ್ಟೆ ಆಕ್ರೋಶ ಇದೆ.  ಬಿಜೆಪಿ ಈ ಒಂದು ಸ್ಥಾನವನ್ನೂ ಕಳೆದುಕೊಳ್ಳುತ್ತದೆ ಎಂದು ನನಗೆ ಈಗ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!