AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಲ್ಹಾದ್ ಜೋಶಿ ಗೆಲುವು

Dharwad Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಯ ಪ್ರಹ್ಲಾದ್​ ಜೋಶಿ ಅವರಿಗೆ ಇದು ಐದನೇ ಚುನಾವಣೆಯಾಗಿದ್ದು, ಇವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್​ನ ವಿನೋದ ಅಸೂಟಿ ಅವರಿಗೆ ಮೊದಲ ಚುನಾವಣೆಯಾಗಿದೆ. ಇಬ್ಬರ ಮಧ್ಯೆ ಪ್ರಭಲ ಪೈಪೋಟಿ ಏರ್ಪಟ್ಟಿದೆ. ಯಾರು ಗೆಲ್ಲುತ್ತಾರೆ ಕೆಲವೇ ಕ್ಷಣದಲ್ಲಿ ತಿಳಿಯಲಿದೆ. ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...

ಧಾರವಾಡ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಲ್ಹಾದ್ ಜೋಶಿ ಗೆಲುವು
ಪ್ರಲ್ಹಾದ್ ಜೋಶಿ
ವಿವೇಕ ಬಿರಾದಾರ
|

Updated on:Jun 04, 2024 | 2:03 PM

Share

ಧಾರವಾಡ, ಜೂನ್​ 04: ಧಾರವಾಡ ಲೋಕಸಭಾ ಕ್ಷೇತ್ರ (Dharwad Lok Sabha Constituency) ಉತ್ತರ ಕರ್ನಾಟಕದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. 1996ರಿಂದ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಇಂತಹ ಕ್ಷೇತ್ರದಲ್ಲಿ 2004 ರಿಂದ ಇಲ್ಲಿಯವರೆಗೂ ಬಿಜೆಪಿ ಪ್ರಲ್ಹಾದ್ ಜೋಶಿ ಅವರನ್ನ ಕಣಕ್ಕಿಳಿಸಿದೆ. ಈ ಹಿಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಪ್ರಲ್ಹಾದ್ ಜೋಶಿಯವರು ಐದನೇ  ಬಾರಿಗೆ ಗೆಲ್ಲುವು ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದೆ. ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿದ್ದ ಪ್ರಲ್ಹಾದ್ ಜೋಶಿ ಅವರ ವಿರುದ್ಧ ಯುವ ರಾಜಕಾರಣಿ ಕಾಂಗ್ರೆಸ್​ನ ವಿನೋದ ಅಸೂಟಿ ಸ್ಪರ್ಧಿಸಿ ಸೋಲುಂಡಿದ್ದಾರೆ.

ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಾಣವಾಗಿದೆ. ಪ್ರಲ್ಹಾದ್ ಜೋಶಿ ಗೆದ್ದರೆ ಅದು ಈ ಕ್ಷೇತ್ರದಲ್ಲಿ ದಾಖಲೆಯ ಗೆಲುವು ಆಗಲಿದೆ. ಇನ್ನು ವಿನೋದ್​ ಅಸೂಟಿ ಅವರು ಗೆದ್ದರೆ ಕಾಂಗ್ರೆಸ್​ ತನ್ನ ಕ್ಷೇತ್ರವನ್ನು ಮರಳಿ ಪಡೆದಂತಾಗುತ್ತದೆ. ಹಾಗಿದ್ದರೆ ಇಬ್ಬರ ನಡುವಿನ ಹಣಾಹಣಿ ಹೇಗಿದೆ ಇಲ್ಲಿದೆ ವಿವರ…

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ : 18,31,976

ಚಲಾವಣೆಯಾದ ಮತಗಳು: 13,62,421

ಈ ಹಿಂದಿನ ಚುನಾವಣೆಗಳ ಫಲಿತಾಂಶ

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

ಇದಕ್ಕೂ ಮುನ್ನ 2014ರ ಲೋಕಸಭಾ ಚುನಾವಣೆಯಲ್ಲೂ ಸಂಸದ ಪ್ರಹ್ಲಾದ್​ ಜೋಶಿಯವರೇ ಗೆಲವು ಸಾಧಿಸಿದ್ದರು. ಈ ಚುನಾವಣೆಯಲ್ಲೂ ಪ್ರಹ್ಲಾದ್​ ಜೋಶಿಯವರ ವಿರುದ್ಧ ವಿನಯ ಕುಲಕರ್ಣಿಯವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪ್ರಹ್ಲಾದ್​ ಜೋಶಿಯವರು 5,43,395 ಮತಗಳನ್ನು ಪಡೆದಿದ್ದರು. ಇನ್ನು ವಿನಯ್​ ಕುಲಕರ್ಣಿಯವರು 4,31,738 ಮತಗಳನ್ನು ಪಡೆದಿದ್ದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರ 1996ರ ಲೋಕಸಭಾ ಚುನಾವಣೆವರೆಗೂ ಕಾಂಗ್ರೆಸ್​ನ ಭದ್ರಕೋಟೆಯಾಗಿತ್ತು. 1996ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್​ ಕೋಟೆ ಮೇಲೆ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಿತು. ಅಲ್ಲಿಂದ ಇಲ್ಲಿಯವರೆಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Tue, 4 June 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?