AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

Dharwad Lok Sabha Election Result: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಪ್ರಲ್ಹಾದ್ ಜೋಶಿ ಅವರೇ ವಿಜಯಶಾಲಿಯಾಗಿದ್ದಾರೆ. ಈ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದ ಮೊದಲ ನಾಯಕರಾಗಿದ್ದಾರೆ. ಪ್ರಲ್ಹಾದ್​ ಜೋಶಿ ಐದನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.

Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ
ಸಂಸದ ಪ್ರಲ್ಹಾದ್​ ಜೋಶಿ
ವಿವೇಕ ಬಿರಾದಾರ
|

Updated on:Jun 04, 2024 | 2:34 PM

Share

ಧಾರವಾಡ, ಜೂನ್​ 04: ಧಾರವಾಡ ಲೋಕಸಭಾ ಕ್ಷೇತ್ರ (Dharwad Lok Sabha Constituency) ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ (Pralhad Joshi) ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು. ಇನ್ನು ಕಾಂಗ್ರೆಸ್​ ಹೊಸ ಮುಖಕ್ಕೆ ಮಣೆ ಹಾಕಿದ್ದು ವಿನೋದ ಅಸೂಟಿ (Vinod Sooti) ಅವರನ್ನು ಕಣಕ್ಕಿಳಿತ್ತು. ಸಂಸದ ಪ್ರಲ್ಹಾದ್ ಜೋಶಿಯವರು ವಿನೋದ್​ ಅಸೂಟಿ ಅವರನ್ನು ಸೋಲಿಸಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

ಇದಕ್ಕೂ ಮುನ್ನ 2014ರ ಲೋಕಸಭಾ ಚುನಾವಣೆಯಲ್ಲೂ ಸಂಸದ ಪ್ರಹ್ಲಾದ್​ ಜೋಶಿಯವರೇ ಗೆಲವು ಸಾಧಿಸಿದ್ದರು. ಈ ಚುನಾವಣೆಯಲ್ಲೂ ಪ್ರಹ್ಲಾದ್​ ಜೋಶಿಯವರ ವಿರುದ್ಧ ವಿನಯ ಕುಲಕರ್ಣಿಯವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪ್ರಹ್ಲಾದ್​ ಜೋಶಿಯವರು 5,43,395 ಮತಗಳನ್ನು ಪಡೆದಿದ್ದರು. ಇನ್ನು ವಿನಯ್​ ಕುಲಕರ್ಣಿಯವರು 4,31,738 ಮತಗಳನ್ನು ಪಡೆದಿದ್ದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರ 1996ರ ಲೋಕಸಭಾ ಚುನಾವಣೆವರೆಗೂ ಕಾಂಗ್ರೆಸ್​ನ ಭದ್ರಕೋಟೆಯಾಗಿತ್ತು. 1996ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್​ ಕೋಟೆ ಮೇಲೆ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಿತು. ಅಲ್ಲಿಂದ ಇಲ್ಲಿಯವರೆಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Tue, 4 June 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು