AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

Dharwad Lok Sabha Election Result: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಪ್ರಲ್ಹಾದ್ ಜೋಶಿ ಅವರೇ ವಿಜಯಶಾಲಿಯಾಗಿದ್ದಾರೆ. ಈ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದ ಮೊದಲ ನಾಯಕರಾಗಿದ್ದಾರೆ. ಪ್ರಲ್ಹಾದ್​ ಜೋಶಿ ಐದನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.

Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ
ಸಂಸದ ಪ್ರಲ್ಹಾದ್​ ಜೋಶಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 04, 2024 | 2:34 PM

Share

ಧಾರವಾಡ, ಜೂನ್​ 04: ಧಾರವಾಡ ಲೋಕಸಭಾ ಕ್ಷೇತ್ರ (Dharwad Lok Sabha Constituency) ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ (Pralhad Joshi) ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು. ಇನ್ನು ಕಾಂಗ್ರೆಸ್​ ಹೊಸ ಮುಖಕ್ಕೆ ಮಣೆ ಹಾಕಿದ್ದು ವಿನೋದ ಅಸೂಟಿ (Vinod Sooti) ಅವರನ್ನು ಕಣಕ್ಕಿಳಿತ್ತು. ಸಂಸದ ಪ್ರಲ್ಹಾದ್ ಜೋಶಿಯವರು ವಿನೋದ್​ ಅಸೂಟಿ ಅವರನ್ನು ಸೋಲಿಸಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

ಇದಕ್ಕೂ ಮುನ್ನ 2014ರ ಲೋಕಸಭಾ ಚುನಾವಣೆಯಲ್ಲೂ ಸಂಸದ ಪ್ರಹ್ಲಾದ್​ ಜೋಶಿಯವರೇ ಗೆಲವು ಸಾಧಿಸಿದ್ದರು. ಈ ಚುನಾವಣೆಯಲ್ಲೂ ಪ್ರಹ್ಲಾದ್​ ಜೋಶಿಯವರ ವಿರುದ್ಧ ವಿನಯ ಕುಲಕರ್ಣಿಯವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪ್ರಹ್ಲಾದ್​ ಜೋಶಿಯವರು 5,43,395 ಮತಗಳನ್ನು ಪಡೆದಿದ್ದರು. ಇನ್ನು ವಿನಯ್​ ಕುಲಕರ್ಣಿಯವರು 4,31,738 ಮತಗಳನ್ನು ಪಡೆದಿದ್ದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರ 1996ರ ಲೋಕಸಭಾ ಚುನಾವಣೆವರೆಗೂ ಕಾಂಗ್ರೆಸ್​ನ ಭದ್ರಕೋಟೆಯಾಗಿತ್ತು. 1996ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್​ ಕೋಟೆ ಮೇಲೆ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಿತು. ಅಲ್ಲಿಂದ ಇಲ್ಲಿಯವರೆಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Tue, 4 June 24

Follow Us
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?