AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ

2014ರ ಲೋಕಸಭೆ ಚುನಾವಣೆಯಿಂದೀಚೆಗೆ ಕರ್ನಾಟಕದಲ್ಲಿ ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚುತ್ತಲೇ ಇತ್ತು. ಇದೀಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಮಹಿಳೆಯರು ಪುರುಷರನ್ನು ಓವರ್​ಟೇಕ್ ಮಾಡಿದ್ದಾರೆ! ಅಂದರೆ, ಪುರುಷರಿಗಿಂತಲೂ ಹೆಚ್ಚು ಸಂಖ್ಯೆಯ ಮಹಿಳೆಯರು ಮತದಾನ ಮಾಡಿದ್ದಾರೆ. ಆಯೋಗದ ಅಂಕಿಅಂಶಗಳು ಇಲ್ಲಿವೆ.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ
ಗಣಪತಿ ಶರ್ಮಾ
|

Updated on: May 02, 2024 | 9:08 AM

Share

ಬೆಂಗಳೂರು, ಮೇ 2: ಏಪ್ರಿಲ್ 26 ರಂದು ಕರ್ನಾಟಕದ (Karnataka) 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ (Lok Sabha Elections) ಪುರುಷರಿಗಿಂತ ಮಹಿಳೆಯರೇ (Woman Voters) ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಪ್ರಮಾಣದಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದಿದ್ದರೂ, ಮಹಿಳಾ ಮತದಾರರು ಹೆಚ್ಚಾಗುವ ಪ್ರವೃತ್ತಿ ಮುಂದುವರೆದಿರುವುದನ್ನು ಇದು ಸೂಚಿಸಿದೆ. ಕೇಂದ್ರ ಚುನಾವಣಾ ಆಯೋಗವು (Election Commission of India) ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪುರುಷರ ಮತದಾನ ಪ್ರಮಾಣ ಶೇಕಡಾ 69.48 ಆಗಿದ್ದರೆ, ಮಹಿಳೆಯರ ಮತದಾನ ಪ್ರಮಾಣ 69.65 ಆಗಿದೆ. ಒಟ್ಟು 1,00,16,921 ಪುರುಷರು ಮತ ಚಲಾಯಿಸಿದರೆ 1,00,20,796 ಮಹಿಳೆಯರು ಮತ ಚಲಾಯಿಸಿದ್ದಾರೆ. ಅಂದರೆ, ಪುರುಷ ಮತದಾರರಿಗಿಂತ ಮಹಿಳಾ ಮತದಾರರು 3,875 ಹೆಚ್ಚಿರುವುದನ್ನು ಇದು ತೋರಿಸಿದೆ.

ಬೆಂಗಳೂರು ಉತ್ತರ, ಸೆಂಟ್ರಲ್, ದಕ್ಷಿಣ, ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗಿಂತ ಪುರುಷ ಮತದಾರರ ಸಂಖ್ಯೆ ಹೆಚ್ಚಿತ್ತು. ಆಗ ಪುರುಷರ ಮತದಾನ ಪ್ರಮಾಣ ಶೇ 69.55 ಆಗಿದ್ದರೆ, ಮಹಿಳೆಯರದ್ದು ಶೇ 67.65 ಆಗಿತ್ತು. 2014 ರಲ್ಲಿ ಪುರುಷ ಮತದಾರರು ಶೇ 68.59 ಆಗಿದ್ದರೆ ಮಹಿಳಾ ಮತದಾರರ ಪ್ರಮಾಣ ಶೇ 65.79 ಆಗಿತ್ತು.

ಮಹಿಳಾ ಸಬಲೀಕರಣ, ಸುಧಾರಿತ ಶಿಕ್ಷಣ ಮತ್ತು ಹೆಚ್ಚಿದ ಜಾಗೃತಿಯು ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಏಳು ರಾಜ್ಯಗಳಲ್ಲಿ ಮಹಿಳಾ ಮತದಾನದ ಪ್ರಮಾಣ ಹೆಚ್ಚಾಗಿತ್ತು ಎಂದು ವರದಿಯೊಂದು ಉಲ್ಲೇಖಿಸಿದೆ.

ಯಾವೆಲ್ಲ ರಾಜ್ಯಗಳಲ್ಲಿ ಮಹಿಳಾ ಮತದಾನ ಹೆಚ್ಚಳ?

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಮಣಿಪುರ, ಮೇಘಾಲಯ, ಪುದುಚೇರಿ, ನಾಗಾಲ್ಯಾಂಡ್, ತಮಿಳುನಾಡು, ಉತ್ತರಾಖಂಡ, ಪಶ್ಚಿಮ ಬಂಗಾಳ, ಬಿಹಾರ, ಕೇರಳ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಹಂತ-1 ಮತ್ತು ಹಂತ-2 ರಲ್ಲಿ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ

ಮತದಾರರಲ್ಲಿ ಜಾಗೃತಿಯನ್ನು ಮೂಡಿಸಲು ಆಯೋಜಿಸಿದ್ದ ಸಂವಾದ ಕಾರ್ಯಕ್ರಮಗಳಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರು ವಿವರಗಳನ್ನು ತಿಳಿದುಕೊಳ್ಳಲು ಮತ್ತು ಮತ ಚಲಾಯಿಸಲು ಹೆಚ್ಚು ಉತ್ಸುಕರಾಗಿದ್ದುದು ಕಂಡುಬಂದಿತ್ತು ಎಂದು ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿಯೂ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು. ಇಲ್ಲಿಯೂ ಪುರುಷರಿಗಿಂತ ಮಹಿಳೆಯರ ಮತದಾನ ಹೆಚ್ಚುತ್ತದೆಯೇ ಎಂದು ಕಾದು ನೋಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಹೆಚ್ಚು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ