Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಲೋಕಸಭಾ ಚುನಾವಣೆ 2024 ಫಲಿತಾಂಶ: ಜೆಡಿಎಸ್​ ಅಭ್ಯರ್ಥಿ ಮಲ್ಲೇಶ್​​ಗೆ ಗೆಲುವು

Kolar Lok Sabha Election Results 2024 Live Counting Updates: ಕೋಲಾರ ಲೋಕಸಭಾ ಚುನಾವಣೆ 2024 ಫಲಿತಾಂಶ ಪ್ರಕಟವಾಗಿದೆ. ಜಿದ್ದಾಜಿದ್ದಿನ ಕಣವಾಗಿದ್ದ ಕೋಲಾರದಲ್ಲಿ ಜೆಡಿಎಸ್​ ಅಭ್ಯರ್ಥಿ ಮಲ್ಲೇಶ್ ಬಾಬು ಅವರು 45,000ಕ್ಕೂ ಅಧಿಕ ಮತಗಳ ಅಂತರದಿಂದ ​​ಗೆಲುವು ಸಾಧಿಸಿದ್ದಾರೆ.

ಕೋಲಾರ ಲೋಕಸಭಾ ಚುನಾವಣೆ 2024 ಫಲಿತಾಂಶ: ಜೆಡಿಎಸ್​ ಅಭ್ಯರ್ಥಿ ಮಲ್ಲೇಶ್​​ಗೆ ಗೆಲುವು
ಮಲ್ಲೇಶ್​ ಬಾಬು
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on:Jun 04, 2024 | 1:06 PM

ಬೆಂಗಳೂರು, ಜೂನ್ 4: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು ಸಾಧಿಸಿದ್ದಾರೆ. 45, 000ಕ್ಕೂ ಅಧಿಕ ಮತಗಳ ಅಂತರದಿಂದ ವಿಜಯಪತಾಕೆ ಹಾರಿಸಿದ್ದಾರೆ. ಇವರ ಸ್ಪರ್ಧಿಸಿದ್ದ ಬೆಂಗಳೂರು ಮೂಲದ ಮಾಜಿ ಮೇಯರ್​ ವಿಜಯ್​ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್​ ಪರಾಭವಗೊಂಡಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 1984 ರಲ್ಲಿ ಡಾ. ವೆಂಕಟೇಶ್ ಜೆ.ಡಿ.ಎಸ್ ಪಕ್ಷದಿಂದ ಜಯಗಳಿಸಿದ್ದನ್ನು ಹೊರತು ಪಡಿಸಿ ಅಲ್ಲಿಂದ ಈ ಕ್ಷೇತ್ರ ಕಾಂಗ್ರೆಸ್ ಮಯವಾಗಿತ್ತು. 1989ರಿಂದ 8 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಕೋಲಾರ ಲೋಕಸಭಾ ವ್ಯಾಪ್ತಿಯಲ್ಲಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಕ್ಷೇತ್ರದಲ್ಲಿ 1984ರಲ್ಲಿ ಡಾ. ವೆಂಕಟೇಶ್ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಗೊಂಡ ನಂತರ 2019ರ ವರೆಗೆ ಬೇರೆ ಯಾವುದೇ ಪಕ್ಷ ಕೋಲಾರ ಕ್ಷೇತ್ರದಲ್ಲಿ ಜಯಗಳಿಸಿಲ್ಲ. 1989ರಲ್ಲಿ ರಾಮಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದರು.

ಅದಾದ ನಂತರ 1991 ರಲ್ಲಿ ಬಂದ ಉಪಚುನಾವಣೆಯಲ್ಲಿ ಹಾಲಿ ಆಹಾರ ಸಚಿವ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಸ್ಪರ್ಧಿಸಿ ಸತತವಾಗಿ 7 ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಕೋಲಾರವನ್ನು ಕಾಂಗ್ರೆಸ್​ ಪಕ್ಷದ ಭದ್ರಕೋಟೆಯನ್ನಾಗಿ ಮಾಡಿದ್ದರು. ನಂತರ ಅವರು ಕಳೆದ 2019 ರ ಚುನಾವಣೆಯಲ್ಲಿ ಕೆಹೆಚ್​ ಮುನಿಯಪ್ಪ ವಿರೋಧಿ ಅಲೆ ಹಾಗೂ ಕಾಂಗ್ರೆಸ್​ ಪಕ್ಷದಲ್ಲಿನ ಗುಂಪುಗಾರಿಕೆ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಎಸ್​​. ಮುನಿಸ್ವಾಮಿ ವಿರುದ್ದ ಕೆ.ಹೆಚ್​. ಮುನಿಯಪ್ಪ ಸೋಲು ಅನುಭವಿಸುವ ಮೂಲಕ ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿತ್ತು.

ಆದರೆ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬದಲಾದ ಬೆಳವಣಿಗೆಯಿಂದ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿಯಾದ ಪರಿಣಾಮ ಈ ಬಾರಿ ಹಾಲಿ ಬಿಜೆಪಿ ಸಂಸದ ಎಸ್​. ಮುನಿಸ್ವಾಮಿ ಅವರಿಗೆ ಟಿಕೆಟ್​ ಕೈತಪ್ಪಿದ್ದು, ಅದಕ್ಕೆ ಬದಲಾಗಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್​ ಪಕ್ಷದ ಎಂ ಮಲ್ಲೇಶ್​ ಬಾಬು ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಇನ್ನು ಕಾಂಗ್ರೆಸ್​ನಿಂದ ಹೊಸ ಮುಖ ಬೆಂಗಳೂರು ಮೂಲದ ಮಾಜಿ ಮೇಯರ್​ ವಿಜಯ್​ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್​ ಅವರನ್ನು ಕಣಕ್ಕಿಳಿಸಲಾಗಿತ್ತು.

Also Read: Election Results 2024 Live – ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್​ ಡೌನ್, ಕ್ಷಣ ಕ್ಷಣದ ಅಪ್ಡೇಟ್ಸ್​ ಇಲ್ಲಿದೆ 

ಸದ್ಯ ಚುನಾವಣೆಯಲ್ಲಿ ಸ್ಥಳೀಯ ಹಾಗೂ ಹೊರಗಿನ ಅಭ್ಯರ್ಥಿ ಎನ್ನುವ ಮೂಲಕ ಚುನಾವಣೆಯಲ್ಲಿ ಪ್ರಚಾರ ನಡೆಯಿತು. ಕಾಂಗ್ರೆಸ್ ತಮ್ಮ ಗ್ಯಾರಂಟಿಗಳ ಆಧಾರದಲ್ಲಿ ಮತಯಾಚನೆ ಮಾಡಿದ್ದು, ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಪಕ್ಷಗಳು ಮೋದಿ ಹೆಸರಲ್ಲಿ ಪ್ರಚಾರ ಮಾಡಿ ಬಿಜೆಪಿ ಹಾಗೂ ಜೆಡಿಎಸ್​ ಸಾಧನೆಗಳನ್ನು ಹಾಗೂ ಕಾಂಗ್ರೆಸ್​ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಮತ ಕೇಳಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ, ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಕೋಲಾರ ಇಲ್ಲಿಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಂದುಗೂಡಿಸಿ ಕೋಲಾರ ಲೋಕಸಭಾ ಕ್ಷೇತ್ರವನ್ನು ಮಾಡಲಾಗಿದೆ. ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್​​​, ಶ್ರೀನಿವಾಸಪುರ, ಮುಳಬಾಗಿಲು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ. ಅಂದಹಾಗೆ ಕ್ಷೇತ್ರದಲ್ಲಿ 17,26,914 ಮತದಾರರಿದ್ದು ಏಪ್ರಿಲ್ 26 ಶುಕ್ರವಾರದಂದು ನಡೆದಿದ್ದ ಮೊದಲ ಹಂತದ ಮತದಾನದಲ್ಲಿ ಶೇಕಡಾ 78.27 ಪ್ರಮಾಣದ ಮತದಾನವಾಗಿತ್ತು.

ಇನ್ನು ಕಳೆದ ನಾಲ್ಕು ಲೋಕಸಭಾ ಚುನಾವಣೆಯ ವಿವರ ಯಾರಿಗೆ ಎಷ್ಟೆಷ್ಟು ಮತ ಬಂದಿದೆ…

2004 ರ ಲೋಕಸಭಾ ಚುನಾವಣೆ ಕೆ.ಎಚ್.ಮುನಿಯಪ್ಪ – ಗೆಲುವು (ಕಾಂಗ್ರೆಸ್ ಪಕ್ಷ) – ಪಡೆದ ಮತ 3,85,582 ಡಿ.ಎಸ್. ವೀರಯ್ಯ – ಸೋಲು (ಬಿಜೆಪಿ ಪಕ್ಷ) – ಪಡೆದ ಮತ 3,73,947 ಎಸ್.ಎಲ್.ಗಂಗಾಧರಪ್ಪ – ಸೋಲು (ಜೆಡಿಎಸ್ ಪಕ್ಷ) – ಪಡೆದ ಮತ 83,433 ಕಾಂಗ್ರೆಸ್ ಪಕ್ಷದ ಕೆ.ಎಚ್.ಮುನಿಯಪ್ಪಗೆ 11,635 ಮತಗಳ ಅಂತರದಿಂದ ಗೆಲುವು

2009ರ ಲೋಕಸಭಾ ಚುನಾವಣೆ ಕೆ.ಎಚ್.ಮುನಿಯಪ್ಪ – ಗೆಲುವು (ಕಾಂಗ್ರೆಸ್ ಪಕ್ಷ) – ಪಡೆದ ಮತ 3,44,771 ಡಿ.ಎಸ್.ವೀರಯ್ಯ – ಸೋಲು (ಬಿಜೆಪಿ ಪಕ್ಷ) – ಪಡೆದ ಮತ 3,21,765 ಸಿ.ಚಂದ್ರಪ್ಪ – ಸೋಲು (ಜೆಡಿಎಸ್ ಪಕ್ಷ) – ಪಡೆದ ಮತ 1,99,896 ಕಾಂಗ್ರೆಸ್ ಪಕ್ಷದ ಕೆ.ಎಚ್.ಮುನಿಯಪ್ಪ 23,006 ಮತಗಳ ಅಂತರದಿಂದ ಗೆಲುವು

2014ರ ಲೋಕಸಭಾ ಚುನಾವಣೆ ಕೆ.ಎಚ್.ಮುನಿಯಪ್ಪ – ಗೆಲುವು (ಕಾಂಗ್ರೆಸ್ ಪಕ್ಷ) – 4,18,926 ಕೋಲಾರ ಕೇಶವ – ಸೋಲು (ಜೆಡಿಎಸ್ ಪಕ್ಷ) – 3,71,076 ಎಂ.ನಾರಾಯಣಸ್ವಾಮಿ – ಸೋಲು (ಬಿಜೆಪಿ ಪಕ್ಷ) – 2,67,322 ಕಾಂಗ್ರೆಸ್ ಪಕ್ಷದ ಕೆ.ಎಚ್.ಮುನಿಯಪ್ಪ 47,850 ಮತಗಳ ಅಂತರದಿಂದ ಗೆಲುವು

2019ರ ಲೋಕಸಭಾ ಚುನಾವಣೆ ಎಸ್.ಮುನಿಸ್ವಾಮಿ – ಗೆಲುವು (ಬಿಜೆಪಿ ಪಕ್ಷ) – 7,09,165 ಕೆ.ಎಚ್.ಮುನಿಯಪ್ಪ – ಸೋಲು (ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ) – 4,99,144 ನೋಟಾ – 13,889 ಬಿಜೆಪಿ ಪಕ್ಷದ ಎಸ್.ಮುನಿಸ್ವಾಮಿ 2,10,021 ಮತಗಳ ಅಂತರದಿಂದ ಗೆಲುವು

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:32 am, Tue, 4 June 24

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ