AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ

ಭಾರತ ಚುನಾವಣೆ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಆದೇಶದಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದೆ. ಈ ಬಗ್ಗೆ ಇದೀಗ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 23, 2024 | 6:49 PM

ದೆಹಲಿ, ಜ.23: ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ (Lok Sabha Election)ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದ್ದು, ಈ ಬಗ್ಗೆ  ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.

ಏಪ್ರಿಲ್​​​ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿದೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್​​ನಲ್ಲಿ ತಿಳಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಧ್ಯಮಗಳು  ಆಯೋಗವನ್ನು ಪ್ರಶ್ನಿಸಿತ್ತು. ಇದೀಗ ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ. ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಈಗಾಗಲೇ ಏಪ್ರಿಲ್​​ ಅಥವಾ ಮೇಯಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. 2019ರಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಕ್ರಿಯೆಯಂತೆ 2024ರ ಚುನಾವಣೆಯು ನಡೆಯಲಿದೆ ಎಂದು ಹೇಳಲಾಗಿದೆ. ಏಳು ಹಂತದಲ್ಲಿ ಚುನಾವಣಾ ನಡೆಯಲಿದೆ. ಇದರ ಪ್ರಕ್ರಿಯೆ ಏಪ್ರಿಲ್​​ 11ರಂದು ಪ್ರಾರಂಭವಾಗಿ ಮೇ 19ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರ ಉದ್ಘಾಟನೆ ನಂತರ ಲೋಕಸಭೆ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಚುನಾವಣೆ ಆಯೋಗದ ಈ ಸುತ್ತೋಲೆ ವೈರಲ್​​ ಸುದ್ದಿಗೆ ಪುಷ್ಠಿ ನೀಡಿದೆ. ಆದರೆ ಇದು ತಾತ್ಕಾಲಿಕ ದಿನಾಂಕ ಎಂದು ಚುನಾವಣಾ ಆಯೋಗ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Tue, 23 January 24

ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ