AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ

ಭಾರತ ಚುನಾವಣೆ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಆದೇಶದಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದೆ. ಈ ಬಗ್ಗೆ ಇದೀಗ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ
ಅಕ್ಷಯ್​ ಪಲ್ಲಮಜಲು​​
|

Updated on:Jan 23, 2024 | 6:49 PM

Share

ದೆಹಲಿ, ಜ.23: ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ (Lok Sabha Election)ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದ್ದು, ಈ ಬಗ್ಗೆ  ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.

ಏಪ್ರಿಲ್​​​ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿದೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್​​ನಲ್ಲಿ ತಿಳಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಧ್ಯಮಗಳು  ಆಯೋಗವನ್ನು ಪ್ರಶ್ನಿಸಿತ್ತು. ಇದೀಗ ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ. ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಈಗಾಗಲೇ ಏಪ್ರಿಲ್​​ ಅಥವಾ ಮೇಯಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. 2019ರಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಕ್ರಿಯೆಯಂತೆ 2024ರ ಚುನಾವಣೆಯು ನಡೆಯಲಿದೆ ಎಂದು ಹೇಳಲಾಗಿದೆ. ಏಳು ಹಂತದಲ್ಲಿ ಚುನಾವಣಾ ನಡೆಯಲಿದೆ. ಇದರ ಪ್ರಕ್ರಿಯೆ ಏಪ್ರಿಲ್​​ 11ರಂದು ಪ್ರಾರಂಭವಾಗಿ ಮೇ 19ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರ ಉದ್ಘಾಟನೆ ನಂತರ ಲೋಕಸಭೆ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಚುನಾವಣೆ ಆಯೋಗದ ಈ ಸುತ್ತೋಲೆ ವೈರಲ್​​ ಸುದ್ದಿಗೆ ಪುಷ್ಠಿ ನೀಡಿದೆ. ಆದರೆ ಇದು ತಾತ್ಕಾಲಿಕ ದಿನಾಂಕ ಎಂದು ಚುನಾವಣಾ ಆಯೋಗ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Tue, 23 January 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ