AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ

ಭಾರತ ಚುನಾವಣೆ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಆದೇಶದಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದೆ. ಈ ಬಗ್ಗೆ ಇದೀಗ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ
ಅಕ್ಷಯ್​ ಪಲ್ಲಮಜಲು​​
|

Updated on:Jan 23, 2024 | 6:49 PM

Share

ದೆಹಲಿ, ಜ.23: ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ (Lok Sabha Election)ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದ್ದು, ಈ ಬಗ್ಗೆ  ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.

ಏಪ್ರಿಲ್​​​ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿದೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್​​ನಲ್ಲಿ ತಿಳಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಧ್ಯಮಗಳು  ಆಯೋಗವನ್ನು ಪ್ರಶ್ನಿಸಿತ್ತು. ಇದೀಗ ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ. ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಈಗಾಗಲೇ ಏಪ್ರಿಲ್​​ ಅಥವಾ ಮೇಯಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. 2019ರಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಕ್ರಿಯೆಯಂತೆ 2024ರ ಚುನಾವಣೆಯು ನಡೆಯಲಿದೆ ಎಂದು ಹೇಳಲಾಗಿದೆ. ಏಳು ಹಂತದಲ್ಲಿ ಚುನಾವಣಾ ನಡೆಯಲಿದೆ. ಇದರ ಪ್ರಕ್ರಿಯೆ ಏಪ್ರಿಲ್​​ 11ರಂದು ಪ್ರಾರಂಭವಾಗಿ ಮೇ 19ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರ ಉದ್ಘಾಟನೆ ನಂತರ ಲೋಕಸಭೆ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಚುನಾವಣೆ ಆಯೋಗದ ಈ ಸುತ್ತೋಲೆ ವೈರಲ್​​ ಸುದ್ದಿಗೆ ಪುಷ್ಠಿ ನೀಡಿದೆ. ಆದರೆ ಇದು ತಾತ್ಕಾಲಿಕ ದಿನಾಂಕ ಎಂದು ಚುನಾವಣಾ ಆಯೋಗ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Tue, 23 January 24

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ