AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ

ಭಾರತ ಚುನಾವಣೆ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಆದೇಶದಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದೆ. ಈ ಬಗ್ಗೆ ಇದೀಗ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ.

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ
ಅಕ್ಷಯ್​ ಪಲ್ಲಮಜಲು​​
|

Updated on:Jan 23, 2024 | 6:49 PM

Share

ದೆಹಲಿ, ಜ.23: ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ (Lok Sabha Election)ಸಂಬಂಧಿಸಿದಂತೆ ಒಂದು ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಇದೀಗ ಈ ಆದೇಶದ ಪ್ರತಿ ವೈರಲ್​​​ ಆಗಿದ್ದು, ಈ ಬಗ್ಗೆ  ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.

ಏಪ್ರಿಲ್​​​ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿದೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್​​ನಲ್ಲಿ ತಿಳಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಧ್ಯಮಗಳು  ಆಯೋಗವನ್ನು ಪ್ರಶ್ನಿಸಿತ್ತು. ಇದೀಗ ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ. ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಈಗಾಗಲೇ ಏಪ್ರಿಲ್​​ ಅಥವಾ ಮೇಯಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. 2019ರಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಕ್ರಿಯೆಯಂತೆ 2024ರ ಚುನಾವಣೆಯು ನಡೆಯಲಿದೆ ಎಂದು ಹೇಳಲಾಗಿದೆ. ಏಳು ಹಂತದಲ್ಲಿ ಚುನಾವಣಾ ನಡೆಯಲಿದೆ. ಇದರ ಪ್ರಕ್ರಿಯೆ ಏಪ್ರಿಲ್​​ 11ರಂದು ಪ್ರಾರಂಭವಾಗಿ ಮೇ 19ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರ ಉದ್ಘಾಟನೆ ನಂತರ ಲೋಕಸಭೆ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಚುನಾವಣೆ ಆಯೋಗದ ಈ ಸುತ್ತೋಲೆ ವೈರಲ್​​ ಸುದ್ದಿಗೆ ಪುಷ್ಠಿ ನೀಡಿದೆ. ಆದರೆ ಇದು ತಾತ್ಕಾಲಿಕ ದಿನಾಂಕ ಎಂದು ಚುನಾವಣಾ ಆಯೋಗ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Tue, 23 January 24

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ