Lok Sabha Election Opinion Poll: ಲೋಕಸಭೆ ಚುನಾವಣೆ ಸಮೀಕ್ಷೆ, ಕರ್ನಾಟಕದಲ್ಲಿ ಎನ್​ಡಿಎಗೆ ಬಲ

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಗಮನಾರ್ಹ ಪ್ರದರ್ಶನ ನೀಡಲಿದೆ ಎಂದು ‘ಟಿವಿ9’ ಹಾಗೂ ಪೋಲ್​​ಸ್ಟ್ರಾಟ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಉತ್ತಮ ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಒಟ್ಟಾರೆಯಾಗಿ ಮೈತ್ರಿಯು ಎಷ್ಟು ಸ್ಥಾನ ಗೆಲ್ಲಬಹುದು? ಕಾಂಗ್ರೆಸ್ ಸಾಧನೆ ಹೇಗಿರಲಿದೆ ಎಂಬ ವಿವರ ಇಲ್ಲಿದೆ.

Lok Sabha Election Opinion Poll: ಲೋಕಸಭೆ ಚುನಾವಣೆ ಸಮೀಕ್ಷೆ, ಕರ್ನಾಟಕದಲ್ಲಿ ಎನ್​ಡಿಎಗೆ ಬಲ
ಲೋಕಸಭೆ ಚುನಾವಣೆ ಸಮೀಕ್ಷೆ, ಕರ್ನಾಟಕದಲ್ಲಿ ಎನ್​ಡಿಎಗೆ ಬಲ
Follow us
|

Updated on: Mar 16, 2024 | 7:13 PM

2019 ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಬಿಜೆಪಿ ಈ ಬಾರಿ ಕೆಲವು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬುದು ಸಮೀಕ್ಷೆ ಎಂದು ತಿಳಿದುಬಂದಿದೆ. ಅತ್ತ ಕಾಂಗ್ರೆಸ್, ಉಚಿತ ಗ್ಯಾರಂಟಿ ಕೊಡುಗೆಗಳ ಹೊರತಾಗಿಯೂ ಗಮನಾರ್ಹ ಸಾಧನೆ ಮಾಡುವುದು ಕಷ್ಟಕರ ಎನ್ನಲಾಗಿದೆ. ಸಾರ್ವಜನಿಕರು ಯಾವ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ ಎಂಬ ಕುರಿತು ‘ಟಿವಿ9’ ಹಾಗೂ ಪೋಲ್​​ಸ್ಟ್ರಾಟ್ (Polstrat) ಚುನಾವಣಾ ಪೂರ್ವ ಸಮೀಕ್ಷೆ (Tv9 Opinion Poll) ನಡೆಸಿದೆ. ಅದರ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ 23 ಸ್ಥಾನ ಗಳಿಸಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಕಾಂಗ್ರೆಸ್ ಪಕ್ಷ ಐದು ಸ್ಥಾನ ಗಳಿಸಲಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗೆದ್ದಿತ್ತು. ಬಿಜೆಪಿ 25, ಜೆಡಿಎಸ್ 1 ಹಾಗೂ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು.

ಇನ್ನು ದೇಶದ ಲೆಕ್ಕಾಚಾರಕ್ಕೆ ಬಂದರೆ, ಎನ್​​ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 333, ಜೆಡಿಯು 15, ಟಿಡಿಪಿ 14, ಎಸ್​​ಎಚ್​ಎಸ್ + ಎಪಿ 11, ಎಲ್​ಜೆಪಿ 5, ಆರ್​ಎಲ್​​​ಡಿ 3, ಎಚ್​ಎಎಂ 1, ಎಡಿಎಸ್ 1, ಜೆಡಿಎಸ್ 1 ಸೇರಿ ಒಟ್ಟು 383 ಸ್ಥಾನ ಗಳಿಸಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ 49, ಡಿಎಂಕೆ 23, ಎಂವಿಎ 20, ಎಸ್​ಪಿ 6, ಐಯುಎಂಎಲ್ 3, ಸಿಪಿಐ 2, ಸಿಪಿಐಎಂ 1, ಎನ್​ಸಿಪಿ 1, ವಿಸಿಕೆ 1 ಸೇರಿದಂತೆ ಒಟ್ಟು 106 ಸ್ಥಾನ ಗಳಿಸಲಿವೆ.

ಉಳಿದಂತೆ ಟಿಎಂಸಿ 16, ಎಎಪಿ (ಪಂಜಾಬ್) 11, ಬಿಜೆಡಿ 9, ವೈಎಸ್​ಆರ್​ಪಿ 7, ಜೆಕೆಎನ್​ಸಿ 3, ಎಂಎನ್​ಎಫ್ 1, ಎನ್​ಡಿಪಿಪಿ 1 ಸೇರಿ ಒಟ್ಟು 54 ಸ್ಥಾನ ಗಳಿಸಲಿವೆ.

ಉತ್ತರ ಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಪಾರಮ್ಯ ಈ ಬಾರಿಯೂ ಮುಂದುವರಿಯಲಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಸಮೀಕ್ಷೆ, ಎನ್​ಡಿಎ vs ಇಂಡಿಯಾ ಬಲಾಬಲ ಹೀಗಿದೆ

ಟಿವಿ9 ಸಮೀಕ್ಷೆಯ ವಿಶೇಷವೇನು?

ಈ ಸಮೀಕ್ಷೆಯನ್ನು ‘ಟಿವಿ9’ ಇತರ ಸಮೀಕ್ಷೆಗಳಿಗಿಂತ ಭಿನ್ನವಾಗಿ ಮಾಡಿದೆ. ಸಮೀಕ್ಷೆಯಲ್ಲಿ 20 ಲಕ್ಷ ಮಂದಿಯ ಅಭಿಪ್ರಾಯ ಪಡೆಯಲಾಗಿದೆ. ಜನರ ಒಳನೋಟದ ಬಗ್ಗೆ ಪೋಲ್​​ಸ್ಟ್ರಾಟ್ ಮತ್ತು ಟಿವಿ9ನಿಂದ ಅತ್ಯಂತ ವಿಶ್ವಾಸಾರ್ಹವಾದ ಭರವಸೆಯ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ದೇಶದ ಎಲ್ಲಾ 543 ಸ್ಥಾನಗಳ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಒಂದು ಲೋಕಸಭಾ ಕ್ಷೇತ್ರದೊಳಗಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂಕಿಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ