Lok Sabha Result: ವಾರಾಣಸಿಯಲ್ಲಿ ಪ್ರಧಾನಿ ಮೋದಿಗೆ ಹ್ಯಾಟ್ರಿಕ್ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶ 2024: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಯಂತೆಯೇ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದು, ಗೆಲುವಿನ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ. ಮೋದಿ ಪಡೆದ ಮತಗಳೆಷ್ಟು, ಪ್ರತಿಸ್ಪರ್ಧಿ ಅಭ್ಯರ್ಥಿಗಳು ಪಡೆದ ಮತ ಎಷ್ಟು? ಎಲ್ಲ ವಿವರಗಳು ಇಲ್ಲಿದೆ.

Lok Sabha Result: ವಾರಾಣಸಿಯಲ್ಲಿ ಪ್ರಧಾನಿ ಮೋದಿಗೆ ಹ್ಯಾಟ್ರಿಕ್ ಗೆಲುವು
ಪ್ರಧಾನಿ ಮೋದಿಗೆ ಹ್ಯಾಟ್ರಿಕ್ ಗೆಲುವು
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 04, 2024 | 8:01 PM

ವಾರಾಣಸಿ, ಜೂನ್ 4: ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result) ಪ್ರಕಟಗೊಳ್ಳುತ್ತಿದ್ದು, ವಾರಾಣಸಿ (Varanasi) ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 2014 ಹಾಗೂ 2019ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿಯಾಗಿದ್ದ ಮೋದಿ ಈ ಬಾರಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ಅಜಯ್ ರಾಯ್, ಬಿಎಸ್​​ಪಿಯಿಂದ ಅಥರ್ ಜಮಾಲ್ ಲಾರಿ ಸ್ಪರ್ಧಿಸಿದ್ದಾರೆ. ಉಳಿದಂತೆ, ದಿನೇಶ್ ಕುಮಾರ್ ಯಾದವ್, ಗಗನ್ ಪ್ರಕಾಶ್ ಯಾದವ್, ಸಂಜಯ್ ಕುಮಾರ್ ತಿವಾರಿ, ಕೋಲಿಶೆಟ್ಟಿ ಶಿವಕುಮಾರ್ ಸ್ಪರ್ಧಿಸಿದ್ದಾರೆ.  ಮೋದಿಗೆ 6,12,970 ಮತ, ಅಜಯ್  ರಾಯ್ ಅವರಿಗೆ  4,60,457 ಮತಗಳು ಲಭಿಸಿವೆ.

ಪ್ರಧಾನಿಯವರು 6,12,970 ಮತಗಳನ್ನು (54.24%) ಗಳಿಸಿದರೆ, ರಾಯ್  ಅವರು 4,60,457 ಮತಗಳನ್ನು (40.74%) ಪಡೆದರು. ಪ್ರಧಾನಿ ಹ್ಯಾಟ್ರಿಕ್ ಸಾಧಿಸುವಲ್ಲಿ ಯಶಸ್ವಿಯಾಗಿದ್ದರೂ, ಅವರ ಮತ ಹಂಚಿಕೆಯು ಸುಮಾರು 9 ಶೇಕಡಾ ಪಾಯಿಂಟ್‌ಗಳಷ್ಟು ಕುಸಿದಿರುವುದರಿಂದ ಗೆಲುವು ಕಹಿಯಾಗಿದೆ.

2019 ರಲ್ಲಿ, ಪಿಎಂ ಮೋದಿ ಅವರು 6,74,664 ಮತಗಳೊಂದಿಗೆ (63.62%) ಸ್ಥಾನವನ್ನು ಗೆದ್ದಿದ್ದರು. 2014 ರಲ್ಲಿ, ಅವರು 5,81,022 ಮತಗಳನ್ನು (56.37%) ಗಳಿಸಿದರು. 2019 ರಲ್ಲಿ ಕೇವಲ 14% ಮತಗಳನ್ನು ಗಳಿಸಿದ್ದ ಅಜಯ್ ರಾಯ್ ಈ ಬಾರಿ ಅದನ್ನು 40.74% ಕ್ಕೆ ಹೆಚ್ಚಿಸಿದ್ದಾರೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವಿನ ಸೀಟು ಹಂಚಿಕೆ ಒಪ್ಪಂದದಿಂದಾಗಿ ಹೆಚ್ಚಳವಾಗಿದೆ. ಎಸ್‌ಪಿ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ.

ಪ್ರಧಾನಿ ಮೋದಿ 2014ರ ಚುನಾವಣೆಯಲ್ಲಿ ಮೊಟ್ಟಮೊದಲ ಬಾರಿಗೆ ವಾರಾಣಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಭಾರಿ ಅಂತರದಿಂದ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರು. ದೇಶದ ಪ್ರಧಾನಿಯಾದರು. ವಾರಾಣಸಿ ನಗರವನ್ನು ‘ದೇವಾಲಯಗಳ ನಗರ’, ‘ದೇಶದ ಧಾರ್ಮಿಕ ರಾಜಧಾನಿ’, ‘ದೀಪಗಳ ನಗರ’, ‘ಶಿವನ ನಗರ’, ‘ಜ್ಞಾನದ ನಗರ’ ಎಂಬಿತ್ಯಾದಿ ಹೆಸರುಗಳಿಂದ ಸಂಬೋಧಿಸಲಾಗುತ್ತಿದೆ.

ವಾರಣಾಸಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಬಿಜೆಪಿ ಮೈತ್ರಿಕೂಟ ಐದೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. 4 ಸ್ಥಾನಗಳು ಬಿಜೆಪಿ ಖಾತೆಗೆ ಮತ್ತು ಒಂದು ಸ್ಥಾನ ಅಪ್ನಾ ದಳ (ಸೋನೇಲಾಲ್) ಪಾಲಾಗಿತ್ತು. ನರೇಂದ್ರ ಮೋದಿಯವರು ಚುನಾವಣೆಗೆ ಸ್ಪರ್ಧಿಸಿದ್ದರಿಂದ ವಾರಣಾಸಿ ಹೈ ಪ್ರೊಫೈಲ್ ಕ್ಷೇತ್ರವಾಗಿ ಹೊರಹೊಮ್ಮಿದೆ.

2019ರಲ್ಲಿ ಹೀಗಿತ್ತು ಫಲಿತಾಂಶ

2019 ರ ಲೋಕಸಭಾ ಚುನಾವಣೆಯಲ್ಲಿ, ನರೇಂದ್ರ ಮೋದಿ ಬಿಜೆಪಿ ಟಿಕೆಟ್‌ನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮೋದಿ ವಿರುದ್ಧ ಸಮಾಜವಾದಿ ಪಕ್ಷದಿಂದ ಶಾಲಿನಿ ಯಾದವ್ ಕಣದಲ್ಲಿದ್ದರೆ, ಕಾಂಗ್ರೆಸ್ ಅಜಯ್ ರೈ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆ ಏಕಪಕ್ಷೀಯವಾಗಿತ್ತಲ್ಲದೆ, ಪ್ರಧಾನಿ ಮೋದಿ 4,79,505 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2014ರಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಕೇಜ್ರಿವಾಲ್

ಈ ಹಿಂದೆ 2014ರ ಚುನಾವಣೆಯಲ್ಲೂ ನರೇಂದ್ರ ಮೋದಿ ಇಲ್ಲಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ 674,664 ಮತಗಳನ್ನು ಪಡೆದರೆ, ಶಾಲಿನಿ ಯಾದವ್ 195,159 ಮತಗಳನ್ನು ಮತ್ತು ಅಜಯ್ ರೈ 152,548 ಮತಗಳನ್ನು ಪಡೆದಿದ್ದರು. ವಾರಣಾಸಿ ಕ್ಷೇತ್ರದಲ್ಲಿ ಒಟ್ಟು 1,060,829 ಮತಗಳು ಚಲಾವಣೆಯಾಗಿದ್ದವು. ಈ ಚುನಾವಣೆಯಲ್ಲಿ ಮೋದಿ 581,022 ಮತಗಳನ್ನು ಪಡೆದರೆ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ 209,238 ಮತಗಳನ್ನು ಪಡೆದಿದ್ದರು. ಮೋದಿ ಈ ಚುನಾವಣೆಯಲ್ಲಿ 371,784 ಮತಗಳ ಅಂತರದಿಂದ ಗೆದ್ದರು ಮತ್ತು ಈ ಗೆಲುವಿನ ನಂತರ ದೇಶದ ಪ್ರಧಾನಿಯೂ ಆದರು.

ಇದನ್ನೂ ಓದಿ: ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

2009ರ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ ಜೋಶಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದರು. ಬಿಎಸ್‌ಪಿ ಅಭ್ಯರ್ಥಿ ಮತ್ತು ಮಾಫಿಯಾ ಡಾನ್ ಮುಖ್ತಾರ್ ಅನ್ಸಾರಿ ಅವರನ್ನು ಅವರು 17,211 ಮತಗಳಿಂದ ಕಠಿಣ ಸ್ಪರ್ಧೆಯಲ್ಲಿ ಸೋಲಿಸಿದ್ದರು. ಅಜಯ್ ರೈ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನದಲ್ಲಿದ್ದರು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Tue, 4 June 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು