AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

Lok Sabha Election Results: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಗಿದಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ 295 ಸ್ಥಾನಗಳನ್ನು ಗಳಿಸಿದೆ. ಇಂಡಿಯ ಬಣ 230 ಸ್ಥಾನಗಳನ್ನು ಗಳಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.

Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ
ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ
ಸುಷ್ಮಾ ಚಕ್ರೆ
|

Updated on:Jun 04, 2024 | 6:19 PM

Share

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ (Lok Sabha Election Results) ಜನತೆಯ ಫಲಿತಾಂಶವಾಗಿದೆ. ಈ ಜನಾದೇಶ ಮೋದಿಯವರ (Narendra Modi) ವಿರುದ್ಧ ಎಂಬುದು ಸ್ಪಷ್ಟವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು ಎಂದು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆ ನೀಡಿದ್ದಾರೆ.

ಇದು ಮೋದಿ, ಜನರ ನಡುವಿನ ಯುದ್ಧ ಎಂದು ನಾವು ಚುನಾವಣೆಗೂ ಮೊದಲೇ ಹೇಳಿದ್ದೆವು. ಈ ಸಲ ಜನ ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಅದನ್ನು ಜನರು ಸೋಲಿಸಿದ್ದಾರೆ. ಇದು ಬಿಜೆಪಿಯ ನೈತಿಕ ಸೋಲು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

ನಾವು ಬಹಳ ವಿನಮ್ರತೆಯಿಂದ ಜನರ ತೀರ್ಪನ್ನು ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್​ಡಿಎಗೆ ದೊಡ್ಡ ನಷ್ಟ ಆಗಿದೆ. ಚುನಾವಣೆ ಪ್ರಚಾರದ ವೇಳೆ ಮೋದಿ ಸುಳ್ಳುಗಳನ್ನ ಹೇಳಿದ್ದಾರೆ. ಆಡಳಿತರೂಢ ಸರ್ಕಾರ ಹೆಜ್ಜೆ ಹೆಜ್ಜೆಗೂ ನಮಗೆ ಅಡ್ಡಿ ಮಾಡುತ್ತಿದ್ದರು. ನಮ್ಮ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದರು. ನಮ್ಮ ಬಣದ ನಾಯಕರ ಮೇಲೆ ದಾಳಿ ಮಾಡಿಸಿದ್ದರು. ಆದರೆ ಕಾಂಗ್ರೆಸ್ ಪಾಸಿಟಿವ್ ದೃಷ್ಟಿಯಿಂದಲೇ ಕ್ಯಾಂಪೇನ್ ಮಾಡಿ ಜನರ ಮುಂದೆ ಹೋದೆವು. ಜನರು ನಮ್ಮೊಂದಿಗೆ ಸೇರಿದರು, ನಮ್ಮನ್ನು ಬೆಂಬಲಿಸಿದರು. ಮೋದಿ ಮಾಡಿದ ಕ್ಯಾಂಪೇನ್ ಹಾಗೂ ಮಾತುಗಳನ್ನು ಇತಿಹಾಸ ನೆನಪಿಡುತ್ತದೆ. ಕಾಂಗ್ರೆಸ್​ನ ಪ್ರಣಾಳಿಕೆ ವಿರುದ್ಧ ಕೂಡ ಪ್ರಧಾನಿ ಅಪಪ್ರಚಾರ ಮಾಡಿದರು ಎಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಇದನ್ನೂ ಓದಿ: Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

ಭಾರತ್ ಜೋಡೋ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದು. 5 ನ್ಯಾಯ್ ಹಾಗೂ ನಮ್ಮ ಗ್ಯಾರಂಟಿಗಳು ಮನೆ ಮನೆಗೆ ತಲುಪಿದವು. ಬಿಜೆಪಿಯವರು ಅಹಂಕಾರದಿಂದ ಸಂವಿಧಾನ ದುರ್ಬಳಕೆ ಮಾಡಿಕೊಂಡರು. ಸರ್ಕಾರಿ ಸಂಸ್ಥೆಗಳನ್ನು ದಬ್ಬಾಳಿಕೆಯಿಂದ ತಮ್ಮ ಕಡೆ ಮಾಡಿಕೊಂಡರು. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಇದು ಮೋದಿ ಹಾಗೂ ಜನರ ನಡುವಿನ ಯುದ್ಧ ಅಂತ ನಾವು ಹೇಳಿದ್ದೆವು. ಈ ಸಲ ಜನರು ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಘಟ ಬಂಧನ್ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Tue, 4 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ