AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results: ಅಮೇಥಿಯಲ್ಲಿ ನನ್ನ ಸೇವೆ ಮುಂದುವರೆಯುತ್ತೆ, ಸೋಲಿನ ಬಳಿಕ ಸ್ಮೃತಿ ಇರಾನಿ ಮಾತು

ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತ ಬಳಿಕ ಸ್ಮೃತಿ ಇರಾನಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಇದು ಗೆದ್ದವರನ್ನು ಅಭಿನಂದಿಸುವ ಸಮಯ, ನಾನು ಇನ್ನುಮುಂದೆ ಕೂಡ ಅಮೇಥಿಯಲ್ಲಿ ಸೇವೆ ಮುಂದುವರೆಸುತ್ತೇನೆ ಎಂದರು.

Lok Sabha Election Results: ಅಮೇಥಿಯಲ್ಲಿ ನನ್ನ ಸೇವೆ ಮುಂದುವರೆಯುತ್ತೆ, ಸೋಲಿನ ಬಳಿಕ ಸ್ಮೃತಿ ಇರಾನಿ ಮಾತು
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on: Jun 05, 2024 | 8:19 AM

Share

ಉತ್ತರ ಪ್ರದೇಶದ ಅಮೇಥಿ(Amethi)ಯಿಂದ ಮರು ಆಯ್ಕೆ ಬಯಸಿದ್ದ ಕೇಂದ್ರ ಸಚಿವೆ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕಿ ಸ್ಮೃತಿ ಇರಾನಿ(Smriti Irani) ಅವರು ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ತಮ್ಮ ಸೋಲಿನ ಬಗ್ಗೆ ಮಾತನಾಡಿದ ಅವರು ಇದು ಗೆದ್ದವರನ್ನು ಅಭಿನಂದಿಸುವ ಸಮಯ, ನಾನು ಅಮೇಥಿಯಲ್ಲಿ ನನ್ನ ಸೇವೆಯನ್ನು ಮುಂದುವರೆಸುತ್ತೇನೆ ಎಂದರು.

ಕ್ಷೇತ್ರ ಮತ್ತು ಪಕ್ಷದ ಸೇವೆಯಲ್ಲಿ ಅತ್ಯಂತ ಸಮರ್ಪಣೆ ಮತ್ತು ನಿಷ್ಠೆಯಿಂದ ದುಡಿದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇಂದು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರಗಳು 30 ವರ್ಷಗಳ ಬಾಕಿ ಉಳಿದಿರುವ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರು ಉತ್ತರ ಪ್ರದೇಶದ ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯಾದ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು 1.67 ಲಕ್ಷ ಮತಗಳ ಅಂತರದಿಂದ ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ

ಚುನಾವಣಾ ಆಯೋಗದ ಪ್ರಕಾರ, ಇರಾನಿ 3,72,032 ಮತಗಳನ್ನು ಪಡೆದರೆ, ಶರ್ಮಾ 5,39,228 ಮತಗಳನ್ನು ಪಡೆದರು. ಬಿಎಸ್ಪಿ ಅಭ್ಯರ್ಥಿ 34,534 ಮತಗಳನ್ನು ಪಡೆದಿದ್ದಾರೆ.

ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅಮೇಥಿಯ ವಿಜೇತ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರು ಅಮೇಥಿಯ ಜನರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು, ಅಮೇಥಿಯಲ್ಲಿ 18 ನೇ ಲೋಕಸಭೆ ಚುನಾವಣೆ ಪ್ರಬಲ ಮತ್ತು ಸಶಕ್ತ ಪ್ರಜಾಪ್ರಭುತ್ವ ದೇಶಕ್ಕೆ ದೊಡ್ಡ ಉದಾಹರಣೆಯಾಗಿದೆ ಎಂದು ಹೇಳಿದರು.

ಒಬ್ಬ ಜನಪ್ರತಿನಿಧಿಯಾಗಿ, ರಾಜಕೀಯ ಕಾರ್ಯಕರ್ತೆಯಾಗಿ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಸ್ಮೃತಿ ಇರಾನಿ 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು 55 ಸಾವಿರ ಮತಗಳಿಂದ ಸೋಲಿಸಿದ್ದರು. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದು, ಸತತ ಮೂರನೇ ಬಾರಿಗೆ ಗೆದ್ದು ಸಾಧನೆ ಮಾಡಿದೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್