AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಮಹಿಳಾ ಸಬಲೀಕರಣ ನನ್ನ ಬದ್ಧತೆ; ಪ್ರಧಾನಿ ನರೇಂದ್ರ ಮೋದಿ

ಮಹಿಳೆಯರ ಸಬಲೀಕರಣವು ನನ್ನ ಬದ್ಧತೆಯಾಗಿದೆ. ಸಮಾಜದಲ್ಲಿ ಸಾಂಪ್ರದಾಯಿಕ ಪಾತ್ರಗಳನ್ನು ಮೀರಿ ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಬೇಕಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ನಡೆದ ರೋಡ್ ಶೋನ ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Lok Sabha Elections 2024: ಮಹಿಳಾ ಸಬಲೀಕರಣ ನನ್ನ ಬದ್ಧತೆ; ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: May 12, 2024 | 9:21 PM

Share

ನವದೆಹಲಿ: ಮಹಿಳಾ ಮತದಾರರು ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವಿದೆಯೇ? ಎಂಬ ಪ್ರಶ್ನೆಗೆ ಪಾಟ್ನಾದಲ್ಲಿ ನಡೆದ ರೋಡ್ ಶೋ ವೇಳೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಮಹಿಳೆಯರ ಸಬಲೀಕರಣ ನನ್ನ ಬದ್ಧತೆಯಾಗಿದೆ. ನಾನು ಜಿ20 ಶೃಂಗಸಭೆಯಲ್ಲಿ ಮುನ್ನಡೆ ಸಾಧಿಸಿದ್ದೇನೆ. ಮಹಿಳೆಯರ ಅಭಿವೃದ್ಧಿಗಾಗಿ ನಾವು ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಬೇಕು” ಎಂದು ಹೇಳಿದ್ದಾರೆ.

“ನಾವು ಸೇನೆಯಲ್ಲಿ ಮಹಿಳೆಯರಿಗಾಗಿ ಬಾಗಿಲು ತೆರೆದಿದ್ದೇವೆ. ಅವರನ್ನು ವಾಯುಪಡೆಯ ಪೈಲಟ್‌ಗಳನ್ನಾಗಿ ಮಾಡಿದೆವು. ನಾವು ಅವರನ್ನು ಗಡಿಗೆ ದೇಶ ಕಾಯಲು ಕಳುಹಿಸಿದ್ದೇವೆ, ಈಗ ನಮ್ಮ ಹೆಣ್ಣುಮಕ್ಕಳು ಸಿಯಾಚಿನ್‌ನಲ್ಲಿ ದೇಶವನ್ನು ರಕ್ಷಿಸುತ್ತಿದ್ದಾರೆ. ನಾನು ಮಹಿಳೆಯರಲ್ಲಿ ಮಾನಸಿಕ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ. ಮಹಿಳಾ ಶಕ್ತಿ ಹೆಚ್ಚಾಗುತ್ತದೆ. ದೇಶದ ಅಭಿವೃದ್ಧಿ ವೇಗವಾಗುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: ನಿಮ್ಮ ಉತ್ತರಾಧಿಕಾರಿ ಯಾರೆಂಬ ಪ್ರಶ್ನೆಗೆ ಪ್ರಧಾನಿ ಮೋದಿ ಹೇಳಿದ್ದೇನು?

ಈ ಚುನಾವಣೆಗಳಲ್ಲಿ ಎನ್‌ಡಿಎಯನ್ನು 400 ಸೀಟುಗಳ ಗಡಿ ಮೀರಿ ಕೊಂಡೊಯ್ಯಲು ದೇಶ ಸಂಕಲ್ಪ ಮಾಡಿದೆ ಎಂದು ಪ್ರಧಾನಿ ಹೇಳಿದರು. ಬಿಹಾರದ ವಾತಾವರಣ ದೇಶದ ಇತರ ಭಾಗಗಳಂತೆಯೇ ಇದೆ ಎಂದು ಅವರು ಹೇಳಿದರು.

ಪೂರ್ವ ಭಾರತದಲ್ಲಿ ಬಿಜೆಪಿಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ 2013ರ ಭಾಷಣವನ್ನು ಮೆಲುಕು ಹಾಕಿದರು. “ಆಗ ನಾನು ಪ್ರಧಾನಿ ಅಭ್ಯರ್ಥಿಯಾಗಿರಲಿಲ್ಲ. ನಾವು ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ನಾವು ಈಸ್ಟ್ ಇಂಡಿಯಾವನ್ನು ಬೆಳವಣಿಗೆಯ ಎಂಜಿನ್ ಮಾಡಬೇಕು ಎಂದು ನಾನು ಹೇಳಿದ್ದೆ. ಕಳೆದ 10 ವರ್ಷಗಳಲ್ಲಿ ನಾನು ಮೂಲಸೌಕರ್ಯಕ್ಕೆ ಸಂಬಂಧಿಸಿದ ಪೂರ್ವ ಭಾರತದಲ್ಲಿನ ಯೋಜನೆಗಳಿಗೆ ಸತತವಾಗಿ ಒತ್ತು ನೀಡಿದ್ದೇನೆ. ನಾವು ಮೊದಲಿಗಿಂತ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೇವೆ ಎಂಬ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಕಂಡು ಆನಂದಬಾಷ್ಪ ಸುರಿಸಿದ ಬೆಂಗಾಲಿಗರು

2019ರ ಚುನಾವಣೆಯಲ್ಲಿ, ಬಿಜೆಪಿ, ಜೆಡಿಯು ಮತ್ತು ರಾಮ್ ವಿಲಾಸ್ ಪಾಸ್ವಾನ್ ಅವರ ಎಲ್​ಜೆಪಿಯನ್ನು ಒಳಗೊಂಡಿರುವ ಎನ್​ಡಿಎ ಮೈತ್ರಿಕೂಟವು ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು. “ನಾನು ನಮ್ಮ ಸ್ನೇಹಿತರ ಬಳಿ ಮಾತನಾಡಿದ್ದೇನೆ, ಕಳೆದ ಬಾರಿ ನಾವು 1 ಸ್ಥಾನವನ್ನು ಕಳೆದುಕೊಂಡಿದ್ದೇವೆ. ಈ ಬಾರಿ ನಾವು ಆ 1 ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ