AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು; 102 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ

Lok Sabha Elections 2024 Phase 1 Voting: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. 543 ಸ್ಥಾನಗಳ ಪೈಕಿ 102 ಸ್ಥಾನಗಳಿಗೆ ಇಂದು ಮತದಾನ ಆಗುತ್ತಿದೆ. 102 ಕ್ಷೇತ್ರಗಳಲ್ಲಿ ಒಟ್ಟು 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಿತಿನ್ ಗಡ್ಕರಿ ಸೇರಿದಂತೆ ಎಂಟು ಕೇಂದ್ರ ಸಚಿವರ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ಇಂದು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಇದೆ.

ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು; 102 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ
ಮತದಾನ
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: ನಯನಾ ರಾಜೀವ್

Updated on:Apr 19, 2024 | 11:07 AM

ನವದೆಹಲಿ, ಏಪ್ರಿಲ್ 19: ಲೋಕಸಭೆಯ 543 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೊದಲ ಹಂತದ ಮತದಾನ (Lok Sabha Elections Phase 1 voting) ಇಂದು ಶುಕ್ರವಾರ ನಡೆಯುತ್ತಿದೆ. ಈ ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಚುನಾವಣೆ ಆಗುತ್ತಿದೆ. ಒಟ್ಟು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿವಿಧ ಕ್ಷೇತ್ರಗಳಿಗೆ ಇಂದು ಮತದಾನ ಆಗುತ್ತಿದೆ. ಈ ಪೈಕಿ 10 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಲೋಕಸಭಾ ಸ್ಥಾನಗಳಿಗೆ ಚುನಾವಣೆ ಆಗುತ್ತಿದೆ. ನಿತಿನ್ ಗಡ್ಕರಿ ಮೊದಲಾದ ಹಲವು ಘಟಾನುಘಟಿಗಳು ಈ ಮೊದಲ ಹಂತದ ಅಭ್ಯರ್ಥಿಗಳ ಸಾಲಿನಲ್ಲಿ ಇದ್ದಾರೆ.

ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಸಮಯ ಯಾವಾಗ?

ಏಪ್ರಿಲ್ 19ರಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗುತ್ತದೆ. ಸಂಜೆ 5ರವರೆಗೂ ಇದು ನಡೆಯುತ್ತದೆ. ಆರು ಗಂಟೆಯವರೆಗೆ ಹೆಚ್ಚುವರಿ ಸಮಯ ಇರುತ್ತದೆ. ಸಂಜೆ 5ರೊಳಗೆ ಮತದಾನಕ್ಕೆ ಬಂದವರಿಗೆ ಮತದಾನದ ಅವಕಾಶ ಸಿಗಲು ಒಂದು ಗಂಟೆ ಹೆಚ್ಚುವರಿ ಸಮಯ ನಿಗದಿ ಮಾಡಲಾಗಿದೆ.

ಯಾವ್ಯಾವ ರಾಜ್ಯಗಳಲ್ಲಿ ಏಪ್ರಿಲ್ 19ರಂದು ಮತದಾನ ನಡೆಯಲಿದೆ?

  1. ತಮಿಳುನಾಡು: 39
  2. ರಾಜಸ್ಥಾನ: 12
  3. ಉತ್ತರಾಖಂಡ್: 6
  4. ಉತ್ತರಪ್ರದೇಶ: 8
  5. ಅಸ್ಸಾಂ: 5
  6. ಬಿಹಾರ: 4
  7. ಛತ್ತೀಸ್​ಗಡ: 1
  8. ಜಮ್ಮು ಕಾಶ್ಮೀರ: 1
  9. ಮಧ್ಯಪ್ರದೇಶ: 6
  10. ಮಹಾರಾಷ್ಟ್ರ: 5
  11. ಪಶ್ಚಿಮ ಬಂಗಾಳ: 3
  12. ಮಣಿಪುರ್: 2
  13. ಮೇಘಾಲಯ: 2
  14. ಮಿಝೋರಾಂ: 1
  15. ನಾಗಾಲ್ಯಾಂಡ್: 1
  16. ಪುದುಚೇರಿ: 1
  17. ಸಿಕ್ಕಿಂ: 1
  18. ತ್ರಿಪುರಾ: 1
  19. ಅಂಡಮಾನ್ ನಿಕೋಬಾರ್: 1 ಸ್ಥಾನ
  20. ಅರುಣಾಚಲಪ್ರದೇಶ: 2
  21. ಲಕ್ಷದ್ವೀಪ: 1

ಇದನ್ನೂ ಓದಿ: ಇವಿಎಂ ಹೇಗೆ ಕೆಲಸ ಮಾಡುತ್ತೆ? ಸುಪ್ರೀಂಕೋರ್ಟ್​ಗೆ ಮಾಹಿತಿ ಕೊಟ್ಟ ಚುನಾವಣಾ ಆಯೋಗ

ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಲ್ಲೂ ಇಂದೇ ಮತದಾನ ನಡೆಯುತ್ತಿರುವುದು ಗಮನಾರ್ಹ. ಛತ್ತೀಸ್​ಗಡದಲ್ಲಿ ಇಂದು ಒಂದೇ ಕ್ಷೇತ್ರಕ್ಕೆ ಚುನಾವಣೆ ಆಗುತ್ತಿದೆ. ನಕ್ಸಲ್​ಪೀಡಿತ ಬಸ್ತಾರ್​ನಲ್ಲಿ ಮಾತ್ರವೇ ಇದು ವೋಟಿಂಗ್ ಇರುವುದು. ಜಮ್ಮು ಕಾಶ್ಮೀರದಲ್ಲೂ ಉಗ್ರ ಪೀಡಿತ ಉಧಂಪುರ್​ನಲ್ಲಿ ಮಾತ್ರ ಇಂದು ಚುನಾವಣೆ ಆಗುತ್ತಿದೆ. ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.

ಮೊದಲ ಹಂತದ ಚುನಾವಣೆಯಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಒಟ್ಟು ಎಂಟು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರು ಇವತ್ತಿನ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ ಬಿಜೆಪಿಯ ನಿತಿನ್ ಗಡ್ಕರಿ, ಉತ್ತರಪ್ರದೇಶದ ಪಿಲಿಭಿಟ್​ನಲ್ಲಿ ಬಿಜೆಪಿಯ ಜತಿನ್ ಪ್ರಸಾದ, ಅರುಣಾಚಲದಲ್ಲಿ ಕಿರಣ್ ರಿಜಿಜು, ತಮಿಳುನಾಡಿನಲ್ಲಿ ಡಿಎಂಕೆಯ ಎ ರಾಜ, ಬಿಜೆಪಿಯ ಕೆ ಅಣ್ಣಾಮಲೈ, ಕಾಶ್ಮೀರದ ಉಧಮ್​ಪುರ್​ನಲ್ಲಿ ಬಿಜೆಪಿಯ ಜಿತೇಂದ್ರ ಸಿಂಗ್ ಮೊದಲಾದ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಅಭ್ಯರ್ಥಿಗಳ ಸಂಖ್ಯೆ, ಪಕ್ಷಗಳ ಬಲಾಬಲ ವಿವರ

102 ಕ್ಷೇತ್ರಗಳಲ್ಲಿ ಒಟ್ಟು 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ ಮಹಿಳಾ ಅಭ್ಯರ್ಥಿಗಳ ಪ್ರಮಾಣ ಶೇ. 8ರಷ್ಟಿದೆ.

102 ಸ್ಥಾನಗಳಲ್ಲಿ ಎನ್​​ಡಿಎ ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟ ತಲಾ 48 ಸ್ಥಾನಗಳನ್ನು ಹೊಂದಿವೆ. ಬಿಎಸ್​ಪಿ 3 ಸ್ಥಾನ ಹೊಂದಿದೆ. ಎಐಎಡಿಎಂಕೆ, ಶಿವಸೇನಾ ಮತ್ತು ಎನ್​ಸಿಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಗೆದ್ದಿದ್ದವು.

2019ರ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳ ಪೈಕಿ ಡಿಎಂಕೆಯೊಂದೇ 24 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಡಿಎಂಕೆ, ಕಾಂಗ್ರೆಸ್ ಒಳಗೊಂಡ ಮೈತ್ರಿಕೂಟ 38 ಸ್ಥಾನಗಳನ್ನು ಪಡೆದಿತ್ತು. ಎನ್​ಡಿಎಗೆ ಒಂದು ಸ್ಥಾನ ಮಾತ್ರ ಸಿಕ್ಕಿತ್ತು.

ಇದನ್ನೂ ಓದಿ: ಬಿಜೆಪಿಯು ಹೊಸ ರಾಜಕೀಯ ಸಮೀಕರಣಕ್ಕೆ ಭಾಷ್ಯ ಬರೆಯಲು ಮುಂದಾಗಿರುವ ತಮಿಳುನಾಡಿನಲ್ಲಿ ನಾಳೆ ಮತದಾನ

ಏಳು ಹಂತಗಳ ಚುನಾವಣೆ ದಿನಾಂಕಗಳು

ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19, 26, ಮೇ 7, 13, 20, 25 ಮತ್ತು ಜೂನ್ 1ರಂದು ವಿವಿಧ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂನ್ 5ರಂದು ಮತ ಎಣಿಕೆ ಆಗುತ್ತದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಆಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:45 am, Fri, 19 April 24

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ