AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

April 26th election day holidays: ಏಪ್ರಿಲ್ 26, ಶುಕ್ರವಾರದಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೂ ರಜೆ ಇದೆ. ಬಸ್, ರೈಲು ಇತ್ಯಾದಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ. ಆದರೆ, ಮತದಾನಕ್ಕೆ ಅರ್ಹ ಇರುವ ಉದ್ಯೋಗಿಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕಾಗುತ್ತದೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್
ಮತದಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2024 | 12:30 PM

Share

ಬೆಂಗಳೂರು, ಏಪ್ರಿಲ್ 24: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ (Lok Sabha elections Phase 2 polling) ಏಪ್ರಿಲ್ 26ರಂದು ನಡೆಯಲಿದೆ. ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಲ್ಲಿ ಶುಕ್ರವಾರ ಮತದಾರರು ಮತ ಚಲಾಯಿಸಲಿದ್ದಾರೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ. ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?

  • ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
  • ಬ್ಯಾಂಕುಗಳಿಗೆ ರಜೆ
  • ಶಾಲೆ, ಕಾಲೇಜುಗಳಿಗೆ ರಜೆ
  • ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಇದನ್ನೂ ಓದಿ: ಬಾಬರ್​ನ ಮಕ್ಳು ಕೂಡ ಜೈ ಶ್ರೀರಾಮ್ ಹೇಳ್ಬೇಕು: ಬಿಜೆಪಿ ನಾಯಕ ಸಿಪಿ ಜೋಶಿ ವಿವಾದಾತ್ಮಕ ಹೇಳಿಕೆ

ಏಪ್ರಿಲ್ 26ರಂದು ಯಾವುವೆಲ್ಲಾ ಇರುತ್ತೆ?

  • ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
  • ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ
  • ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ

ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು. ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬಹುದು.

ಮದ್ಯ ಮಾರಾಟ ನಿಷೇಧ

ಇವತ್ತು ಏಪ್ರಿಲ್ 24, ಸಂಜೆ 5 ಗಂಟೆಯಿಂದ ಏಪ್ರಿಲ್ 26 ಮಧ್ಯರಾತ್ರಿ 12ರವರೆಗೆ ಮದ್ಯದ ತಯಾರಿಕೆ, ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಏಪ್ರಿಲ್ 26ರಂದು ರಾಜ್ಯದ ಯಾವೆಲ್ಲಾ ಕ್ಷೇತ್ರಗಳಿಗೆ ಚುನಾವಣೆ?

  1. ಬೆಂಗಳೂರು ಉತ್ತರ
  2. ಬೆಂಗಳೂರು ಕೇಂದ್ರ
  3. ಬೆಂಗಳೂರು ದಕ್ಷಿಣ
  4. ಬೆಂಗಳೂರು ಗ್ರಾಮಾಂತರ
  5. ಕೋಲಾರ
  6. ಚಿಕ್ಕಬಳ್ಳಾಪುರ
  7. ತುಮಕೂರು
  8. ಮಂಡ್ಯ
  9. ಮೈಸೂರು
  10. ಹಾಸನ
  11. ತುಮಕೂರು
  12. ಚಿತ್ರದುರ್ಗ
  13. ಉಡುಪಿ ಚಿಕ್ಕಮಗಳೂರು
  14. ದಕ್ಷಿಣ ಕನ್ನಡ

ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ಕ್ಕೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್