AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಲೋಕಸಭೆ ಚುನಾವಣೆಯ ಮತದಾನ ಈಗಾಗಲೇ 5 ಹಂತಗಳಲ್ಲಿ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13 ಮತ್ತು ಮೇ 20ರಂದು ಪೂರ್ಣಗೊಂಡಿದೆ. ಇಂದು (ಮೇ 25) 6ನೇ ಹಂತದ ಮತದಾನ ನಡೆಯಲಿದೆ. ಈ ಹಂತವು 58 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ.

Lok Sabha Election 2024: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ
6ನೇ ಹಂತದ ಲೋಕಸಭೆ ಚುನಾವಣೆ
ಸುಷ್ಮಾ ಚಕ್ರೆ
|

Updated on: May 25, 2024 | 6:44 AM

Share

ನವದೆಹಲಿ: ಇಂದು 6ನೇ ಹಂತದ ಲೋಕಸಭಾ ಚುನಾವಣೆ (Lok Sabha Election) ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ. 7 ಸಂಸದೀಯ ಸ್ಥಾನಗಳನ್ನು ಹೊಂದಿರುವ ರಾಷ್ಟ್ರ ರಾಜಧಾನಿ ದೆಹಲಿ (Delhi Lok Sabha Polls) ಕೂಡ ಮತದಾನಕ್ಕೆ ಸಜ್ಜಾಗಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಇಂದು ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ತೀವ್ರ ಕುತೂಹಲ ಮೂಡಿಸಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 4 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಉಳಿದ 3 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ವಿರುದ್ಧ ಎಎಪಿ ಮತ್ತು ಕಾಂಗ್ರೆಸ್ ಜಂಟಿಯಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಮೊದಲ ಲೋಕಸಭೆ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.

899 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 1.52 ಕೋಟಿ ಮತದಾರರು ಇಂದು ಮತ ಚಲಾಯಿಸಲಿದ್ದಾರೆ. 82 ಲಕ್ಷ ಪುರುಷ ಮತ್ತು 69 ಲಕ್ಷ ಮಹಿಳಾ ಮತದಾರರು ಹಾಗೂ 1,228 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 1.52 ಕೋಟಿ ಮತದಾರರು 13,000ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!