AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections: ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ನನ್ನ ಆಯ್ಕೆ; ಮಲ್ಲಿಕಾರ್ಜುನ ಖರ್ಗೆ

ಇಂಡಿಯ ಒಕ್ಕೂಟದಿಂದ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುರಿತು ಬಿಜೆಪಿ ಮತ್ತು ಇತರೆ ಬಲಪಂಥೀಯ ಪಕ್ಷಗಳು ಪ್ರಶ್ನೆ ಮಾಡುತ್ತಲೇ ಇವೆ. ಇದಕ್ಕೆ ಕಳೆದ ವಾರ ಉತ್ತರಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಇಂಡಿಯ ಒಕ್ಕೂಟ ಗೆದ್ದ ನಂತರ ಎಲ್ಲರೂ ಒಟ್ಟಿಗೇ ಕುಳಿತು, ಚರ್ಚಿಸಿ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದಿದ್ದರು.

Lok Sabha Elections: ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ನನ್ನ ಆಯ್ಕೆ; ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ಸುಷ್ಮಾ ಚಕ್ರೆ
|

Updated on: May 31, 2024 | 4:36 PM

Share

ನವದೆಹಲಿ: ಇಂಡಿಯ (INDIA) ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಆ ಬಣದ ಯಾರೂ ಖಚಿತವಾಗಿ ಉತ್ತರ ನೀಡಿರಲಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ಇದಕ್ಕೆ ಸ್ಪಷ್ಟ ಉತ್ತರ ನೀಡಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ (Lok Sabha Elections 2024) ಇಂಡಿಯ ಒಕ್ಕೂಟ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದರು. ಆದರೆ, ಇದೀಗ ಆ ಪ್ರಶ್ನೆಗೆ ಉತ್ತರಿಸಿರುವ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ (Rahul Gandhi) ನನ್ನ ಆಯ್ಕೆ ಎಂದಿದ್ದಾರೆ.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದರೆ ಕಾಂಗ್ರೆಸ್ ಪಕ್ಷದ ನೇತೃತ್ವದ ಇಂಡಿಯ ಬಣದಿಂದ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ ಅವರ ಆಯ್ಕೆಗೆ ನನ್ನ ಬೆಂಬಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಗಾಂಧಿ ಕುಟುಂಬದ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಸತತ 5 ಗೆಲುವಿನ ನಂತರ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್​ಬರೇಲಿಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೊನೆಕ್ಷಣದಲ್ಲಿ ಚುನಾವಣೆಯಿಂದ ಹೊರಗುಳಿದಿದ್ದರು. ಅವರ ಬದಲಾಗಿ ಅವರ ಸಹೋದರ ರಾಹುಲ್ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧಿಸಿದ್ದರು. ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: Mamata Banerjee: ಚುನಾವಣೆ ಪ್ರಚಾರದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಡ್ಯಾನ್ಸ್; ವಿಡಿಯೋ ವೈರಲ್

ಎನ್‌ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಈ ಲೋಕಸಭೆ ಚುನಾವಣೆಗೂ ಮೊದಲು ಎರಡು ‘ಭಾರತ್ ಜೋಡೋ ಯಾತ್ರೆ’ಗಳನ್ನು ಮುನ್ನಡೆಸಿದ್ದರು. ದೇಶಾದ್ಯಂತ ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಯಾವುದೇ ಹಿಂಜರಿಕೆಯಿಲ್ಲದೆ ಪ್ರಧಾನಿ ಮೋದಿ ವಿರುದ್ಧ ನೇರ ದಾಳಿಯನ್ನು ಮಾಡುವ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಅತ್ಯುತ್ತಮ ಆಯ್ಕೆಯಾಗುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬುದು ನನ್ನ ಆಯ್ಕೆ. ಅವರು ಯುವಕರನ್ನು ಪ್ರತಿನಿಧಿಸುತ್ತಾರೆ ಮತ್ತು ದೇಶದ ಉದ್ದ ಮತ್ತು ಅಗಲವನ್ನು ಪ್ರತಿನಿಧಿಸುತ್ತಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿಯನ್ನು ಅನೇಕರು ಪ್ರಧಾನಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯಾಗಿ ನೋಡುತ್ತಾರೆ. “ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಇಂಡಿಯ ಬಣದವರಾದ ನಾವು ನಿರ್ಧರಿಸಿದ್ದದೇವೆ. ಈ ಬಣ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರು ಎಂದು ಜಂಟಿಯಾಗಿ ನಿರ್ಧರಿಸಲಾಗುತ್ತದೆ.” ಎಂದು ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಳೆದ ವಾರವಷ್ಟೇ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. “ಇದು ‘ಕೌನ್ ಬನೇಗಾ ಕೋಟ್ಯಧಿಪತಿ (ಕೋಟ್ಯಧಿಪತಿ ಯಾರಾಗಲಿದ್ದಾರೆ?)’ ಎಂದು ಕೇಳುವಂತಿದೆ ಎಂದು ಹಾಸ್ಯಮಯವಾಗಿ ಉತ್ತರಿಸಿದ್ದರು.

ಇಂಡಿಯ ಬಣದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್ ಹೆಸರು ಕೂಡ ಹರಿದಾಡಿತ್ತು. ಕೊನೆಗೆ ಮಮತಾ ಬ್ಯಾನರ್ಜಿ ಹೆಸರು ಕೂಡ ಕೇಳಿಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!