Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಬಹುಮತ?

Lok Sabha Polls Results: 2024ರ ಭಾರತದ ಲೋಕಸಭೆ ಚುನಾವಣೆ ಈ ಬಾರಿ 7 ಹಂತಗಳಲ್ಲಿ ನಡೆಯಿತು. ಇದು ಬಹಳ ಸುದೀರ್ಘವಾದ ಚುನಾವಣಾ ಪ್ರಕ್ರಿಯೆಯಾಗಿತ್ತು. ನಾಳೆ (ಜೂನ್ 4) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆಗೆ ತೆಗೆದುಕೊಳ್ಳಲಾಗುವುದು.

Lok Sabha Elections 2024: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಬಹುಮತ?
ಮತ ಎಣಿಕೆ
Follow us
ಸುಷ್ಮಾ ಚಕ್ರೆ
| Updated By: ವಿವೇಕ ಬಿರಾದಾರ

Updated on:Jun 04, 2024 | 5:02 AM

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Election Vote Counting) ಮಂಗಳವಾರ (ಜೂನ್ 4) ನಡೆಯಲಿದ್ದು, ಈ ಬಾರಿ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಇಂಡಿಯ (INDIA) ಬಣ ಮತ್ತು ಎನ್​ಡಿಎ (NDA) ಒಕ್ಕೂಟದ ಮಧ್ಯೆ ಈ ಬಾರಿ ತೀವ್ರ ಪೈಪೋಡಿ ಏರ್ಪಟ್ಟಿತ್ತು. ಈ ಬಾರಿ ಬಿಜೆಪಿಗೆ ಅಧಿಕಾರ ಸಿಗಲು ಬಿಡಬಾರದು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಒಂದಾಗಿ ಇಂಡಿಯ (I.N.D.I.A) ಬಣವನ್ನು ರಚಿಸಿದ್ದವು. ಆದರೆ, ವಿಪಕ್ಷಗಳ ಒಗ್ಗಟ್ಟಿನ ಹೋರಾಟದ ನಡುವೆಯೂ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತೊಮ್ಮೆ ಸರ್ಕಾರ ರಚಿಸಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವುದು ಖಚಿತವಾಗಿದೆ.

ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ಎನ್​ಡಿಎ ಭಾರೀ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆಯಲಿದೆ. ಚುನಾವಣಾ ಆಯೋಗದ (EC) ಪ್ರಕಾರ, ಎಲ್ಲ 7 ಹಂತಗಳಿಗೆ ಮತದಾನವು ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಮತಎಣಿಕೆಗೆ ಕೌಂಟ್ ಡೌನ್; ಬೆಂಗಳೂರಿನಲ್ಲಿ ಹೇಗಿದೆ ಸಿದ್ಧತೆ? ಇಲ್ಲಿದೆ ಪೂರ್ಣ ವಿವರ

ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಎಣಿಕೆ ಆರಂಭವಾದ ಅರ್ಧ ಗಂಟೆಯ ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೊದಲು ಅಂಚೆ ಮತ ಎಣಿಕೆ ಆರಂಭಿಸಬೇಕು ಮತ್ತು ಅಂಚೆ ಮತಪತ್ರಗಳ ಫಲಿತಾಂಶವನ್ನು ಮೊದಲು ಪ್ರಕಟಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ನಿಯೋಗ ಭಾನುವಾರ ಆಯೋಗವನ್ನು ಭೇಟಿ ಮಾಡಿತ್ತು.

ಲೋಕಸಭೆಯ ಎಲ್ಲಾ 543 ಸದಸ್ಯರನ್ನು ಆಯ್ಕೆ ಮಾಡಲು 7 ಹಂತಗಳಲ್ಲಿ ಏಪ್ರಿಲ್ 19ರಿಂದ ಜೂನ್ 1ರವರೆಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಯಿತು. ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎಣಿಕೆಯ ಫಲಿತಾಂಶಗಳು ECI ವೆಬ್‌ಸೈಟ್‌ನಲ್ಲಿ results.eci.gov.in ಮತ್ತು ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದು. ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಿಂದ ಕ್ಷೇತ್ರವಾರು ಅಥವಾ ರಾಜ್ಯವಾರು ಫಲಿತಾಂಶಗಳ ಜೊತೆಗೆ ವಿಜೇತ ಅಥವಾ ಮುಂಚೂಣಿಯಲ್ಲಿರುವ ಅಥವಾ ಹಿಂದುಳಿದ ಅಭ್ಯರ್ಥಿಗಳ ವಿವರಗಳನ್ನು ಕಂಡುಹಿಡಿಯಲು ಬಳಕೆದಾರರು ಲಭ್ಯವಿರುವ ಫಿಲ್ಟರ್ ಅನ್ನು ಬಳಸಬಹುದು.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ 2019ರಲ್ಲಿ 352 ಸ್ಥಾನಗಳನ್ನು ಗಳಿಸಿದ ದಾಖಲೆಗಿಂತ ತನ್ನ ಸಾಧನೆಯನ್ನು ಸುಧಾರಿಸಲು ಸಜ್ಜಾಗಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Mon, 3 June 24

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ