AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ

West Bengal Lok Sabha Polls: ಲೋಕಸಭಾ ಚುನಾವಣೆ ಆರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಈ ಲೋಕಸಭೆ ಚುನಾವಣೆಯ ನಡುವೆ ಟಿಎಂಸಿ ಬಿಜೆಪಿ ಬಂಗಾಳದ ರಘುನಾಥಪುರದಲ್ಲಿ ಇವಿಎಂ ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ.

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ
Follow us
ಸುಷ್ಮಾ ಚಕ್ರೆ
|

Updated on:May 25, 2024 | 3:22 PM

ಕೊಲ್ಕತ್ತಾ: ಲೋಕಸಭಾ ಚುನಾವಣೆಯ 6ನೇ ಹಂತದ (Lok Sabha Polls 6th Phase) ಮತದಾನ ಇಂದು ನಡೆಯುತ್ತಿದ್ದು, ಪಶ್ಚಿಮ ಬಂಗಾಳದ (West Bengal) ಬಂಕುರಾದ ರಘುನಾಥಪುರ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (EVM) ಬಿಜೆಪಿ ಟ್ಯಾಂಪರಿಂಗ್ ಮಾಡಿದೆ ಎಂದು ಟಿಎಂಸಿ (ತೃಣಮೂಲ ಕಾಂಗ್ರೆಸ್) ಆರೋಪಿಸಿದೆ. ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ ಪಕ್ಷವು ಬಿಜೆಪಿ ಟ್ಯಾಗ್‌ಗಳೊಂದಿಗೆ ಇವಿಎಂಗಳನ್ನು ಇರಿಸಲಾಗಿರುವ ಫೋಟೋಗಳನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಬಿಜೆಪಿ ಟ್ಯಾಗ್ ಇರುವ 5 ಮತಯಂತ್ರಗಳನ್ನು ಕಂಡುಹಿಡಿಯಲಾಗಿದೆ ಎಂದು ಟಿಎಂಸಿ ಹೇಳಿಕೊಂಡಿದೆ. ಈ ಕಳವಳಗಳನ್ನು ತ್ವರಿತವಾಗಿ ಪರಿಹರಿಸಲು ಮತ್ತು ಬಿಜೆಪಿ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲು ತೃಣಮೂಲ ಕಾಂಗ್ರೆಸ್ ಪಕ್ಷವು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಮಾಡಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಭವಿಷ್ಯ ನುಡಿದ ಯೋಗೇಂದ್ರ ಯಾದವ್; ಲೆಕ್ಕಾಚಾರ ಹೀಗಿದೆ

“ಬಿಜೆಪಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಮೂಲಕ ಮತಗಳನ್ನು ರಿಗ್ ಮಾಡಲು ಹೇಗೆ ಪ್ರಯತ್ನಿಸುತ್ತಿದೆ ಎಂದು ನೀವೇ ನೋಡಬಹುದು. ಇಂದು ಬಂಕುರಾದ ರಘುನಾಥಪುರದಲ್ಲಿ ಈ ರೀತಿಯ ಟ್ಯಾಗ್ ಹಾಕಲಾದ ಇವಿಎಂಗಳು ಪತ್ತೆಯಾಗಿವೆ. ಇನ್ನೂ 5 ಇವಿಎಂಗಳಲ್ಲಿ ಬಿಜೆಪಿ ಟ್ಯಾಗ್‌ಗಳು ಕಂಡುಬಂದಿವೆ. ಭಾರತೀಯ ಚುನಾವಣಾ ಆಯೋಗ ತಕ್ಷಣವೇ ಇದನ್ನು ಪರಿಶೀಲಿಸಬೇಕು ಮತ್ತು ಸರಿಪಡಿಸುವ ಕ್ರಮ ತೆಗೆದುಕೊಳ್ಳಬೇಕು” ಎಂದು ಟಿಎಂಸಿ ಅಧಿಕೃತ ಎಕ್ಸ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಇವಿಎಂ ಟ್ಯಾಂಪರಿಂಗ್ ಬಗ್ಗೆ ಬಿಜೆಪಿಯ ವಿರುದ್ಧ ಟಿಎಂಸಿ ಆರೋಪ ಮಾಡುವುದು ಇದೇ ಮೊದಲಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹಿಂದೆ 2024ರ ಲೋಕಸಭೆ ಚುನಾವಣೆಯ ಹಿಂದಿನ ಹಂತಗಳಲ್ಲಿ ಕೂಡ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಿದ್ದಾರೆ ಮತ್ತು ಮತದಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ವಿರುದ್ಧ ಟೀಕಿಸಿದ್ದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಲು ಬಿಜೆಪಿ ಅನ್ಯಾಯದ ಆಚರಣೆಗಳನ್ನು ಆರಿಸಿಕೊಂಡಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಮೇ 1ರಂದು ಮಮತಾ ಬ್ಯಾನರ್ಜಿ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಬಳಸುತ್ತಿರುವ ಇವಿಎಂಗಳನ್ನು ಬದಲಾಯಿಸುವ ಯೋಜನೆಯನ್ನು ಬಿಜೆಪಿ ರೂಪಿಸುತ್ತಿದೆ ಎಂದು ಆರೋಪಿಸಿದ್ದರು. ಚುನಾವಣಾ ಆಯೋಗ ನಿನ್ನೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಪ್ರತಿ ಬಾರಿ ಬಿಜೆಪಿ ಕಡಿಮೆ ಮತಗಳನ್ನು ಪಡೆಯುವ ಪ್ರದೇಶಗಳಲ್ಲಿ 5.75% ಹೆಚ್ಚು ಮತದಾನವಾಗಿದೆ. ಈ ಸಂಖ್ಯೆ ಹೇಗೆ ಏರಿತು?, ಇವಿಎಂ ಯಂತ್ರಗಳನ್ನು ಯಾರು ತಯಾರಿಸುತ್ತಾರೆ? ಮತ್ತು ಈ ಯಂತ್ರಗಳಲ್ಲಿ ಬಳಸುವ ಚಿಪ್‌ಗಳನ್ನು ಯಾರು ತಯಾರಿಸುತ್ತಾರೆ? ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಸುಮಾರು 1.9 ಮಿಲಿಯನ್ ಇವಿಎಂ ಯಂತ್ರಗಳು ಬಹಳ ಸಮಯದಿಂದ ಕಾಣೆಯಾಗಿವೆ. ನಾಪತ್ತೆಯಾಗಿರುವ ಇವಿಎಂಗಳಲ್ಲಿ ಸುಳ್ಳು ಡೇಟಾವನ್ನು ನಮೂದಿಸಲಾಗಿದೆ. ಈಗ ಬಳಸುತ್ತಿರುವ ಇವಿಎಂಗಳ ಬದಲಿಗೆ ಆ ಯಂತ್ರಗಳನ್ನು ಇರಿಸಲಾಗಿದೆ ಎಂಬ ವ್ಯಾಪಕ ಶಂಕೆ ಇದೆ ಎಂದು ಮೇ 1ರಂದು ಬಂಗಾಳದ ಮಾಲ್ಡಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 25 May 24

ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ