AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ತೆಲಂಗಾಣದಲ್ಲೂ ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಚುನಾವಣಾ ಪ್ರಚಾರ ಮಾಡದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಇದಕ್ಕೆ ಕಾರಣವೇನು? ಎಲ್ಲಿಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ? ಎಂಬಿತ್ಯಾದಿ ವಿವರ ಇಲ್ಲಿದೆ.

Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ
ಮಾಜಿ ಸಿಎಂ ಕೆಸಿಆರ್‌
ಸುಷ್ಮಾ ಚಕ್ರೆ
|

Updated on: May 01, 2024 | 8:38 PM

Share

ಹೈದರಾಬಾದ್: ಲೋಕಸಭಾ ಚುನಾವಣೆಯ (Lok Sabha Elections) ಪ್ರಚಾರದಲ್ಲಿ ಭಾಗವಹಿಸದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್​ಗೆ (KCR) ಚುನಾವಣಾ ಆಯೋಗ ನಿಷೇಧ ಹೇರಿದೆ. ಮುಂದಿನ 48 ಗಂಟೆ ಕಾಲ ಪ್ರಚಾರದಲ್ಲಿ ಭಾಗಿಯಾಗದಂತೆ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಕಾಂಗ್ರೆಸ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕೆಸಿಆರ್‌ಗೆ ಈ ನಿರ್ಬಂಧ ವಿಧಿಸಲಾಗಿದ್ದು, ಇಂದು ರಾತ್ರಿ 8 ಗಂಟೆಯಿಂದ 48 ಗಂಟೆ ಕಾಲ ಅವರು ಪ್ರಚಾರ ನಡೆಸುವಂತಿಲ್ಲ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥರಾಗಿರುವ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಮೇಲೆ 48 ಗಂಟೆಗಳ ಪ್ರಚಾರ ನಿಷೇಧವನ್ನು ವಿಧಿಸಲಾಗಿದೆ. ಸಿರ್ಸಿಲ್ಲಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಾದರಿ ನೀತಿ ಸಂಹಿತೆಯ ಉಲ್ಲಂಘನೆ:

ಏಪ್ರಿಲ್ 5ರಂದು ಕೆಸಿಆರ್ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಆದೇಶ ನೀಡಿದೆ. ಮೇ 1 ರಂದು ರಾತ್ರಿ 8 ರಿಂದ ಜಾರಿಗೆ ಬಂದ ನಿಷೇಧವನ್ನು ಮಾದರಿಯ ನೀತಿ ಸಂಹಿತೆ ಉಲ್ಲಂಘನೆಯ ಆಧಾರದ ಮೇಲೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ 

ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿದ ಕೆಸಿಆರ್, ತಮ್ಮ ಟೀಕೆಗಳು ರಾಜ್ಯದಲ್ಲಿ ಕಾಂಗ್ರೆಸ್‌ನ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಸೀಮಿತವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಯಾವುದೇ ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ