AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ತೆಲಂಗಾಣದಲ್ಲೂ ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಚುನಾವಣಾ ಪ್ರಚಾರ ಮಾಡದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಇದಕ್ಕೆ ಕಾರಣವೇನು? ಎಲ್ಲಿಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ? ಎಂಬಿತ್ಯಾದಿ ವಿವರ ಇಲ್ಲಿದೆ.

Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ
ಮಾಜಿ ಸಿಎಂ ಕೆಸಿಆರ್‌
ಸುಷ್ಮಾ ಚಕ್ರೆ
|

Updated on: May 01, 2024 | 8:38 PM

Share

ಹೈದರಾಬಾದ್: ಲೋಕಸಭಾ ಚುನಾವಣೆಯ (Lok Sabha Elections) ಪ್ರಚಾರದಲ್ಲಿ ಭಾಗವಹಿಸದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್​ಗೆ (KCR) ಚುನಾವಣಾ ಆಯೋಗ ನಿಷೇಧ ಹೇರಿದೆ. ಮುಂದಿನ 48 ಗಂಟೆ ಕಾಲ ಪ್ರಚಾರದಲ್ಲಿ ಭಾಗಿಯಾಗದಂತೆ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಕಾಂಗ್ರೆಸ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕೆಸಿಆರ್‌ಗೆ ಈ ನಿರ್ಬಂಧ ವಿಧಿಸಲಾಗಿದ್ದು, ಇಂದು ರಾತ್ರಿ 8 ಗಂಟೆಯಿಂದ 48 ಗಂಟೆ ಕಾಲ ಅವರು ಪ್ರಚಾರ ನಡೆಸುವಂತಿಲ್ಲ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥರಾಗಿರುವ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಮೇಲೆ 48 ಗಂಟೆಗಳ ಪ್ರಚಾರ ನಿಷೇಧವನ್ನು ವಿಧಿಸಲಾಗಿದೆ. ಸಿರ್ಸಿಲ್ಲಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಾದರಿ ನೀತಿ ಸಂಹಿತೆಯ ಉಲ್ಲಂಘನೆ:

ಏಪ್ರಿಲ್ 5ರಂದು ಕೆಸಿಆರ್ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಆದೇಶ ನೀಡಿದೆ. ಮೇ 1 ರಂದು ರಾತ್ರಿ 8 ರಿಂದ ಜಾರಿಗೆ ಬಂದ ನಿಷೇಧವನ್ನು ಮಾದರಿಯ ನೀತಿ ಸಂಹಿತೆ ಉಲ್ಲಂಘನೆಯ ಆಧಾರದ ಮೇಲೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ 

ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿದ ಕೆಸಿಆರ್, ತಮ್ಮ ಟೀಕೆಗಳು ರಾಜ್ಯದಲ್ಲಿ ಕಾಂಗ್ರೆಸ್‌ನ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಸೀಮಿತವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಯಾವುದೇ ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ