AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ? ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯವಿದು

Lok Sabha Elections 2024: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸುಮಾರು 300 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿರುವ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಕೋಪದ ಅಲೆಯಿಲ್ಲ ಎಂದು ಹೇಳಿದ್ದಾರೆ.

Prashant Kishor: ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ? ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯವಿದು
ಪ್ರಶಾಂತ್ ಕಿಶೋರ್
ಸುಷ್ಮಾ ಚಕ್ರೆ
|

Updated on: May 21, 2024 | 6:38 PM

Share

ನವದೆಹಲಿ: ಬಿಜೆಪಿ ಈ ಬಾರಿ 370 ಸ್ಥಾನಗಳನ್ನು ಪಡೆಯುತ್ತದೆ, ಎನ್​ಡಿಎ 400 ಸ್ಥಾನಗಳನ್ನು ಪಡೆಯುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಲೋಕಸಭಾ ಚುನಾವಣೆಯ (Lok Sabha Elections 2024) ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿರುವ ಚುನಾವಣಾ ವಿಶ್ಲೇಷಕ ಪ್ರಶಾಂತ್ ಕಿಶೋರ್ (Prashant Kishor), ಬಿಜೆಪಿಗೆ ಸ್ವಂತವಾಗಿ 370 ಸ್ಥಾನಗಳನ್ನು ಪಡೆಯುವುದು ಅಸಾಧ್ಯ ಮತ್ತು ಬಿಜೆಪಿ 300 ಸ್ಥಾನಗಳನ್ನು ಪಡೆಯಬಹುದು ಎಂದು ಹೇಳಿದ್ದಾರೆ.

“ಬಿಜೆಪಿ 370 ಸ್ಥಾನಗಳನ್ನು ಪಡೆಯುತ್ತದೆ ಮತ್ತು ಎನ್‌ಡಿಎ 400 ಸೀಟುಗಳನ್ನು ಮೀರುತ್ತದೆ ಎಂದು ಪ್ರಧಾನಿ ಮೋದಿ ಹೇಳಿಕೊಂಡ ದಿನದಿಂದಲೇ ಇದು ಸಾಧ್ಯವಿಲ್ಲ ಎಂದು ನಾನು ಹೇಳಿದ್ದೇನೆ. ಇದೆಲ್ಲವೂ ಕಾರ್ಯಕರ್ತರನ್ನು ಉತ್ತೇಜಿಸಲು ಮೋದಿ ಮಾಡುತ್ತಿರುವ ಘೋಷಣೆಯಾಗಿದೆ. ಬಿಜೆಪಿಗೆ 370 ಸ್ಥಾನಗಳನ್ನು ಪಡೆಯುವುದು ಅಸಾಧ್ಯ. ಆದರೆ, ಬಿಜೆಪಿ 270 ಸ್ಥಾನಗಳಿಗಿಂತಲೂ ಕೆಳಗಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಹಿಂದಿನ ಲೋಕಸಭೆ ಚುನಾವಣೆಯ ರೀತಿಯಲ್ಲೇ 303 ಸ್ಥಾನಗಳನ್ನು ಅಥವಾ ಬಹುಶಃ ಸ್ವಲ್ಪ ಹೆಚ್ಚು ಸ್ಥಾನಗಳನ್ನು ಪಡೆಯಲು ಬಿಜೆಪಿ ಯಶಸ್ವಿಯಾಗುತ್ತದೆ.” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ವ್ಯಾಪಕ ಕೋಪವಾಗಲೀ ಅಥವಾ ಸವಾಲು ಹಾಕುವವರ ಕೂಗಾಗಲೀ ಇಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೊಂದು ಗೆಲುವಿನತ್ತ ಕೊಂಡೊಯ್ಯುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಯ ಲೆಕ್ಕಾಚಾರವು 2019ರ ಸ್ಕೋರ್ 303ರ ಆಸುಪಾಸಿನಲ್ಲಿ ಅಥವಾ ಅದಕ್ಕಿಂತ ಉತ್ತಮವಾಗಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kanhaiya Kumar: ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್​ಗೆ ಕಪಾಳಮೋಕ್ಷ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಲು ಕಾರಣವೇನೆಂಬುದನ್ನು ವಿವರಿಸಿದ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್, ಆಡಳಿತ ಪಕ್ಷ ಬಿಜೆಪಿ ಉತ್ತರ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಯಾವುದೇ ಅಡೆತಡೆಯನ್ನು ಎದುರಿಸುತ್ತಿಲ್ಲ. ಆದರೆ ಬಿಜೆಪಿ ಗೆಲ್ಲುವ ಸ್ಥಾನಗಳು ದಕ್ಷಿಣ ಮತ್ತು ಪೂರ್ವದಲ್ಲಿ ಉಲ್ಬಣಗೊಳ್ಳುತ್ತವೆ ಎಂದು ಹೇಳಿದ್ದಾರೆ.

“ಮೊದಲು, 2019ರ ಚುನಾವಣೆಯಲ್ಲಿ ಬಿಜೆಪಿ ತನ್ನ 303 ಸ್ಥಾನಗಳನ್ನು ಎಲ್ಲಿ ಪಡೆದುಕೊಂಡಿದೆ ಎಂಬುದನ್ನು ಗಮನಿಸಿ. ಆ 303 ಸ್ಥಾನಗಳಲ್ಲಿ 250 ಉತ್ತರ ಮತ್ತು ಪಶ್ಚಿಮ ಪ್ರದೇಶಗಳಿಂದ ಬಂದಿವೆ. ಈ ಬಾರಿ ಪೂರ್ವ ಮತ್ತು ದಕ್ಷಿಣದಲ್ಲಿ ಬಿಜೆಪಿಯು ಲೋಕಸಭೆಯಲ್ಲಿ ಸುಮಾರು 50 ಸ್ಥಾನಗಳನ್ನು ಹೊಂದಿದ್ದು, ಪೂರ್ವ ಮತ್ತು ದಕ್ಷಿಣದಲ್ಲಿ ಬಿಜೆಪಿಯ ಮತಗಳಿಕೆಯು ಗಣನೀಯವಾಗಿ ಹೆಚ್ಚುತ್ತಿದೆ ಎಂದು ನಂಬಲಾಗಿದೆ. ಈ ಪ್ರದೇಶಗಳಲ್ಲಿ 15-20 ಸ್ಥಾನಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಆದರೆ, ಉತ್ತರ ಮತ್ತು ಪಶ್ಚಿಮದಲ್ಲಿ ಯಾವುದೇ ಗಮನಾರ್ಹ ಸೋಲು ಕಾಣುವುದಿಲ್ಲ” ಎಂದು ಪ್ರಶಾಂತ್ ಕಿಶೋರ್ ವಿವರಿಸಿದ್ದಾರೆ.

ಇದನ್ನೂ ಓದಿ: Priyanka Gandhi: ಪ್ರಿಯಾಂಕಾ ಗಾಂಧಿ ಏಕೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ?

ಇದಲ್ಲದೆ, ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್, ಈ ಬಾರಿ ಭಾರತದಲ್ಲಿ ಪ್ರಧಾನಿ ಮೋದಿ ವಿರುದ್ಧ ಯಾವುದೇ ವ್ಯಾಪಕ ಕೋಪವಿಲ್ಲ ಎಂದು ಗಮನಸೆಳೆದಿದ್ದಾರೆ. ಅವರ ಕಾರ್ಯಕ್ಷಮತೆಯಿಂದ ನಿರಾಶೆಗೊಂಡ ಸಮಾಜದ ಒಂದು ವರ್ಗವನ್ನು ಹೊರತುಪಡಿಸಿ ಬೇರಾರಿಗೂ ಮೋದಿ ಬಗ್ಗೆ ಕೋಪವಿಲ್ಲ ಎಂದಿದ್ದಾರೆ.

ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಬಿಜೆಪಿ ಸುಮಾರು 325 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಈ ಬೆಲ್ಟ್ 2014ರಿಂದ ಬಿಜೆಪಿಯ ಭದ್ರಕೋಟೆಯಾಗಿದೆ. 225 ಈ ಬೆಸ ಸ್ಥಾನಗಳನ್ನು ಹೊಂದಿರುವ ಪೂರ್ವ ಮತ್ತು ದಕ್ಷಿಣದಲ್ಲಿ ಬಿಜೆಪಿ ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಕಳೆದ ಒಂದು ದಶಕದಲ್ಲಿ ಈ 225 ಸ್ಥಾನಗಳಲ್ಲಿ ಬಿಜೆಪಿ 50ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!