AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯ ಬ್ಲಾಕ್-ಎನ್​ಡಿಎ ಈ ಎರಡಲ್ಲಿ ಚಂದ್ರಬಾಬು ನಾಯ್ಡು ಆಯ್ಕೆಯೇನು?

ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ದೆಹಲಿಯಲ್ಲಿ ಇಂಡಿಯ ಬ್ಲಾಕ್‌ನ ಸಭೆಯಲ್ಲಿ ಪಾಲ್ಗೊಳ್ಳುವರೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. 16 ಲೋಕಸಭಾ ಸ್ಥಾನಗಳನ್ನು ಗೆದ್ದು ಕಿಂಗ್‌ಮೇಕರ್ ಆದ ಚಂದ್ರಬಾಬು ನಾಯ್ಡು, ನಾವು ಎನ್‌ಡಿಎಯಲ್ಲಿದ್ದೇವೆ. ಸಭೆಯಲ್ಲಿ ನಾನು ಭಾಗವಹಿಸಲಿದ್ದೇನೆ. ಎನ್‌ಡಿಎ ಸಭೆಯ ನಂತರ ಏನಾದರೂ ಸಂಭವಿಸಿದರೆ, ನಾನು ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಇಂಡಿಯ ಬ್ಲಾಕ್-ಎನ್​ಡಿಎ ಈ ಎರಡಲ್ಲಿ ಚಂದ್ರಬಾಬು ನಾಯ್ಡು ಆಯ್ಕೆಯೇನು?
ಚಂದ್ರಬಾಬು ನಾಯ್ಡು
ಸುಷ್ಮಾ ಚಕ್ರೆ
|

Updated on: Jun 05, 2024 | 3:13 PM

Share

ನವದೆಹಲಿ: ಆಂಧ್ರಪ್ರದೇಶ ಲೋಕಸಭೆ (Andhra Pradesh Lok Sabha Elections) ಮತ್ತು ವಿಧಾನಸಭೆ ಚುನಾವಣೆಯಲ್ಲಿ (Andhra Pradesh Assembly Polls) ಭರ್ಜರಿ ಗೆಲುವು ಸಾಧಿಸಿರುವ ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಇದೀಗ ಕಿಂಗ್ ಮೇಕರ್ ಆಗಿದ್ದಾರೆ. ಅವರು ಎನ್​ಡಿಎಗೆ ಬೆಂಬಲ ನೀಡುತ್ತಾರೋ ಅಥವಾ ಇಂಡಿಯ ಬ್ಲಾಕ್​ಗೆ ಬೆಂಬಲ ನೀಡುತ್ತಾರೋ ಎಂಬ ಕುತೂಹಲ ಉಂಟಾಗಿದೆ. ಆದರೆ,

ಮುಂದಿನ ಕೇಂದ್ರ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ತಮ್ಮ ಬೆಂಬಲವನ್ನು ನೀಡುವುದಾಗಿ ಒತ್ತಿ ಹೇಳಿದ್ದಾರೆ. ಇಂಡಿಯ ಬಣಕ್ಕೆ ಚಂದ್ರಬಾಬು ನಾಯ್ಡು ಬೆಂಬಲ ನೀಡುತ್ತಾರೆ ಎಂಬ ವದಂತಿಗಳು ಹಬ್ಬಿರುವ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಸಹಾಯವಾಗಲಿದೆಯೇ ನಿತೀಶ್ ಕುಮಾರ್ ಯು-ಟರ್ನ್ ನಿರ್ಧಾರ?

ಇಂದು ದೆಹಲಿಯಲ್ಲಿ ಎನ್‌ಡಿಎ ಪಾಲುದಾರರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು “ನಾನು ಎನ್‌ಡಿಎಯಲ್ಲಿದ್ದೇನೆ ಮತ್ತು ಸಭೆಗೆ ಹೋಗುತ್ತಿದ್ದೇನೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಪಕ್ಷವು 175 ಸ್ಥಾನಗಳಲ್ಲಿ 135 ಸ್ಥಾನಗಳೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ. ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮರಳಲು ಸಿದ್ಧರಾಗಿದ್ದಾರೆ. ಹಾಗೇ, 28 ಲೋಕಸಭಾ ಸ್ಥಾನಗಳಲ್ಲಿ 16 ಸ್ಥಾನಗಳನ್ನು ಟಿಡಿಪಿ ಗೆದ್ದಿದೆ.

ಟಿಡಿಪಿಯ ರಾಜ್ಯಮಟ್ಟದ ಮಿತ್ರಪಕ್ಷವಾದ ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ 2 ಲೋಕಸಭಾ ಸ್ಥಾನಗಳು ಮತ್ತು 21 ವಿಧಾನಸಭಾ ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪವನ್ ಕಲ್ಯಾಣ್ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಇಂದು ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಭೇಟಿ; ಕಿಂಗ್ ಮೇಕರ್​ಗಳ ನಿಲುವೇನು?

ಟಿಡಿಪಿಯ 16 ಲೋಕಸಭಾ ಸ್ಥಾನಗಳು ಸದ್ಯಕ್ಕೆ ಪ್ರಮುಖವಾಗಿವೆ. ಏಕೆಂದರೆ, ಬಿಜೆಪಿ ಎಕ್ಸಿಟ್ ಪೋಲ್​ನ ಸಮೀಕ್ಷೆಗಳಿಗೆ ವಿರುದ್ಧವಾಗಿ 272 ಸ್ಥಾನಗಳನ್ನು ಪಡೆದಿದೆ. ಬಹುಮತದ ಮಾರ್ಕ್ ಅನ್ನು ದಾಟಲು ವಿಫಲವಾಗಿದೆ ಮತ್ತು ಈಗ ಸರ್ಕಾರವನ್ನು ರಚಿಸಲು ಎನ್‌ಡಿಎ ಪಾಲುದಾರರಿಂದ ಸಕ್ರಿಯ ಬೆಂಬಲದ ಅಗತ್ಯವಿದೆ. ಇಂಡಿಯ ಬಣ ಟಿಡಿಪಿಯ ಬೆಂಬಲ ಪಡೆದರೆ ಎನ್​ಡಿಎಗೆ ಸಮಸ್ಯೆ ಉಂಟಾಗಲಿದೆ.

ಟಿಡಿಪಿ ನಾಯಕ ಅವರು 2019ರ ಸಾರ್ವತ್ರಿಕ ಚುನಾವಣೆಯ ಮೊದಲು ತೊರೆದು ಕಾಂಗ್ರೆಸ್ ನೇತೃತ್ವದ ಯುಪಿಎಗೆ ಸೇರುವ ಮೊದಲು ಎನ್‌ಡಿಎ ಭಾಗವಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ