AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯ ಬ್ಲಾಕ್-ಎನ್​ಡಿಎ ಈ ಎರಡಲ್ಲಿ ಚಂದ್ರಬಾಬು ನಾಯ್ಡು ಆಯ್ಕೆಯೇನು?

ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ದೆಹಲಿಯಲ್ಲಿ ಇಂಡಿಯ ಬ್ಲಾಕ್‌ನ ಸಭೆಯಲ್ಲಿ ಪಾಲ್ಗೊಳ್ಳುವರೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. 16 ಲೋಕಸಭಾ ಸ್ಥಾನಗಳನ್ನು ಗೆದ್ದು ಕಿಂಗ್‌ಮೇಕರ್ ಆದ ಚಂದ್ರಬಾಬು ನಾಯ್ಡು, ನಾವು ಎನ್‌ಡಿಎಯಲ್ಲಿದ್ದೇವೆ. ಸಭೆಯಲ್ಲಿ ನಾನು ಭಾಗವಹಿಸಲಿದ್ದೇನೆ. ಎನ್‌ಡಿಎ ಸಭೆಯ ನಂತರ ಏನಾದರೂ ಸಂಭವಿಸಿದರೆ, ನಾನು ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಇಂಡಿಯ ಬ್ಲಾಕ್-ಎನ್​ಡಿಎ ಈ ಎರಡಲ್ಲಿ ಚಂದ್ರಬಾಬು ನಾಯ್ಡು ಆಯ್ಕೆಯೇನು?
ಚಂದ್ರಬಾಬು ನಾಯ್ಡು
ಸುಷ್ಮಾ ಚಕ್ರೆ
|

Updated on: Jun 05, 2024 | 3:13 PM

Share

ನವದೆಹಲಿ: ಆಂಧ್ರಪ್ರದೇಶ ಲೋಕಸಭೆ (Andhra Pradesh Lok Sabha Elections) ಮತ್ತು ವಿಧಾನಸಭೆ ಚುನಾವಣೆಯಲ್ಲಿ (Andhra Pradesh Assembly Polls) ಭರ್ಜರಿ ಗೆಲುವು ಸಾಧಿಸಿರುವ ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಇದೀಗ ಕಿಂಗ್ ಮೇಕರ್ ಆಗಿದ್ದಾರೆ. ಅವರು ಎನ್​ಡಿಎಗೆ ಬೆಂಬಲ ನೀಡುತ್ತಾರೋ ಅಥವಾ ಇಂಡಿಯ ಬ್ಲಾಕ್​ಗೆ ಬೆಂಬಲ ನೀಡುತ್ತಾರೋ ಎಂಬ ಕುತೂಹಲ ಉಂಟಾಗಿದೆ. ಆದರೆ,

ಮುಂದಿನ ಕೇಂದ್ರ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ತಮ್ಮ ಬೆಂಬಲವನ್ನು ನೀಡುವುದಾಗಿ ಒತ್ತಿ ಹೇಳಿದ್ದಾರೆ. ಇಂಡಿಯ ಬಣಕ್ಕೆ ಚಂದ್ರಬಾಬು ನಾಯ್ಡು ಬೆಂಬಲ ನೀಡುತ್ತಾರೆ ಎಂಬ ವದಂತಿಗಳು ಹಬ್ಬಿರುವ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಸಹಾಯವಾಗಲಿದೆಯೇ ನಿತೀಶ್ ಕುಮಾರ್ ಯು-ಟರ್ನ್ ನಿರ್ಧಾರ?

ಇಂದು ದೆಹಲಿಯಲ್ಲಿ ಎನ್‌ಡಿಎ ಪಾಲುದಾರರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು “ನಾನು ಎನ್‌ಡಿಎಯಲ್ಲಿದ್ದೇನೆ ಮತ್ತು ಸಭೆಗೆ ಹೋಗುತ್ತಿದ್ದೇನೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಪಕ್ಷವು 175 ಸ್ಥಾನಗಳಲ್ಲಿ 135 ಸ್ಥಾನಗಳೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ. ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮರಳಲು ಸಿದ್ಧರಾಗಿದ್ದಾರೆ. ಹಾಗೇ, 28 ಲೋಕಸಭಾ ಸ್ಥಾನಗಳಲ್ಲಿ 16 ಸ್ಥಾನಗಳನ್ನು ಟಿಡಿಪಿ ಗೆದ್ದಿದೆ.

ಟಿಡಿಪಿಯ ರಾಜ್ಯಮಟ್ಟದ ಮಿತ್ರಪಕ್ಷವಾದ ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ 2 ಲೋಕಸಭಾ ಸ್ಥಾನಗಳು ಮತ್ತು 21 ವಿಧಾನಸಭಾ ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪವನ್ ಕಲ್ಯಾಣ್ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಇಂದು ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಭೇಟಿ; ಕಿಂಗ್ ಮೇಕರ್​ಗಳ ನಿಲುವೇನು?

ಟಿಡಿಪಿಯ 16 ಲೋಕಸಭಾ ಸ್ಥಾನಗಳು ಸದ್ಯಕ್ಕೆ ಪ್ರಮುಖವಾಗಿವೆ. ಏಕೆಂದರೆ, ಬಿಜೆಪಿ ಎಕ್ಸಿಟ್ ಪೋಲ್​ನ ಸಮೀಕ್ಷೆಗಳಿಗೆ ವಿರುದ್ಧವಾಗಿ 272 ಸ್ಥಾನಗಳನ್ನು ಪಡೆದಿದೆ. ಬಹುಮತದ ಮಾರ್ಕ್ ಅನ್ನು ದಾಟಲು ವಿಫಲವಾಗಿದೆ ಮತ್ತು ಈಗ ಸರ್ಕಾರವನ್ನು ರಚಿಸಲು ಎನ್‌ಡಿಎ ಪಾಲುದಾರರಿಂದ ಸಕ್ರಿಯ ಬೆಂಬಲದ ಅಗತ್ಯವಿದೆ. ಇಂಡಿಯ ಬಣ ಟಿಡಿಪಿಯ ಬೆಂಬಲ ಪಡೆದರೆ ಎನ್​ಡಿಎಗೆ ಸಮಸ್ಯೆ ಉಂಟಾಗಲಿದೆ.

ಟಿಡಿಪಿ ನಾಯಕ ಅವರು 2019ರ ಸಾರ್ವತ್ರಿಕ ಚುನಾವಣೆಯ ಮೊದಲು ತೊರೆದು ಕಾಂಗ್ರೆಸ್ ನೇತೃತ್ವದ ಯುಪಿಎಗೆ ಸೇರುವ ಮೊದಲು ಎನ್‌ಡಿಎ ಭಾಗವಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ