AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು! ಹೇಗೆಂಬ ಮಾಹಿತಿ ಇಲ್ಲಿದೆ

ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಅನೇಕ ಸ್ಥಾನಗಳಲ್ಲಿ ಅದು ಮೂರನೇ ಸ್ಥಾನದಲ್ಲಿದೆ. ಚುನಾವಣಾ ಫಲಿತಾಂಶದ ಅಂಕಿಅಂಶಗಳನ್ನು ನೋಡಿದಾಗ, ಉತ್ತರ ಪ್ರದೇಶದ ಕೆಲವು ಸ್ಥಾನಗಳಲ್ಲಿ ಬಿಜೆಪಿಗೆ ಹೇಗೆ ಬಿಎಸ್​ಪಿ ಸಹಾಯಕವಾಗಿದೆ ಎಂಬುದನ್ನು ಗಮನಿಸಬಹುದು. ಆ ಸ್ಥಾನಗಳಲ್ಲಿ ಬಿಎಸ್‌ಪಿ ಅಷ್ಟೊಂದು ಮತಗಳನ್ನು ಪಡೆಯದಿದ್ದರೆ ಬಿಜೆಪಿಯೂ ಸೋಲುವ ಸಾಧ್ಯತೆ ಇತ್ತು.

ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು! ಹೇಗೆಂಬ ಮಾಹಿತಿ ಇಲ್ಲಿದೆ
ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು!
Ganapathi Sharma
|

Updated on: Jun 06, 2024 | 2:23 PM

Share

ನವದೆಹಲಿ, ಜೂನ್ 6: ಲೋಕಸಭೆ ಚುನಾವಣೆಯಲ್ಲಿ (Lok Sabha Election Result) ಉತ್ತರ ಪ್ರದೇಶದಲ್ಲಿ (Uttar Pradesh) ಸುಮಾರು 16 ಕ್ಷೇತ್ರಗಳಲ್ಲಿ ಬಿಜೆಪಿ (BJP) ಹಾಗೂ ಅದರ ಮಿತ್ರ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಬಹುಜನ ಸಮಾಜ ಪಕ್ಷ (BSP) ಅಭ್ಯರ್ಥಿಗಳು ಪರೋಕ್ಷವಾಗಿ ನೆರವಾಗಿದ್ದಾರೆ! ಇದಕ್ಕೆ ಅಂಕಿ ಅಂಶಗಳೇ ಸಾಕ್ಷಿಯಾಗಿವೆ. ಆ 16 ಸ್ಥಾನಗಳಲ್ಲಿ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿನ ಅಂತರಕ್ಕಿಂತಲೂ ಹೆಚ್ಚು ಮತಗಳನ್ನು ಬಿಎಸ್‌ಪಿ ಅಭ್ಯರ್ಥಿಗಳು ಗಳಿಸಿದ್ದಾರೆ. ಈ ಪೈಕಿ ಬಿಜೆಪಿ 14 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೆ, ಅದರ ಮಿತ್ರ ಪಕ್ಷಗಳಾದ ರಾಷ್ಟ್ರೀಯ ಲೋಕದಳ ಮತ್ತು ಅಪ್ನಾ ದಳ ತಲಾ 1 ಸ್ಥಾನ ಗೆದ್ದಿವೆ. ಒಂದು ವೇಳೆ, ಈ ಕ್ಷೇತ್ರಗಳಲ್ಲಿ ಗೆಲುವು ಇಂಡಿಯಾ ಮೈತ್ರಿಕೂಟದ್ದಾಗಿದ್ದರೆ ಎನ್‌ಡಿಎ 278 ಸ್ಥಾನಗಳಿಗೆ ತೃಪ್ತಿಪಡಬೇಕಾಗಿ ಬರುತ್ತಿತ್ತು. ಬಿಜೆಪಿ 226 ಕ್ಕೆ ಕುಸಿಯುತ್ತಿತ್ತು. ಉತ್ತರ ಪ್ರದೇಶದಲ್ಲಿ ಬಿಜೆಪಿ 33 ಸ್ಥಾನಗಳನ್ನು ಗೆದ್ದಿದೆ. ಈ 14 ಸ್ಥಾನಗಳಲ್ಲಿ ಸೋತಿದ್ದರೆ ಅದರ ಸಂಖ್ಯೆ 19 ಮಾತ್ರ ಉಳಿಯುತ್ತಿತ್ತು, ಇದು ದೊಡ್ಡ ಹೊಡೆತವಾಗುತ್ತಿತ್ತು.

ಸಹಜವಾಗಿ, ಬಿಎಸ್ಪಿ ಪಡೆದ ಮತಗಳು ಅದರ ಅನುಪಸ್ಥಿತಿಯಲ್ಲಿ ಎಸ್‌ಪಿ ಅಥವಾ ಕಾಂಗ್ರೆಸ್‌ಗೇ ಹೋಗುತ್ತವೆ ಎಂದು ಹೇಳಲಾಗದಿದ್ದರೂ ಬಿಎಸ್‌ಪಿ ಅನುಪಸ್ಥಿಯಿಂದಾಗಿ ಅದರ ಅನೇಕ ನಾಯಕರು ಇಂಡಿಯಾ ಮೈತ್ರಿಕೂಟಕ್ಕೆ ಸೇರಿರುವುದಂತೂ ನಿಜ. ಸಮಾಜವಾದಿ ಪಕ್ಷವು ಭದೋಹಿ ಸ್ಥಾನವನ್ನ ಟಿಎಂಸಿಗೆ ಮೀಸಲಿರಿಸಿತ್ತು. ಇದಕ್ಕೆ ಪ್ರತಿಯಾಗಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನಿಂದ ಒಂದು ಸ್ಥಾನ ಪಡೆದಿತ್ತು. ಆದರೆ, ಇವೆರಡೂ ಕ್ಷೇತ್ರದಲ್ಲಿ ಎಸ್‌ಪಿ ಮತ್ತು ಟಿಎಂಸಿ ಗೆದ್ದಿಲ್ಲ. ಟಿಎಂಸಿ ಅಭ್ಯರ್ಥಿ 4.2 ಲಕ್ಷ ಮತ ಪಡೆದಿದ್ದರೂ ಬಿಜೆಪಿ ಅಭ್ಯರ್ಥಿ ವಿರುದ್ಧ 44,072 ಮತಗಳಿಂದ ಸೋತಿದ್ದಾರೆ. ಬಿಎಸ್‌ಪಿ ಅಭ್ಯರ್ಥಿ ಸುಮಾರು 1.6 ಲಕ್ಷ ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಡಾ. ವಿನೋದ್ ಕುಮಾರ್‌ ಬಿಂದ್ ಗೆಲುವಿಗೆ ಸಹಕಾರಿಯಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಮಿರ್ಜಾಪುರದಲ್ಲಿ ಸೋನಿಲಾಲ್‌ ಬಣದ ಅಪ್ನಾದಳ ಅಭ್ಯರ್ಥಿ ಅನುಪ್ರಿಯಾ ಪಟೇಲ್‌ 37,810 ಮತಗಳಿಂದ ಎಸ್‌ಪಿ ಕ್ಯಾಂಡಿಡೇಟ್‌ ರಮೇಶ್‌ಚಾಂದ್‌ ಬಿಂದ್‌ ಅವರನ್ನ ಸೋಲಿಸಿದಾರೆ. ಬಿಎಸ್‌ಪಿಯ ಮನೀಶ್‌ಕುಮಾರ್ ಇಲ್ಲಿ 1.4 ಲಕ್ಷ ಮತಗಳನ್ನ ಪಡೆದಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ, ರಾಜ್ಯದಿಂದ ಎಷ್ಟು ಮಂದಿಗೆ ಸಿಗಬಹುದು ಮೋದಿ ಸಂಪುಟದಲ್ಲಿ ಸ್ಥಾನ?

ಅಕ್ಬರ್‌ಪುರದಲ್ಲಿ ಬಿಜೆಪಿಯ ದೇವೇಂದ್ರ ಸಿಂಗ್ 5,17,423 ಮತಗಳನ್ನು ಪಡೆದಿದ್ದಾರೆ. ಎಸ್‌ಪಿಯ ರಾಜಾರಾಮ್ ಪಾಲ್ 4,07,378 ಮತಗಳನ್ನು ಪಡೆದಿದ್ದಾರೆ. ಬಿಎಸ್‌ಪಿ ಮೂರನೇ ಸ್ಥಾನದಲ್ಲಿಯೇ ಉಳಿದಿದೆ. ಬಿಎಸ್​ಪಿ ಖಾತೆಗೆ 73,140 ಮತಗಳು ಬಂದಿವೆ. ಅಂದರೆ ಇಲ್ಲಿ ಬಿಜೆಪಿ 44,345 ಮತಗಳ ಅಂತರದಿಂದ ಗೆದ್ದಿದೆ. ಬಿಎಸ್‌ಪಿ ಸ್ಪರ್ಧಿಸದೇ ಇದ್ದು ಆ ಮತಗಳೂ ಎಸ್‌ಪಿಗೆ ಶಿಫ್ಟ್ ಆಗಿದ್ದರೆ ಬಿಜೆಪಿ ಸೋಲುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ

ಗೆಲುವಿನ ಅಂತರಕ್ಕಿಂತ ಬಿಎಸ್‌ಪಿ ಹೆಚ್ಚು ಮತ ಪಡೆದಿರುವುದು ಸೀಮಿತ ಪ್ರದೇಶದಲ್ಲಷ್ಟೇ ಅಲ್ಲ, ಉತ್ತರ ಪ್ರದೇಶದ ಬಿಜ್ನೋರ್‌ನಿಂದ ಮಿರ್ಜಾಪುರದವರೆಗೂ ಹಲವೆಡೆ ದಾಖಲಾಗಿದೆ ಎಂಬುದು ಗಮನಾರ್ಹ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು