ಲೋಕಸಭೆ ಫಲಿತಾಂಶ: ಗೆದ್ದು ಇತಿಹಾಸ ನಿರ್ಮಿಸಿದ ಶಾಂಭವಿ ಚೌಧರಿ, ಎನ್​ಡಿಎ ಅಭ್ಯರ್ಥಿ ಈಗ ದೇಶದ ಅತಿ ಕಿರಿಯ ಸಂಸದೆ

ಜೆಡಿಯು ಸಚಿವ ಅಶೋಕ್ ಕುಮಾರ್ ಚೌಧರಿ ಅವರ ಪುತ್ರಿ ಶಾಂಭವಿ ಚೌಧರಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಂಭವಿ ಲೋಕಸಭೆ ಚುನಾವಣೆಗೆ ಮುನ್ನ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್ ವಿಲಾಸ್) ಔಪಚಾರಿಕವಾಗಿ ಸೇರಿದ್ದರು.

ಲೋಕಸಭೆ ಫಲಿತಾಂಶ: ಗೆದ್ದು ಇತಿಹಾಸ ನಿರ್ಮಿಸಿದ ಶಾಂಭವಿ ಚೌಧರಿ, ಎನ್​ಡಿಎ ಅಭ್ಯರ್ಥಿ ಈಗ ದೇಶದ ಅತಿ ಕಿರಿಯ ಸಂಸದೆ
ಶಾಂಭವಿ ಚೌಧರಿ
Follow us
|

Updated on: Jun 04, 2024 | 4:13 PM

ಪಟ್ನಾ, ಜೂನ್ 4: ಲೋಕಸಭೆ ಚುನಾವಣೆ ಫಲಿತಾಂಶಗಳು (Lok Sabha result) ಪ್ರಕಟವಾಗುತ್ತಿದ್ದು, ಉತ್ತರ ಬಿಹಾರದ ಸಮಸ್ತಿಪುರ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ (NDA Candidate) ಶಾಂಭವಿ ಚೌಧರಿ (Shambhavi Choudhary) ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯಂತ ಕಿರಿಯ ಸಂಸದರಾಗಿ ಹೊರಹೊಮ್ಮಿದ್ದು, ಇತಿಹಾಸ ಸೃಷ್ಟಿಸಿದ್ದಾರೆ. ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ನೀಡಿದ ಅಫಿಡವಿಟ್ ಪ್ರಕಾರ ಚೌಧರಿ ವಯಸ್ಸು ಕೇವಲ 25 ವರ್ಷ.

ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಹಿರಿಯ ಜೆಡಿಯು ಸಚಿವ ಅಶೋಕ್ ಕುಮಾರ್ ಚೌಧರಿ ಅವರ ಪುತ್ರಿ ಶಾಂಭವಿ ಚೌಧರಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಮೀಸಲು ಕ್ಷೇತ್ರದಿಂದ ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಸನ್ನಿ ಹಜಾರಿ ವಿರುದ್ಧ ಸುಮಾರು ಒಂದು ಲಕ್ಷ ಮತಗಳ ಅಂತರದಿಂಧ ಗೆಲುವು ಸಾಧಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಸನ್ನಿ ಅವರನ್ನು ಕಣಕ್ಕಿಳಿಸಲಾಗಿತ್ತು. ಲೋಕಸಭೆ ಚುನಾವಣೆಗೂ ಮುನ್ನ ಅವರು ಮಾತೃ ಪಕ್ಷವನ್ನು ಸೇರಿದ್ದರು. ಆದರೆ, ರಾಜಕೀಯ ಹಿತಾಸಕ್ತಿಗಳ ಭಿನ್ನಾಭಿಪ್ರಾಯದಿಂದಾಗಿ ಅವರ ತಂದೆ ಮಹೇಶ್ವರ್ ಹಜಾರಿ (ಇವರು ಜೆಡಿಯು ನಾಯಕರು) ಸನ್ನಿ ಪರವಾಗಿ ಪ್ರಚಾರ ಮಾಡಲು ಸಾಧ್ಯವಾಗಲಿಲ್ಲ ಎಂಬುದು ಗಮನಾರ್ಹ.

ಮಹೇಶ್ವರ್ ಜೆಡಿಯು ಸಚಿವರಾಗಿದ್ದು, ಅವರ ಮಗ ಆಪ್ ಐಎನ್‌ಸಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಶಾಂಭವಿ ಮಾಜಿ ಐಪಿಎಸ್ ಅಧಿಕಾರಿ ಕಿಶೋರ್ ಕುನಾಲ್ ಅವರ ಸೊಸೆಯಾಗಿದ್ದಾರೆ. ಕುನಾಲ್ ಅವರು ಅಯೋಧ್ಯೆ ರಾಮ ಮಂದಿರ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುನಾಲ್ ಪಟ್ನಾದ ಮಹಾವೀರ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷರೂ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಶಾಂಭವಿ ಪರವಾಗಿ ಪ್ರಚಾರ ಮಾಡಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಾಂಭವಿ ಲೋಕಸಭೆ ಚುನಾವಣೆಗೆ ಮುನ್ನ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್ ವಿಲಾಸ್) ಔಪಚಾರಿಕವಾಗಿ ಸೇರಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ ಸಮಸ್ತಿಪುರ ಕ್ಷೇತ್ರವನ್ನು ಮಾಜಿ ಸಂಸದ ರಾಮಚಂದ್ರ ಪಾಸ್ವಾನ್ ಅವರ ಪುತ್ರ ಎಲ್‌ಜೆಪಿ ಅಭ್ಯರ್ಥಿ ಪ್ರಿನ್ಸ್ ರಾಜ್ ಗೆದ್ದಿದ್ದರು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ