AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಂತ್ ಚೌಧರಿ ಅವರ ಆರ್‌ಎಲ್‌ಡಿಯೊಂದಿಗೆ ಮೈತ್ರಿ ಘೋಷಿಸಿದ ಅಖಿಲೇಶ್ ಯಾದವ್

ಆರ್‌ಎಲ್‌ಡಿ ಮತ್ತು ಎಸ್‌ಪಿ ಮೈತ್ರಿಗೆ ಎಲ್ಲರಿಗೂ ಅಭಿನಂದನೆಗಳು. ಗೆಲುವಿಗಾಗಿ ನಾವೆಲ್ಲರೂ ಒಂದಾಗೋಣ ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಏತನ್ಮಧ್ಯೆ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ತಾನು ಸದಾ ಸಿದ್ಧ ಎಂದು ಜಯಂತ್ ಚೌಧರಿ ಹೇಳಿದರು.

ಜಯಂತ್ ಚೌಧರಿ ಅವರ ಆರ್‌ಎಲ್‌ಡಿಯೊಂದಿಗೆ ಮೈತ್ರಿ ಘೋಷಿಸಿದ ಅಖಿಲೇಶ್ ಯಾದವ್
ಅಖಿಲೇಶ್ ಯಾದವ್ -ಜಯಂತ್ ಚೌಧರಿ
Follow us
ರಶ್ಮಿ ಕಲ್ಲಕಟ್ಟ
|

Updated on:Jan 19, 2024 | 7:17 PM

ಲಕ್ನೋ ಜನವರಿ 19: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಮಾಜವಾದಿ ಪಕ್ಷ (Samajwadi Party) ಮತ್ತು ರಾಷ್ಟ್ರೀಯ ಲೋಕದಳ (RLD) ಮೈತ್ರಿ ಮಾಡಿಕೊಳ್ಳುವುದಾಗಿ ಶುಕ್ರವಾರ ಘೋಷಿಸಿವೆ. ಒಪ್ಪಂದದ ಪ್ರಕಾರ, ಅಖಿಲೇಶ್ ಯಾದವ್ (Akhilesh Yadav)ನೇತೃತ್ವದ ಪಕ್ಷವು ಪಶ್ಚಿಮ ಉತ್ತರ ಪ್ರದೇಶದಲ್ಲಿ ಜಯಂತ್ ಚೌಧರಿ ಅವರ ಪಕ್ಷಕ್ಕೆ ಏಳು ಸ್ಥಾನಗಳನ್ನು ಬಿಟ್ಟುಕೊಡಲಿದೆ.

ಆರ್‌ಎಲ್‌ಡಿ ಮತ್ತು ಎಸ್‌ಪಿ ಮೈತ್ರಿಗೆ ಎಲ್ಲರಿಗೂ ಅಭಿನಂದನೆಗಳು. ಗೆಲುವಿಗಾಗಿ ನಾವೆಲ್ಲರೂ ಒಂದಾಗೋಣ ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಏತನ್ಮಧ್ಯೆ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ತಾನು ಸದಾ ಸಿದ್ಧ ಎಂದು ಚೌಧರಿ ಹೇಳಿದರು. “ನಮ್ಮ ಪ್ರದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ನಮ್ಮ ಮೈತ್ರಿಕೂಟದ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಮುಂದುವರಿಯಬೇಕೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಏಳು ಸ್ಥಾನಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಆರ್‌ಎಲ್‌ಡಿ ಮುಖಂಡರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳಿವೆ. 2014ರಿಂದ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದೆ. ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಲ್‌ಡಿ ಮತ್ತು ಎಸ್‌ಪಿ ಸ್ಪರ್ಧಿಸಿದ್ದವು. ಮೈತ್ರಿಯು ಎರಡೂ ಪಕ್ಷಗಳಿಗೆ ಲಾಭದಾಯಕವಾಗಿದ್ದು, ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಮತ್ತು ಆರ್ ಎಲ್ ಡಿ 8 ಸ್ಥಾನಗಳನ್ನು ಗಳಿಸಿತ್ತು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌ಎಲ್‌ಡಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದ ಭಾಗವಾಗಿತ್ತು. ಇದು ಮಥುರಾ, ಬಾಗ್‌ಪತ್ ಮತ್ತು ಮುಜಾಫರ್ ನಗರ ಕ್ಷೇತ್ರಗಳಿಂದ ಸ್ಪರ್ಧಿಸಿದ್ದು ಎಲ್ಲಾ ಮೂರು ಸ್ಥಾನಗಳನ್ನು ಕಳೆದುಕೊಂಡಿತು. ಎಸ್‌ಪಿ ಮತ್ತು ಬಿಎಸ್‌ಪಿ ಕ್ರಮವಾಗಿ 5 ಮತ್ತು 10 ಸ್ಥಾನಗಳನ್ನು ಗೆದ್ದಿವೆ.

ಯುಪಿ, ದೆಹಲಿ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೈತ್ರಿ ಮಾಡಿಕೊಳ್ಳಲು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಪ್ರಯತ್ನಗಳ ಮಧ್ಯೆ ಮೈತ್ರಿಯ ಘೋಷಣೆ ಬಂದಿದೆ.

ಇದನ್ನೂ ಓದಿ:ದೇವನಹಳ್ಳಿ: ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ: ಏನಿದು? ಎಷ್ಟು ಕೋಟಿ ಖರ್ಚಾಗಿದೆ? ಇಲ್ಲಿದೆ ವಿವರ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರು ಈ ತಿಂಗಳ ಬಣದ ಸಭೆಯಿಂದ ಹೊರಗುಳಿದಿದ್ದರು. ಜಾಟ್ ಸಮುದಾಯದಲ್ಲಿ ಆರ್‌ಎಲ್‌ಡಿ ಬಹಳ ಜನಪ್ರಿಯವಾಗಿದ. ಜಾಟ್ ಪ್ರಾಬಲ್ಯದ ಕ್ಷೇತ್ರಗಳಾದ ಮುಜಾಫರ್‌ನಗರ, ಕಿಯಾರಾನಾ, ಬಿಜ್ನೋರ್, ಮಥುರಾ, ಬಾಗ್‌ಪತ್, ಅಮ್ರೋಹಾ ಮತ್ತು ಮೀರತ್‌ಗಳಲ್ಲಿ ಪ್ರಭಾವವನ್ನು ಹೊಂದಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಅಖಿಲೇಶ್ ಯಾದವ್ ಅವರು ರಾಷ್ಟ್ರೀಯ ರಾಜಕೀಯಕ್ಕಾಗಿ ಇಂಡಿಯಾ ಬ್ಲಾಕ್ ಎಂದು ಹೇಳಿ ಎಸ್ಪಿಗೆ ಸ್ಥಾನಗಳನ್ನು ನಿರಾಕರಿಸಿದ ನಂತರ ಕಾಂಗ್ರೆಸ್ ಜೊತೆ ಸಾರ್ವಜನಿಕ ವಾಗ್ವಾದ ನಡೆಸಿದರು. ಯಾದವ್ ಈ ಕ್ರಮವನ್ನು “ದ್ರೋಹ” ಎಂದು ಕರೆದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Fri, 19 January 24

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?