AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

Kalburagi Lok Sabha Election Results 2024: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ದತ್ತಾತ್ರೇಯ ಪಾಟೀಲ್​
| Edited By: |

Updated on:Jun 04, 2024 | 7:03 PM

Share

ಕಲಬುರಗಿ, ಜೂನ್​​ 04: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ (Kalaburgi Constituency) ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ (adhakrina Doddamani) 652321 ಮತಗಳಿಂದ ಗೆಲವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಸೋಲಿಲ್ಲದ ಸರದಾರನಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿ ಕಲಬುರಗಿ ಲೋಕ ಕ್ಷೇತ್ರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಲ್ಲಿದ್ದ ಉಮೇಶ್​ ಜಾಧವ್​ ಅವರನ್ನು ಆಪರೇಷನ್ ಕಮಲ​ ಮಾಡುವ ಮೂಲಕ ಬಿಜೆಪಿಗೆ ಕರೆತರಲಾಗಿತ್ತು. ಅಷ್ಟೇ ಅಲ್ಲದೇ ಅವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆ ಮೂಲಕ ಸತತ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಸೋಲುಂಡಿದ್ದರು.

ಇದನ್ನೂ ಓದಿ: ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡಿದ್ದರು. ಉಮೇಶ್ ಜಾಧವ್​ ಅವರು 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಒಕ್ಕಲಿಗರ ಏಕಮೇವಾದ್ವಿತೀಯ ನಾಯಕನಾಗಲು ಡಿಸಿಎಂ ಹಲ್ಕಾ ಕೆಲಸ ಮಾಡಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆದರೆ ಇದೀಗ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡುವ ಮೂಲಕ ಕಣಕ್ಕಿಳಿಸಿದ್ದರು. ಲೋಕಸಭೆ ಚುನಾವಣೆಯ ಪ್ರಚಾರ ವೇಳೆ ರಾಧಾಕೃಷ್ಣ ದೊಡ್ಡಮನಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕೆ ಮಾಡಿದ್ದು, ಈ ವೇಳೆ ನನ್ನ ಅಳಿಯ ರಾಧಾಕೃಷ್ಣ ದೊಡ್ಡಮನಿಗೆ ಮತ ಹಾಕಿ ಇಲ್ಲಾ ನಾನು ಸತ್ತ ಮೇಲೆ ಬಂದು ಮಣ್ಣು ಹಾಕಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Tue, 4 June 24

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ