AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

Kalburagi Lok Sabha Election Results 2024: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jun 04, 2024 | 7:03 PM

Share

ಕಲಬುರಗಿ, ಜೂನ್​​ 04: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ (Kalaburgi Constituency) ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ (adhakrina Doddamani) 652321 ಮತಗಳಿಂದ ಗೆಲವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಸೋಲಿಲ್ಲದ ಸರದಾರನಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿ ಕಲಬುರಗಿ ಲೋಕ ಕ್ಷೇತ್ರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಲ್ಲಿದ್ದ ಉಮೇಶ್​ ಜಾಧವ್​ ಅವರನ್ನು ಆಪರೇಷನ್ ಕಮಲ​ ಮಾಡುವ ಮೂಲಕ ಬಿಜೆಪಿಗೆ ಕರೆತರಲಾಗಿತ್ತು. ಅಷ್ಟೇ ಅಲ್ಲದೇ ಅವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆ ಮೂಲಕ ಸತತ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಸೋಲುಂಡಿದ್ದರು.

ಇದನ್ನೂ ಓದಿ: ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡಿದ್ದರು. ಉಮೇಶ್ ಜಾಧವ್​ ಅವರು 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಒಕ್ಕಲಿಗರ ಏಕಮೇವಾದ್ವಿತೀಯ ನಾಯಕನಾಗಲು ಡಿಸಿಎಂ ಹಲ್ಕಾ ಕೆಲಸ ಮಾಡಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆದರೆ ಇದೀಗ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡುವ ಮೂಲಕ ಕಣಕ್ಕಿಳಿಸಿದ್ದರು. ಲೋಕಸಭೆ ಚುನಾವಣೆಯ ಪ್ರಚಾರ ವೇಳೆ ರಾಧಾಕೃಷ್ಣ ದೊಡ್ಡಮನಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕೆ ಮಾಡಿದ್ದು, ಈ ವೇಳೆ ನನ್ನ ಅಳಿಯ ರಾಧಾಕೃಷ್ಣ ದೊಡ್ಡಮನಿಗೆ ಮತ ಹಾಕಿ ಇಲ್ಲಾ ನಾನು ಸತ್ತ ಮೇಲೆ ಬಂದು ಮಣ್ಣು ಹಾಕಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Tue, 4 June 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More