ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 04, 2024 | 7:03 PM

Kalburagi Lok Sabha Election Results 2024: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
Follow us on

ಕಲಬುರಗಿ, ಜೂನ್​​ 04: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ (Kalaburgi Constituency) ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ (adhakrina Doddamani) 652321 ಮತಗಳಿಂದ ಗೆಲವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಸೋಲಿಲ್ಲದ ಸರದಾರನಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿ ಕಲಬುರಗಿ ಲೋಕ ಕ್ಷೇತ್ರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಲ್ಲಿದ್ದ ಉಮೇಶ್​ ಜಾಧವ್​ ಅವರನ್ನು ಆಪರೇಷನ್ ಕಮಲ​ ಮಾಡುವ ಮೂಲಕ ಬಿಜೆಪಿಗೆ ಕರೆತರಲಾಗಿತ್ತು. ಅಷ್ಟೇ ಅಲ್ಲದೇ ಅವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆ ಮೂಲಕ ಸತತ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಸೋಲುಂಡಿದ್ದರು.

ಇದನ್ನೂ ಓದಿ: ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡಿದ್ದರು. ಉಮೇಶ್ ಜಾಧವ್​ ಅವರು 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಒಕ್ಕಲಿಗರ ಏಕಮೇವಾದ್ವಿತೀಯ ನಾಯಕನಾಗಲು ಡಿಸಿಎಂ ಹಲ್ಕಾ ಕೆಲಸ ಮಾಡಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆದರೆ ಇದೀಗ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡುವ ಮೂಲಕ ಕಣಕ್ಕಿಳಿಸಿದ್ದರು. ಲೋಕಸಭೆ ಚುನಾವಣೆಯ ಪ್ರಚಾರ ವೇಳೆ ರಾಧಾಕೃಷ್ಣ ದೊಡ್ಡಮನಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕೆ ಮಾಡಿದ್ದು, ಈ ವೇಳೆ ನನ್ನ ಅಳಿಯ ರಾಧಾಕೃಷ್ಣ ದೊಡ್ಡಮನಿಗೆ ಮತ ಹಾಕಿ ಇಲ್ಲಾ ನಾನು ಸತ್ತ ಮೇಲೆ ಬಂದು ಮಣ್ಣು ಹಾಕಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Tue, 4 June 24