AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರು ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ? ಇದನ್ನು ತಿಳಿಯುವುದು ಒಡಿಶಾದ ಜನರ ಹಕ್ಕು. ನವೀನ್ ಪಟ್ನಾಯಕ್ ಹೆಸರಿನಲ್ಲಿ ತೆರೆಮರೆಯಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವವರ ಲಾಬಿಯ ಕೈವಾಡ ಇದರಲ್ಲಿ ಇದೆಯೇ ಎಂಬುದು ಪ್ರಶ್ನೆ ಎಂದಿದ್ದರು ನರೇಂದ್ರ ಮೋದಿ.

ಮೋದಿಯವರು ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್
ನವೀನ್ ಪಟ್ನಾಯಕ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 29, 2024 | 8:02 PM

Share

ದೆಹಲಿ ಮೇ 29: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅವರ ಆರೋಗ್ಯದ ಮೇಲಿನ ಊಹಾಪೋಹಗಳು ಬುಧವಾರ ತೀವ್ರಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದಲ್ಲಿ ನಡೆದ ರ‍್ಯಾಲಿಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನವೀನ್ ಪಟ್ನಾಯಕ್ ಅವರ ಶೀಘ್ರವಾಗಿ ಹದಗೆಡುತ್ತಿರುವ ಆರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ ಎಂದು ಮೋದಿ ಶಂಕಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಚುನಾವಣಾ ರ‍್ಯಾಲಿಯಲ್ಲಿ ಸಿಎಂ ಆಪ್ತ ಮತ್ತು ಬಿಜೆಡಿ (BJD) ನಾಯಕ ವಿಕೆ ಪಾಂಡಿಯನ್, ನವೀನ್ ಅವರ ನಡುಗುತ್ತಿರುವ ಕೈ ಹಿಡಿದ ವಿಡಿಯೊ ವೈರಲ್ ಆಗಿದ್ದ ಬೆನ್ನಲ್ಲೇ ಮೋದಿ, ಒಡಿಶಾ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ  ನವೀನ್ ಬಾಬು ಆರೋಗ್ಯದ  ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇತ್ತೀಚಿನ ದಿನಗಳಲ್ಲಿ ನವೀನ್ ಬಾಬು ಅವರ ಎಲ್ಲಾ ಹಿತೈಷಿಗಳು ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ. ನವೀನ್ ಬಾಬು ಅವರ ಆಪ್ತರು ನನ್ನನ್ನು ಭೇಟಿಯಾದಾಗಲೆಲ್ಲಾ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ಚರ್ಚಿಸುತ್ತಾರೆ. ನವೀನ್ ಬಾಬು ಅವರು ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ, ಅವರು ಎಲ್ಲದಕ್ಕೂ ಬೇರೆಯವರ ಮೇಲೆ ಅವಲಂಬಿತರಾಗಬೇಕಾಗಿದೆ. ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಕೆಲವರ ಷಡ್ಯಂತ್ರವಿದೆ ಎಂಬ ಅನುಮಾನ ನಮಗಿದೆ ಎಂದು ಹೇಳಿದ್ದಾರೆ.

ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ? ಇದನ್ನು ತಿಳಿಯುವುದು ಒಡಿಶಾದ ಜನರ ಹಕ್ಕು. ನವೀನ್ ಪಟ್ನಾಯಕ್ ಹೆಸರಿನಲ್ಲಿ ತೆರೆಮರೆಯಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವವರ ಲಾಬಿಯ ಕೈವಾಡ ಇದರಲ್ಲಿ ಇದೆಯೇ ಎಂಬುದು ಪ್ರಶ್ನೆ. ಈ ನಿಗೂಢವನ್ನು ಬಯಲಿಗೆಳೆಯುವುದು ಮುಖ್ಯವಾದ್ದರಿಂದ ಜೂನ್ 10ರಂದು ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ನವೀನ್ ಬಾಬು ಅವರ ಆರೋಗ್ಯ ಏಕಾಏಕಿ ಹದಗೆಡಲು ಕಾರಣವೇನು ಎಂದು ತನಿಖೆ ನಡೆಸಲಿದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನವೀನ್ ಪಟ್ನಾಯಕ್, “ಅವರು (ನರೇಂದ್ರ ಮೋದಿ) ನಾನು ಅವರ ಉತ್ತಮ ಸ್ನೇಹಿತ ಎಂದು ಸಾರ್ವಜನಿಕವಾಗಿ ಹೇಳಿದ್ದರು. ಅವರು ಫೋನ್ ಕರೆ ಕರೆ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬೇಕಾಗಿತ್ತು. ಕಳೆದ 10 ವರ್ಷಗಳಿಂದ ನನ್ನ ಆರೋಗ್ಯದ ಬಗ್ಗೆ ಬಿಜೆಪಿ ವದಂತಿಗಳನ್ನು ಹಬ್ಬಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ನವೀನ್ ಪಟ್ನಾಯಕ್ ಆರೋಗ್ಯದ ತನಿಖೆಗೆ ವಿಶೇಷ ಸಮಿತಿ ರಚನೆ; ಪ್ರಧಾನಿ ಮೋದಿ

ನಾನು ಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ಪ್ರಧಾನಿಗೆ ಭರವಸೆ ನೀಡುತ್ತೇನೆ.”ನನ್ನ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ. ಇಲ್ಲದಿದ್ದರೆ, ಈ ಬಿಸಿಲಿನ ನಡುವೆ ನಾನು ಪ್ರಚಾರ ಮಾಡಲು ಸಾಧ್ಯವಿಲ್ಲ” ಎಂದು ಎಂದು ಒಡಿಶಾ ಮುಖ್ಯಮಂತ್ರಿ ಹೇಳಿದ್ದಾರೆ.

ಒಡಿಶಾದಲ್ಲಿ ಮೇ 13 ರಿಂದ ಜೂನ್ 1 ರವರೆಗೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. 77 ವರ್ಷ ವಯಸ್ಸಿನ ನವೀನ್ ಪಟ್ನಾಯಕ್ ಅವರು ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ದೇಶದಲ್ಲೇ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿಯಾಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Wed, 29 May 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ