AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿಯಲ್ಲಿ ಮೋದಿ ವಿರುದ್ಧ ಇಂಡಿಯಾ ಬಣದಿಂದ ಚುನಾವಣಾ ಕಣಕ್ಕಿಳಿಯುವವರು ಯಾರು?

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿಯಲು ಇಂಡಿಯಾ ಬಣ ಎರಡು ಹೆಸರುಗಳನ್ನು ಪ್ರಸ್ತಾಪಿಸಿದೆ. ಮೂಲಗಳ ಪ್ರಕಾರ - ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಪ್ರಸ್ತಾಪ ಆಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ

ವಾರಣಾಸಿಯಲ್ಲಿ ಮೋದಿ ವಿರುದ್ಧ ಇಂಡಿಯಾ ಬಣದಿಂದ ಚುನಾವಣಾ ಕಣಕ್ಕಿಳಿಯುವವರು ಯಾರು?
ಪ್ರಿಯಾಂಕಾ- ನಿತೀಶ್- ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:Dec 20, 2023 | 7:42 PM

ದೆಹಲಿ ಡಿಸೆಂಬರ್ 20: ಉತ್ತರ ಪ್ರದೇಶದ ವಾರಣಾಸಿಯ (Varanasi) ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸ್ಪರ್ಧಿಸಲು ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ (INDIA Bloc) ಲೆಕ್ಕಾಚಾರ ನಡೆಸುತ್ತಿದೆ. ವಾರಣಾಸಿಯು 1991 ರಿಂದ (2004 ಹೊರತುಪಡಿಸಿ) ಪ್ರತಿ ಚುನಾವಣೆಯಲ್ಲೂ ಬಿಜೆಪಿಗೆ ಮತ ಹಾಕಿದೆ. 2014 ಮತ್ತು 2019 ರಲ್ಲಿ ಮೋದಿಯನ್ನು ಲೋಕಸಭೆಗೆ ಕಳುಹಿಸಿದೆ. ರಡನೇ ಬಾರಿಗೆ ಶೇಕಡಾ 60 ಕ್ಕಿಂತ ಹೆಚ್ಚಿನ ಜನಾದೇಶದೊಂದಿಗೆ ಮೋದಿ ಇಲ್ಲಿ ಗೆದ್ದಿದ್ದರು.

ಕಾಂಗ್ರೆಸ್ 1952 ರಿಂದ ಒಂದು ದಶಕದ ಕಾಲ ವಾರಣಾಸಿಯಲ್ಲಿ ಅಧಿಪತ್ಯ ಸ್ಥಾಪಿಸಿತ್ತು. ಇದೀಗ ಇಂಡಿಯಾ ಬಣವು ಪ್ರಧಾನ ಮಂತ್ರಿಯ ಹಿಡಿತದಿಂದ ಸ್ಥಾನವನ್ನು ಕಸಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಚಿಂತಿಸುತ್ತಿದೆ. ಅಂದ ಹಾಗೆ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿಯಲು ಇಂಡಿಯಾ ಬಣ ಎರಡು ಹೆಸರುಗಳನ್ನು ಪ್ರಸ್ತಾಪಿಸಿದೆ. ಮೂಲಗಳ ಪ್ರಕಾರ – ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಇಲ್ಲಿ ಪ್ರಸ್ತಾಪ ಆಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ನಿತೀಶ್ ಕುಮಾರ್

ನಿತೀಶ್ ಕುಮಾರ್ ಅವರು ಬಿಜೆಪಿಯ ಒಂದು ಕಾಲದ ಮಿತ್ರರಾಗಿದ್ದಾರೆ (ಮತ್ತು ಈಗ ಅದರ ತೀವ್ರ ಪ್ರತಿಸ್ಪರ್ಧಿಗಳಲ್ಲಿ ಒಬ್ಬರು) ಮತ್ತು ಬಣದ ಸ್ಥಾಪಕ ನಾಯಕರಲ್ಲಿ ಒಬ್ಬರು. ಅವರು ಸಂಭಾವ್ಯ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದರೂ ಅವರು ಅದನ್ನು ನಿರಾಕರಿಸಿದ್ದಾರೆ. 2014 ರ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಅವರು ಆ ಪಾತ್ರಕ್ಕಾಗಿ ಮಾತನಾಡಿದ್ದರು.

ಈ ವಾರದ ಆರಂಭದಲ್ಲಿ ಆ ಪಾತ್ರದಲ್ಲಿ ಅವರನ್ನು ಬೆಂಬಲಿಸುವ ಪೋಸ್ಟರ್‌ಗಳು ಇಂಡಿಯಾ ಸಭೆಯ ಮೊದಲು ಪಾಟ್ನಾದಲ್ಲಿ ಕಂಡುಬಂದವು. ಜೆಡಿಯು ಪೋಸ್ಟರ್‌ಗಳಿಗೆ ಯಾವುದೇ ಸಂಬಂಧವನ್ನು ನಿರಾಕರಿಸಿತು ಆದರೆ ಪಕ್ಷದ ವಕ್ತಾರ ನೀರಜ್ ಕುಮಾರ್ ಇಂಡಿಯಾ ಬಣ ಮೇಲೆ ಒತ್ತಡ ಹೇರುತ್ತಿರುವಂತೆ ತೋರುತ್ತಿದೆ, “ಇದರಿಂದ ರಾಜಕೀಯ ಅರ್ಥವನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿಯಾಗಬೇಕು ಎಂಬ ಪ್ರಸ್ತಾಪ ಕೇಳಿಬಂದಿದ್ದರೂ,ಅದನ್ನು ತಳ್ಳಿಹಾಕಿದ ಖರ್ಗೆ ಚುನಾವಣೆಯಲ್ಲಿ ಗೆಲ್ಲುವತ್ತ ಗಮನಹರಿಸಬೇಕು ಎಂದು ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ

ಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಅವರು 2019 ರಲ್ಲಿ ಅವರು ಸ್ಪರ್ಧಿಸುತ್ತಾರೆ. ಎಂಬ ಊಹಾಪೋಹಗಳಿದ್ದವು. ವಾರಣಾಸಿಯಲ್ಲಿ ಪ್ರಧಾನ ಮಂತ್ರಿ ವಿರುದ್ಧ ಅವರು ಕಣಕ್ಕಿಳಿಯಲಿದ್ದಾರೆ ಎಂದು ವದಂತಿ ಹಬ್ಬಿದ್ದು, ಕಾಂಗ್ರೆಸ್ ಅಲ್ಲಿ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿತು, ಅವರು ಮೂರನೇ ಸ್ಥಾನ ಗಳಿಸಿದರು.  ನಾಲ್ಕು ವರ್ಷಗಳ ಹಿಂದೆ, ಪಕ್ಷವು ನಿರ್ಧರಿಸಿದಾಗಲೆಲ್ಲಾ ಚುನಾವಣೆಗೆ ಪಾದಾರ್ಪಣೆ ಮಾಡಲು ಸಿದ್ಧ ಎಂದು ಹೇಳಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸುತ್ತೀರಾ ಎಂದು ಕೇಳಿದಾಗ “ಯಾಕೆ ಇಲ್ಲ” ಎಂದು ವ್ಯಂಗ್ಯವಾಡಿದ್ದರು.

ಈ ಬಾರಿ, ವರದಿಗಳ ಪ್ರಕಾರ, ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಮಮತಾ ಖರ್ಗೆ ಅವರನ್ನು ಭಾರತದ ಪ್ರಧಾನಿ ಅಭ್ಯರ್ಥಿಯಾಗಿ ಸೂಚಿಸಿದ್ದಾರೆ. ಈ ವರ್ಷದ ಆರಂಭದಲ್ಲಿಯೂ ಪ್ರಿಯಾಂಕಾ ಗಾಂಧಿ ವಾದ್ರಾ ವಾರಣಾಸಿಯಿಂದ ಕಣಕ್ಕಿಳಿಯುತ್ತಾರೆಂಬ ಸುದ್ದಿ ಇತ್ತು. ಹಾಗೆ ಮಾಡಿದರೆ ತಮ್ಮ ಸಹೋದ್ಯೋಗಿ ಗೆಲ್ಲುತ್ತಾರೆ ಎಂದು ನಿರೀಕ್ಷೆ ಇದೆ ಎಂದು ಶಿವಸೇನಾ (ಠಾಕ್ರೆ ಬಣ) ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿದ್ದರು.

ಇದನ್ನೂ ಓದಿ: ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ; ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ

ಅರವಿಂದ್ ಕೇಜ್ರಿವಾಲ್?

ಇಂಡಿಯಾ ಬಣದ ಮೂರನೇ ಆಯ್ಕೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಗಿರಬಹುದು. ದೆಹಲಿ ಮುಖ್ಯಮಂತ್ರಿ 2014ರಲ್ಲಿ ವಾರಣಾಸಿಯಲ್ಲಿ ಪ್ರಧಾನಿಯ ವಿರುದ್ಧ ಸ್ಪರ್ಧಿಸಿದ್ದಾರೆ. ಆ ಚುನಾವಣೆಯಲ್ಲ ಕೇಜ್ರಿವಾಲ್ ಎರಡು ಲಕ್ಷ ಮತಗಳನ್ನು ಮತ್ತು ಸುಮಾರು 20 ಪ್ರತಿಶತದಷ್ಟು ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದರು. ಪ್ರಧಾನ ಮಂತ್ರಿಯ ವಿರುದ್ಧ ಯಾರು ಸ್ಪರ್ಧಿಸಿದರೂ ಇಂಡಿಯಾ ಸಾಮಾನ್ಯ ಅಭ್ಯರ್ಥಿಯನ್ನು ಒಪ್ಪಿಕೊಳ್ಳಬಹುದು ಎಂದು ಭಾವಿಸಿದರೆ ಅದು ಕಷ್ಟದ ವಿಷಯವೇ ಆಗಿದೆ. ಕಳೆದ ತಿಂಗಳು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಗೆದ್ದ ನಂತರ ಬಿಜೆಪಿಯ ಅಸಾಧಾರಣ ಚುನಾವಣಾ ತಂತ್ರ ಏನು ಎಂಬುದು ಸಾಬೀತಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Wed, 20 December 23

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ