AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಅವರನ್ನು ತಿಹಾರ್ ಜೈಲಿಗೆ ಹಾಕಲಾಗಿತ್ತು. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡುಗಡೆಯಾಗಿದ್ದಾರೆ. ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ
ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: May 25, 2024 | 7:56 PM

Share

ಜಲಂಧರ್: ಆಮ್ ಆದ್ಮಿ ಪಕ್ಷದ (Aam Aadmi Party) ನಾಯಕರು “ಡ್ರಗ್‌ನ ಹೋಲ್​ಸೇಲ್ ವ್ಯಾಪಾರಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆರೋಪಿಸಿದ್ದಾರೆ. ಕಾಂಗ್ರೆಸ್ 1984ರಲ್ಲಿ ಸಿಖ್ಖರ ಹತ್ಯಾಕಾಂಡಕ್ಕೆ ಅವಕಾಶ ಮಾಡಿಕೊಟ್ಟಿತು ಮತ್ತು ಗಲಭೆಕೋರರನ್ನು ರಕ್ಷಿಸಿತು ಎಂದು ಅವರು ಟೀಕಿಸಿದ್ದಾರೆ. ಪಂಜಾಬ್‌ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಮೋದಿ, ಜಲಂಧರ್ ಮತ್ತು ಗುರುದಾಸ್‌ಪುರದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಚುನಾವಣಾ ಪ್ರಚಾರದ ವೇಳೆ ಮತ್ತೊಮ್ಮೆ ಸಿಎಂ ಭಗವಂತ್ ಮಾನ್ ಅವರನ್ನು ‘ಕಾಗ್ಜಿ ಮುಖ್ಯಮಂತ್ರಿ’ ಎಂದು ಮೋದಿ ಟೀಕಿಸಿದ್ದಾರೆ. ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಂದ ಆದೇಶವನ್ನು ಪಡೆಯಲು ದೆಹಲಿಯ ತಿಹಾರ್ ಜೈಲಿಗೆ ಹೋಗಬೇಕಾಯಿತು ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: PM Modi: ಹಿಮಾಚಲ ಪ್ರದೇಶದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದ ಪ್ರಧಾನಿ ನರೇಂದ್ರ ಮೋದಿ

“ಎಎಪಿ 2 ತಿಂಗಳಲ್ಲಿ ಡ್ರಗ್ಸ್ ವ್ಯಾಪಾರವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿತ್ತು, ಆದರೆ, ಇಂದು ಪಂಜಾಬ್‌ನಲ್ಲಿ ಡ್ರಗ್ ಡೀಲರ್‌ಗಳಿಗೆ ಉಚಿತ ಪರವಾನಗಿ ನೀಡಲಾಗಿದೆ. ಇದರಿಂದ ಹಲವು ಕುಟುಂಬಗಳು ನಾಶವಾಗುತ್ತಿವೆ” ಎಂದು ಜಲಂಧರ್‌ನಲ್ಲಿ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಆಪಾದಿತ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಮೋದಿ ಅವರು, “ಇಷ್ಟು ದೊಡ್ಡ ಮದ್ಯದ ಹಗರಣವನ್ನು ಮಾಡಿದವರು ಡ್ರಗ್ಸ್ ಮಾಫಿಯಾದಲ್ಲಿ ಕೂಡ ಭಾಗಿಯಾಗಿರಬಹುದು. ಪಂಜಾಬ್‌ನ ಜನರು ಆಮ್ ಆದ್ಮಿ ಪಕ್ಷದ ನಾಯಕರು ಸ್ವತಃ ಡ್ರಗ್‌ಗಳ ಹೋಲ್​ಸೇಲ್ ವ್ಯಾಪಾರಿಗಳು ಎಂದು ಅರ್ಥಮಾಡಿಕೊಂಡಿದ್ದಾರೆ. ಪಂಜಾಬ್ ಗಡಿ ರಾಜ್ಯವಾಗಿದ್ದು, ಅದನ್ನು ಮತ್ತೆ ಬಿಕ್ಕಟ್ಟಿಗೆ ಬೀಳಲು ಬಿಡಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ತಾರೆ: ಶಿವರಾಜ ತಂಗಡಗಿ ಲೇವಡಿ

ಇದಕ್ಕೂ ಮೊದಲು ಗುರುದಾಸ್‌ಪುರದಲ್ಲಿ ಮೋದಿ ಅವರು, “ಕೇಜ್ರಿವಾಲ್ ದೆಹಲಿಯಿಂದಲೇ ರಿಮೋಟ್ ಕಂಟ್ರೋಲ್‌ನಲ್ಲಿ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಸ್ವಂತವಾಗಿ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರ ಮಾಲೀಕ ಜೈಲಿನಲ್ಲಿದ್ದುದರಿಂದ ಪಂಜಾಬ್ ಸರ್ಕಾರವು ಸ್ಥಗಿತಗೊಂಡಿತು. ಆದೇಶವನ್ನು ಸ್ವೀಕರಿಸಲು ಮತ್ತು ಸರ್ಕಾರವನ್ನು ನಡೆಸಲು ಮುಖ್ಯಮಂತ್ರಿ ಕೂಡ ತಿಹಾರ್ ಜೈಲಿಗೆ ಹೋಗಿ ಕೇಜ್ರಿವಾಲ್​ಗೆ ತಮ್ಮ ವರದಿ ಕಾರ್ಡ್ ನೀಡಬೇಕಾಗಿತ್ತು ಎಂದು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು