AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಬ್ಯಾಂಕ್ ಓಲೈಸಲು ಸನ್ಯಾಸಿಗಳ ಮೇಲೆ ಟಿಎಂಸಿ ದಾಳಿ ನಡೆಸುತ್ತಿದೆ: ಮೋದಿ

ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಆಶ್ರಮದ ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ ಮೋದಿ.

ವೋಟ್ ಬ್ಯಾಂಕ್ ಓಲೈಸಲು ಸನ್ಯಾಸಿಗಳ ಮೇಲೆ ಟಿಎಂಸಿ ದಾಳಿ ನಡೆಸುತ್ತಿದೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 20, 2024 | 7:56 PM

Share

ಝಾರ್‌ಗ್ರಾಮ್‌ (ಪಶ್ಚಿಮ ಬಂಗಾಳ) ಮೇ 20: ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ನಲ್ಲಿ ತಮ್ಮ ಲೋಕಸಭಾ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತವು ‘ವೋಟ್ ಬ್ಯಾಂಕ್ ರಾಜಕೀಯವನ್ನು ಓಲೈಸಲು ಸನ್ಯಾಸಿಗಳ ಮೇಲೆ ದಾಳಿ ನಡೆಸಲು ಬಿಡುತ್ತಿದೆ’ ಎಂದು ಆರೋಪಿಸಿದರು. ಅದೇ ವೇಳೆ “ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್‌ನ ಆಶ್ರಮದ ಮೇಲೆ ದಾಳಿ ಮಾಡುವ ಧೈರ್ಯ ತೋರಿಸುತ್ತಿದ್ದಾರೆ” ಎಂದು ಪ್ರಧಾನಿ ಹೇಳಿದರು.

“ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಆಶ್ರಮದ ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ ಮೋದಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಸನ್ಯಾಸಿಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ಮಾಡಿದ ಹೇಳಿಕೆಯನ್ನು ಟೀಕಿಸಿದ ಪ್ರಧಾನಿ, ಈ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಿಗೆ ಟಿಎಂಸಿಯ ವೋಟ್ ಬ್ಯಾಂಕ್ ಅನ್ನು “ಸಮಾಧಾನಪಡಿಸಲು” ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.

ಮೋದಿ ಭಾಷಣ

ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘ ಸೇವೆ ಮತ್ತು ನೈತಿಕತೆಗೆ ಹೆಸರಾಗಿದೆ, ಆದರೆ ಇಂದು ಬಂಗಾಳದ ಮುಖ್ಯಮಂತ್ರಿ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ವೋಟ್ ಬ್ಯಾಂಕ್ ಓಲೈಕೆಗಾಗಿ ಈ ರೀತಿ ಮಾಡಲಾಗುತ್ತಿದೆ. ಸ್ವತಃ ಸಿಎಂ ಸನ್ಯಾಸಿಗಳಿಗೆ ಬೆದರಿಕೆ ಹಾಕುತ್ತಿರುವುದರಿಂದ ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್ ಮೇಲೆ ದಾಳಿ ಮಾಡಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಕೆಲವು ಸನ್ಯಾಸಿಗಳು ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಚುನಾವಣಾ ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿಯೇ ಹೇಳಿದ್ದಾರೆ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ರಾಮಕೃಷ್ಣ ಮಿಷನ್‌ನ ಕೆಲವು ಸನ್ಯಾಸಿಗಳು ಬಿಜೆಪಿ ಪರವಾಗಿ ಮತ ಹಾಕುವಂತೆ ಅಸನ್ಸೋಲ್‌ನಲ್ಲಿ ಭಕ್ತರನ್ನು ಕೇಳಿದ್ದಾರೆ ಎಂದು ಅವರು ಆರೋಪಿಸಿದ್ದರು. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘಗಳೆರಡೂ ಆರೋಪಗಳನ್ನು ತಳ್ಳಿಹಾಕಿದ್ದು ನಾವು ಸಮಾಜ ಸೇವೆಯತ್ತ ಮಾತ್ರ ಗಮನಹರಿಸುತ್ತವೆ ಎಂದು ಹೇಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Mon, 20 May 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್