AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದಲ್ಲಿ ಬಿಹಾರಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ; 3 ಚುನಾವಣಾ ರ್ಯಾಲಿಗಳಲ್ಲಿ ಭಾಷಣ

ಲೋಕಸಭಾ ಚುನಾವಣೆಯ ಕೊನೆಯ ಕೆಲವು ಹಂತಗಳು ಮಾತ್ರ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಗೆಲುವಿಗಾಗಿ ರಾಜಕೀಯ ಪಕ್ಷಗಳು ಅಂತಿಮ ಕಸರತ್ತು ನಡೆಸುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 25ರಂದು ಮತ್ತೆ ಬಿಹಾರದಲ್ಲಿ ಮೂರು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಾರಾಂತ್ಯದಲ್ಲಿ ಬಿಹಾರಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ; 3 ಚುನಾವಣಾ ರ್ಯಾಲಿಗಳಲ್ಲಿ ಭಾಷಣ
ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on:May 22, 2024 | 7:24 PM

Share

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೇ 25ರಂದು ಬಿಹಾರದಲ್ಲಿ ಮತ್ತೆ ಮೂರು ಚುನಾವಣಾ ರ್ಯಾಲಿಗಳನ್ನು (Lok Sabha Election Rally) ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೋದಿಯವರ ರ್ಯಾಲಿಗಳ ಒಟ್ಟು ಸಂಖ್ಯೆ 15ಕ್ಕೆ ಏರಿಕೆಯಾಗಲಿದೆ.

ಮಂಗಳವಾರ ಮಹಾರಾಜ್‌ಗಂಜ್ ಮತ್ತು ಸಿವಾನ್‌ನಲ್ಲಿ ನಡೆದ 2 ಚುನಾವಣಾ ಸಭೆಗಳಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಇಂಡಿಯಾ ಬ್ಲಾಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ವಾರಾಂತ್ಯದಲ್ಲಿ ಮತ್ತೆ 3 ರ್ಯಾಲಿಗಳನ್ನು ಉದ್ದೇಶಿಸಿ ಬಿಹಾರದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Elections: 2024ರಲ್ಲಿ ಮಾತ್ರವಲ್ಲ 2029ರಲ್ಲೂ ಮೋದಿಯೇ ಭಾರತದ ಪ್ರಧಾನಿ: ರಾಜನಾಥ್​ ಸಿಂಗ್

ಜೂನ್ 1ರಂದು ಕೊನೆಯ ಹಂತದಲ್ಲಿ ಪಾಟಲಿಪುತ್ರ ಚುನಾವಣೆ ನಡೆಯಲಿದೆ. ಪಾಟಲಿಪುತ್ರ, ಬಕ್ಸರ್ ಮತ್ತು ಕರಕತ್‌ನಲ್ಲಿ ಪ್ರಧಾನಿ ಮೋದಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಿಎಂ ಮೋದಿ ಅವರು ಬಿಜೆಪಿ ಮತ್ತು ಅದರ ಮೈತ್ರಿ ಪಾಲುದಾರರ ಪರವಾಗಿ ಪಟ್ಟುಬಿಡದೆ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Wed, 22 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ