Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ಆಪ್ ಜೊತೆ ಹೊಂದಾಣಿಕೆ; ಹೈಕಮಾಂಡ್ ಮುಂದೆ ಅಸಹಾಯಕವಾದ ಪಂಜಾಬ್ ಕಾಂಗ್ರೆಸ್

ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು 6-7 ಸೂತ್ರದ ಮೇಲೆ ಮುಂಬರುವ ಲೋಕಸಭಾ ಚುನಾವಣೆ ಎದುರಿಸಬಹುದು ಎನ್ನಲಾಗಿದೆ. ಇದು ಪಂಜಾಬ್​ ಕಾಂಗ್ರೆಸ್​ಗೆ ನುಂಗಲಾರದ ತುತ್ತಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಆಪ್ ಜೊತೆ ಹೊಂದಾಣಿಕೆ; ಹೈಕಮಾಂಡ್ ಮುಂದೆ ಅಸಹಾಯಕವಾದ ಪಂಜಾಬ್ ಕಾಂಗ್ರೆಸ್
ಪಂಜಾಬ್ ಕಾಂಗ್ರೆಸ್ ನಾಯಕರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 04, 2023 | 1:49 PM

ನವದೆಹಲಿ: ಭಾರತದಲ್ಲಿ ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ (Lok Sabha Elections 2024) ನಡೆಯಲಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಆದರೆ, ಕೇಂದ್ರ ಸರ್ಕಾರ ಆ ರೀತಿಯ ಯಾವ ಯೋಚನೆಯೂ ಇಲ್ಲ ಎಂಬ ಸ್ಪಷ್ಟನೆ ನೀಡಿತ್ತು. ಇದರ ನಡುವೆ, ಕಾಂಗ್ರೆಸ್ ಹೈಕಮಾಂಡ್ ಎದುರು ಪಂಜಾಬ್ ಕಾಂಗ್ರೆಸ್ (Punjab Congress) ಸಂಪೂರ್ಣ ಅಸಹಾಯಕವಾಗಿಬಿಟ್ಟಿದೆ. ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂಬ ಸೂಚನೆಯನ್ನು ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ ರಾಜ್ಯದ ಕಾಂಗ್ರೆಸ್ ನಾಯಕರಿಗೆ ನೀಡಿದೆ. ಆದರೆ, ಪಂಜಾಬ್ ಕಾಂಗ್ರೆಸ್ ನಾಯಕರಿಗೆ ಆಮ್ ಆದ್ಮಿ ಪಕ್ಷದೊಂದಿಗಿನ (AAP) ಮೈತ್ರಿ ಇಷ್ಟವಿಲ್ಲ. ಹೀಗಾಗಿ, ಪ್ರತಾಪ್ ಸಿಂಗ್ ಬಾಜ್ವಾ ಆಪ್​ನೊಂದಿಗೆ ಕಾಂಗ್ರೆಸ್​ ಮೈತ್ರಿಗೆ ಹೆಚ್ಚು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಅದಕ್ಕೆ ಬಗ್ಗಿಲ್ಲ. ಇದೀಗ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು 6-7 ಸೂತ್ರದ ಮೇಲೆ ಮುಂಬರುವ ಲೋಕಸಭಾ ಚುನಾವಣೆ ಎದುರಿಸಬಹುದು ಎನ್ನಲಾಗಿದೆ.

ಇಂಡಿಯನ್ ನ್ಯಾಷನಲ್ ಡೆವಲಪ್​ಮೆಂಟ್ ಇನ್​ಕ್ಲೂಸಿವ್ ಅಲಯನ್ಸ್​ (ಇಂಡಿಯಾ) 2 ಸುತ್ತಿನ ಸಭೆಗಳ ನಂತರ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಒಟ್ಟಾಗಿ ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆ ಎದುರಿಸಲಿವೆ ಎಂಬುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಪಂಜಾಬ್ ನಾಯಕರಿಗೆ ಈ ಕುರಿತು ಸೂಚನೆ ನೀಡಿದೆ. ಇದು ಪಂಜಾಬ್​ ಕಾಂಗ್ರೆಸ್​ಗೆ ನುಂಗಲಾರದ ತುತ್ತಾಗಿದೆ.

ಪಂಜಾಬ್ ಕಾಂಗ್ರೆಸ್ ನಾಯಕರು ಆಮ್ ಆದ್ಮಿ ಪಕ್ಷದೊಂದಿಗಿನ ಮೈತ್ರಿಯನ್ನು ವಿರೋಧಿಸಿದ್ದಾರೆ. ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಇದಕ್ಕೆ ಹೆಚ್ಚು ವಿರೋಧ ವ್ಯಕ್ತಪಡಿಸಿದ್ದರು. ಆಮ್ ಆದ್ಮಿ ಪಕ್ಷದ ನಾಯಕರ ಮುಖವನ್ನೂ ನೋಡಲು ಬಯಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ವೇದಿಕೆಯಿಂದಲೇ ಹೇಳಿದ್ದರು. ಆದರೆ, ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಪಂಜಾಬ್​​ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕಾಗುತ್ತದೆ: ಸಿಎಂ ಭಗವಂತ್ ಮಾನ್​​ಗೆ ರಾಜ್ಯಪಾಲರ ಎಚ್ಚರಿಕೆ 

ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಬೇಡಿ ಎಂದು ರಾಜಾ ವಾರಿಂಗ್ ಧ್ವನಿ ಎತ್ತಿದ್ದರು. ನಂತರ ಹೈಕಮಾಂಡ್ ವರ್ತನೆ ಕಂಡು ಅವರೂ ಸುಮ್ಮನಾಗಿದ್ದರು. ಆದರೆ, ಪ್ರತಾಪ್ ಸಿಂಗ್ ಬಾಜ್ವಾ ಇದನ್ನು ನಿರಂತರವಾಗಿ ವಿರೋಧಿಸುತ್ತಿದ್ದರು. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿದ್ದು ಮಾತ್ರವಲ್ಲದೆ ಪಂಜಾಬ್ ಮತ್ತು ದೆಹಲಿಯ ಕಾಂಗ್ರೆಸ್ ನಾಯಕರ ವಿರೋಧವನ್ನೂ ಕಡೆಗಣಿಸಿದೆ. ಇದರಿಂದ ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗಿನ ಒಪ್ಪಂದವನ್ನು ವಿರೋಧಿಸಿದ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಲಾಗಿತ್ತು. ಅನಿಲ್ ಚೌಧರಿ ಅವರನ್ನು ತೆಗೆದುಹಾಕಿ, ಅರವಿಂದರ್ ಸಿಂಗ್ ಲವ್ಲಿಗೆ ರಾಜ್ಯದ ಅಧಿಕಾರವನ್ನು ಹಸ್ತಾಂತರಿಸಲಾಗಿತ್ತು. ದೆಹಲಿಯಲ್ಲಿ ಕೈಗೊಂಡ ಕ್ರಮವು ಪಂಜಾಬ್‌ನ ನಾಯಕರಿಗೆ ಎಚ್ಚರಿಕೆಯ ಸಂಕೇತವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಅಸಾಧ್ಯ: ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ರಾಹುಲ್ ಗಾಂಧಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಳ್ಳುವ ಸೂಚನೆ ನೀಡಿದ್ದಾರೆ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎಂದಿದ್ದಾರೆ. ದೆಹಲಿ ಸುಗ್ರೀವಾಜ್ಞೆಗೆ ನಾವು ಕಾಂಗ್ರೆಸ್‌ನಿಂದ ಬೆಂಬಲ ಕೋರಿದ್ದೇವೆ, ಅದು ನಮಗೆ ಸಿಕ್ಕಿದೆ. ರಾಜ್ಯಸಭೆಯ ಇತಿಹಾಸದಲ್ಲಿ ಪ್ರತಿಪಕ್ಷಗಳು ಮಸೂದೆಯೊಂದರ ವಿರುದ್ಧ 100ಕ್ಕೂ ಹೆಚ್ಚು ಮತಗಳನ್ನು ಪಡೆದಿರುವುದು ಇದೇ ಮೊದಲು. 2024ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ 6 ಸ್ಥಾನಗಳಲ್ಲಿ ಮತ್ತು ಆಮ್ ಆದ್ಮಿ ಪಕ್ಷ 7 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎಂದು ನಂಬಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ